ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನಲ್ಲಿ ಹೊಳೇಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಒಂದು ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮೂರು ಪಾಸಿಟಿವ್ ಪ್ರಕರಣ ಸೇರಿದಂತೆ ಶುಕ್ರವಾರ ನಾಲ್ಕುಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಕಡದಕಟ್ಟೆ
ಕಡದಕಟ್ಟೆಯಲ್ಲಿ ಬೆಂಗಳೂರಿನಿಂದ ಬಂದಂತಹ 28 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಮನೆಯಲ್ಲಿರುವ ಈತನ ತಂದೆ ತಾಯಿಗಳನ್ನೂ ಸಹ ಆರೋಗ್ಯ ತಪಾಸಣೆ ಮಾಡಿ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ವಿಶ್ವೇಶ್ವರನಗರ
ವಿಶ್ವೇಶ್ವರನಗರದಲ್ಲಿ 21 ವರ್ಷ ಮತ್ತು 24 ವರ್ಷದ ಇಬ್ಬರು ಮಹಿಳೆಯರಲ್ಲಿ ಕೊರೋನಾ ಪಾಸಿಟಿವ್ ಧೃಢಪಟ್ಟಿದ್ದು ಇವರೂ ಸಹ ಬೆಂಗಳೂರಿಗೆ ಹೋಗಿ ಬಂದವರಾಗಿದ್ದಾರೆ. ಈ ಎಲ್ಲಾ ಸೋಂಕಿತರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಶೂಶ್ರುಷಾ ಕೇಂದ್ರಕ್ಕೆ ಕಳುಹಿಸಲಾಯಿತು. ಇವರ ವಾಸದ ಮನೆಯ ಬೀದಿಯ ನೂರು ಮೀಟರ್ ಸುತ್ತಳತೆಯ ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ.
ಹೊಳೆಹೊನ್ನೂರು
ಉತ್ತರಪ್ರದೇಶದಿಂದ ಹೊಳೆಹೊನ್ನೂರಿನ ನಗರವ್ಯಾಪ್ತಿಯ ಹೊರಗಿರುವ ರಬ್ಬಾನಿ ರೈಸ್ ಮಿಲ್ಗೆ ಕೆಲಸಕ್ಕೆ ಬಂದಿದ್ದ 21 ವರ್ಷದ ಓರ್ವ ಯುವಕನಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
Get In Touch With Us info@kalpa.news Whatsapp: 9481252093
Discussion about this post