ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದಲ್ಲಿ ಗುರುವಾರ ಆರು ಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಹಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಗಾಂಧೀನಗರದ 60 ವರ್ಷದ ವೃದ್ಧನಲ್ಲಿ ಪಾಸಿಟಿವ್ ಕಾಣಿಸಿದ್ದು, ಈತ ಬೆಂಗಳೂರಿನಿಂದ ಬಂದಿದ್ದಾರೆ ಎನ್ನಲಾಗಿದೆ.
ಹೊಸಮನೆಯ ಹಿಂದೂಮಹಾಸಭಾ ಗಣಪತಿ ದೇವಲಯದ ಸಮೀಪ ಕಳೆದ 10 ದಿನಗಳ ಹಿಂದೆ ಪತ್ತೆಯಾಗಿದ್ದ ಪಾಸಿಟಿವ್ ಪ್ರಕರಣದ ಕೆಎಸ್ಆರ್ಟಿಸಿ ಬಸ್ ಚಾಲಕನ ತಂದೆ(70) ತಾಯಿ(65) ಗಳಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕಡದಕಟ್ಟೆ ಬಳಿ ನಲವತ್ತು ವರ್ಷದ ಓರ್ವ ಪುರುಷನಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ವಾರ ವಿಶ್ವೇಶ್ವರ ನಗರದಲ್ಲಿ ಬೆಂಗಳೂರಿನಿಂದ ಬಂದಿದ್ದ ಇಬ್ಬರು ಸಹೋದರಿಯರಲ್ಲಿ ಕಾಣಿಸಿಕೊಂಡಿದ್ದ ಪಾಸಿಟಿವ್ ಪ್ರಕರಣದ ಸಂಬಂಧ ಹೊಂದಿರುವ ಅದೇ ಮನೆಯ 49 ವರ್ಷ ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಸೋಂಕು ಇರುವುದು ಧೃಢಪಟ್ಟಿದೆ.
ಹಳೇನಗರದ ಬಸವೇಶ್ವರ ಸರ್ಕಲ್ ಸಮೀಪದ ಮಾರುಕಟ್ಟೆಯ ಸನಿಹದ ತಿರುವಿನಲ್ಲಿರುವ ಬೆತ್ತದ ಬುಟ್ಟಿ ಹೆಣೆಯುವ 27 ವರ್ಷದ ಯುವಕನಲ್ಲಿ ಪಾಸಿಟಿವ್ ಕಾಣಿಸಿಕೊಳ್ಳುವ ಮೂಲಕ ಗುರುವಾರ ಸಂಜೆ ವೇಳೆಗೆ ಆರು ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದೆ.
ಈ ಎಲ್ಲಾ ಸ್ಥಳಕ್ಕೆ ತಹಶೀಲ್ದಾರ್ ಶಿವಕುಮಾರ್, ನಗರಸಭಾ ಆಯುಕ್ತ ಮನೋಹರ್, ಪರಿಸರ ಇಂಜನಿಯರ್ ರುದ್ರೇಗೌಡ, ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ಗಾಯತ್ರಿ, ಆರೋಗ್ಯ ಇಲಾಖೆ ಮುಖ್ಯಸಿಬ್ಬಂದಿ ನೀಲೇಶ್ ರಾಜ್ ಹಾಗೂ ಪೋಲಿಸ್ ಅಧಿಕಾರಿಗಳು ತೆರಳಿ ಸದರಿ ಸೋಂಕಿತರ ನಿವಾಸದ ಪ್ರದೇಶದ ನೂರು ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೀಲ್ ಡೌನ್ ಮಾಡಿ, ಆರು ಜನ ಸೋಂಕಿತರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post