ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಾಲಕ್ಕೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಸೂಚಿಸಿದರು.
ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್19 ವೈರಸ್ ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನೆಡೆಸಿ ಅವರು ಮಾತನಾಡಿದರು.
ಕಂಟೈನ್ಮೆಂಟ್ ಝೋನ್’ಗಳ ನಿವಾಸಿಗಳಿಗೆ ವಿದ್ಯುತ್ ಬಿಲ್’ಗಳನ್ನು ನಿಗದಿತ ಸಮಯಕ್ಕೆ ತಲುಪಿಸದಿರುವುದರಿಂದ ನಾಗರೀಕರಿಗೆ ಸಮಸ್ಯೆಯಾಗುತ್ತಿದೆ. ವಿಳಂಬವಾಗದಂತೆ ಸರಿಯಾದ ಸಮಯಯಕ್ಕೆ ಬಿಲ್ ನೀಡುವಂತೆ, ಗ್ರಾ.ಪಂ ಮಟ್ಟದ ಕಾರ್ಯಪಡೆಯವರು ಬೇರೆ ಜಿಲ್ಲೆಗಳಿಂದ ಆಗಮಿಸುವವರ ಬಗ್ಗೆ ನಿಗವಹಿಸಬೇಕು.
ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯ ನಿವಾಸಿಗಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ಪೌರಾಯುಕ್ತರು, ಸಿಪಿಐ, ಇಒ, ಟಿಎಚ್’ಒ, ಟಿ.ಡಿ. ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post