Thursday, August 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಉಡುಪಿ ಜಿಲ್ಲಾಸ್ಪತ್ರೆಯ ಖಾಸಗೀಕರಣಕ್ಕೆ ತೀವ್ರ ವಿರೋಧ.

September 2, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಉಡುಪಿ: ಸೆ:2: ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಮತ್ತು ಸರ್ಕಾರದ ನಿರ್ಧಾರದ ವಿರುದ್ಧ ಹೋರಾಟಕ್ಕೂ ವೇದಿಕೆ ಸಿದ್ಧವಾಗುತ್ತಿದೆ.

ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ಉಡುಪಿ ಮೂಲದ ಅಬುದಾಬಿಯ ಉದ್ಯಮಿ ಬಿ.ಆರ್.ಶೆಟ್ಟಿ ಅವರಿಗೆ ೩೦ ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದರಂತೆ ಉಡುಪಿಯ ಹೃದಯ ಭಾಗ (ಹಿಂದಿನ ಮೂಡನಿಡಂಬೂರು ಗ್ರಾಮ)ದಲ್ಲಿರುವ ಸರ್ಕಾರಿ ಆಸ್ಪತ್ರೆಯ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ಮತ್ತು ಸುಮಾರು ೨ ಎಕ್ರೆ ಭೂಮಿಯನ್ನು ಬಿ.ಆರ್.ಶೆಟ್ಟಿ ವೆಂಚರ್ಸ್ ಪೈ.ಲಿ.ಗೆ ಹಸ್ತಾಂತರಿಸಲಾಗುತ್ತಿದೆ.
ಇದರಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ಕೆಡವಿ, ಸುಮಾರು ೨೦೦ ಕೋಟಿ ರು. ವೆಚ್ಚದಲ್ಲಿ ೪೦೦ ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಬಿ.ಆರ್.ಶೆಟ್ಟಿ ನಿರ್ಮಿಸಲಿದ್ದಾರೆ. ೩೦ ವರ್ಷಗಳ ಕಾಲ ಈ ಆಸ್ಪತ್ರೆಯನ್ನು ಅವರೇ ನಡೆಸಿ, ನಂತರ ಸರ್ಕಾರಕ್ಕೆ ಹಸ್ತಾಂತರಿಸಲಿದ್ದಾರೆ.
ಆದರೇ ಸರ್ಕಾರಿ ಆಸ್ಪತ್ರೆ ಇರುವುದು ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡುವುದಕ್ಕೆ, ಅಂತಹ ಆಸ್ಪತ್ರೆಯನ್ನು ಕೆಡವಿ, ಖಾಸಗಿಯವರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಕ್ಕೆ ಅವಕಾಶ ನೀಡಿದರೇ ಬಡವರು ಎಲ್ಲಿಗೆ ಹೋಗಬೇಕು, ಉದ್ಯಮಿಗಳಿಗೆ ಲಾಭ ಮಾಡಿಕೊಡುವುಕ್ಕಾಗಿ ಖುದ್ದು ಸರ್ಕಾರವೇ ಬಡವರಿಗೆ ಅನ್ಯಾಯ ಮಾಡುವುದು ಸರಿಯೇ ಎಂಬ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.
೨೦೦ ಕೋಟಿ ರು.ಗಳ ಬಂಡವಾಳ ಹೂಡಿ ಅದನ್ನು ಲಾಭ ಸಹಿತ ಕೇವಲ ೩೦ ವರ್ಷಗಳಲ್ಲಿ ಹಿಂದಕ್ಕೆ ಪಡೆಯಬೇಕಾಗಿರುವ ಈ ಆಸ್ಪತ್ರೆ ಎಂಬ ಉದ್ಯಮದಲ್ಲಿ ಬಡವರಿಗೆ ಉಚಿತ ಆರೋಗ್ಯ ಸೇವೆಯನ್ನಂತೂ ನಿರೀಕ್ಷಿಸುವುದು ಸಾಧ್ಯವಿಲ್ಲ. ಅದರಲ್ಲೂ ಈ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಹೊಂದಿರುವುದರಿಂದ ಅಲ್ಲಿನ ಆರೋಗ್ಯ ಸೇವೆ ಶ್ರೀಮಂತರಿಗಷ್ಟೇ ಕೈಗೆಟುಕಬಹುದೇ ಹೊರತು, ಬಡವರಿಗೆ ಬಿಡಿ ಮಧ್ಯಮ ವರ್ಗಕ್ಕೂ ಕಷ್ಟಸಾಧ್ಯವಾದೀತು.
ರಾಜಕೀಯ ವಿರೋಧ ಇಲ್ಲ
ಜಿಲ್ಲಾಸ್ಪತ್ರೆಯಲ್ಲಿ ಅನೇಕ ವರ್ಷ ಕಾಲ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಅವರು ಜಿಲ್ಲಾಸ್ಪತ್ರೆಯ ಖಾಸಗೀಕರಣದ ವಿರುದ್ಧ ಬರೆದ ಪತ್ರವನ್ನು ಈಗಾಗಲೇ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳಹಿಸಿರುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ವಿರುದ್ಧ ಉಡುಪಿಯ ಕಾಂಗ್ರೆಸ್ ನಾಯಕರು ಮಾತನಾಡುವುದನ್ನು ನಿರೀಕ್ಷಿಸುವಂತಿಲ್ಲ, ಬಿ.ಆರ್.ಶೆಟ್ಟಿ ಅವರು ಬಿ.ಜೆ.ಪಿ.ಗೂ ಆತ್ಮೀಯರಾಗಿರುವುದರಿಂದ ಬಿ.ಜೆ.ಪಿ.ಯನಾಯಕರು ಮಾತನಾಡುತ್ತಿಲ್ಲ.
 ಪ್ರತಿಭಟನೆಗೆ ಸಿದ್ದತೆ
ಆದರೇ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಉಡುಪಿಯ ಪ್ರಜ್ಞಾವಂತ ನಾಗರಿಕರಿಂದ ಸರ್ಕಾರದ ಈ ನಿರ್ಧಾರದ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳ ಅಧಿಕೃತ ಇಮೈಲ್ ವಿಳಾಸಕ್ಕೆ ಪತ್ರಗಳನ್ನು ಬರೆಯುವ ಅಭಿಯಾನ ಆರಂಭವಾಗಿದೆ.
WhatsApp Image 2016-09-01 at 9.32.34 AM
ಒಂದೆರಡು ದಿನಗಳಲ್ಲಿ ಸಮಾನಮನಸ್ಕರು ಸಭೆ ಸೇರಿ, ಜಿಲ್ಲಾಸ್ಪತ್ರೆಯ ಖಾಸಗೀಕರಣದಿಂದ ಜನಸಾಮಾನ್ಯರಿಗೆ ಆಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸುವ, ಪ್ರತಿಭಟನೆ ನಡೆಸುವುದಕ್ಕೂ ನಿರ್ಧರಿಸಲಾಗಿದೆ.
ಸಂಶಯಾಸ್ಪದ ನಡೆ
ಉಡುಪಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಲ್ಲ, ಆದ್ದರಿಂದ ಸರ್ಕಾರಿ ಆಸ್ಪತ್ರೆಯ ಭೂಮಿಯಲ್ಲಿ ಖಾಸಗಿಯವರಿಗೆ ಸೂಪ್ರ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ… ಎಂದು ಸರ್ಕಾರ ತನ್ನ ಸಂಪುಟ ಸಭೆಯ ಪ್ರಸ್ತಾಪದಲ್ಲಿ ಹೇಳಿದೆ, ಆದರೇ ಉಡುಪಿ ನಗರದಲ್ಲಿಯೇ ಹೈಟೆಕ್ ಚಿಕಿತ್ಸೆ ನೀಡುವ ಹತ್ತಾರು ಆಸ್ಪತ್ರೆಗಳಿವೆ, ಉಡುಪಿಯಿಂದ ಕೇವಲ ೫ ಕಿಮಿ ದೂರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸೂಪರ್ ಸ್ಪೆಷಾಲಿಟಿ ಕಸ್ತೂರ್ಬಾ ಆಸ್ಪತ್ರೆ ಇದೆ.
 ಇನ್ನೊಂದು ಕಾರಣ ವೈದ್ಯಕೀಯ ಕಾಲೇಜು ಇಲ್ಲ ಎನ್ನುವುದು, ಇದು ಕೂಡ ಹಾಸ್ಯಾಸ್ಪದ, ಯಾಕೆಂದರೇ ವಿಶ್ವಮಾನ್ಯತೆ ಪಡೆದಿರುವ ಮಣಿಪಾಲ ವಿ.ವಿ. ಉಡುಪಿಯಿಂದ ಕೇವಲ ೫ ಕಿ.ಮಿ. ದೂರದಲ್ಲಿದೆ.
ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪಷಾಲಿಟಿ ಮಟ್ಟಕ್ಕೇರಿಸಲು ಸರ್ಕಾರದ ಬಳಿ ಹಣ ಇಲ್ಲ ಎಂದು ಖುದ್ದು ಸರ್ಕಾರವೇ ಸಂಪುಟ ಸಭೆಯ ಪ್ರಸ್ತಾಪದಲ್ಲಿ ಒಪ್ಪಿಕೊಂಡಿದೆ. ಆದರೇ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣಕ್ಕೆ ಕೊರತೆ ಇಲ್ಲ ಎಂದು ಸರ್ಕಾರ ಪದೇ ಪದೇ ಸುಳ್ಳು ಹೇಳುತ್ತಿದೆಯೇ ಎಂಬ ಸಂಶಯಕ್ಕೂ ಕಾರಣವಾಗುತ್ತಿದೆ.
ರಾಯಚೂರಿಲ್ಲಿ ವಿಫಲ  
ಸರ್ಕಾರಿ ಆಸ್ಪತ್ರೆಗಳಿಂದ ಜನರಿಗೆ ಉತ್ತಮ ಸೇವೆ ನೀಡುವಂತೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದರೇ ಅವುಗಳನ್ನು ಖಾಸಗೀಯವರಿಗೆ ನೀಡಬೇಕಾಗಿಲ್ಲ, ಸರ್ಕಾರವೇ ಮಾಡಬಹುದಾಗಿದೆ. ಶಿವಮೊಗ್ಗದ ಮೆಗ್ಗಾನ್, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗಳೇ ಉತ್ತಮ ಉದಾಹರಣೆಗಳಾಗಿವೆ.
  ಅಲ್ಲದೇ ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿಯವರಿಗೆ ನೀಡಿ, ಅದು ವಿಫಲವಾಗಿ ಈಗ ಸರ್ಕಾರವೇ ಹಿಂದಕ್ಕೆ ಪೆಡದುಕೊಂಡು ನಷ್ಟದಲ್ಲಿ ನಡೆಸುತ್ತಿರುವ ಉದಾಹರಣೆಯೇ ಕಣ್ಣ ಮುಂದೆ ಇದೆ. ಜಿಲ್ಲಾಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದರಿಂದ ಬಡವರಿಗೆ ನೇರವಾಗಿ ಅನ್ಯಾಯವಾಗುತ್ತದೆ ಎನ್ನುತ್ತಾರೆ ಜಿಲ್ಲಾಸ್ಪತ್ರೆಯ ಖಾಸಗೀಕರಣದ ವಿರುದ್ಧ ಬಲವಾಗಿ ಧ್ವನಿ ಎತ್ತುತ್ತಿರುವ ಡಾ.ಪಿ.ವಿ.ಭಂಡಾರಿ.
Previous Post

ಹಿಂದೂ ಜಾಗರಣ ವೇದಿಕೆ ಯುವಕರಿಂದ ಸಾಮಾಜಿಕ ಕಳಕಳಿ ಕಾರ್ಯಕ್ರಮ

Next Post

ಸಿಂಗಾಪುರದಲ್ಲಿ 13 ಭಾರತೀಯರಿಗೆ ಡೇಂಜರಸ್ ಝೀಕಾ ವೈರಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಂಗಾಪುರದಲ್ಲಿ 13 ಭಾರತೀಯರಿಗೆ ಡೇಂಜರಸ್ ಝೀಕಾ ವೈರಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Vande Bharat Express between Bengaluru-Belagavi from August 10th

August 7, 2025

ಆಗಸ್ಟ್ 10ರಿಂದ ಬೆಂಗಳೂರು-ಬೆಳಗಾವಿ ವಂದೇಭಾರತ್ ರೈಲು ಆರಂಭ | ಟೈಮಿಂಗ್ಸ್ ಏನು?

August 7, 2025

ಅಮೃತಕ್ಕೂ ಮಿಗಿಲಾಗಿರುವ ಎದೆಹಾಲು ಮಕ್ಕಳಿಗೆ ಅತ್ಯವಶ್ಯ: ಡಾ. ಯತೀಶ್

August 7, 2025
File Image

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

August 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Vande Bharat Express between Bengaluru-Belagavi from August 10th

August 7, 2025

ಆಗಸ್ಟ್ 10ರಿಂದ ಬೆಂಗಳೂರು-ಬೆಳಗಾವಿ ವಂದೇಭಾರತ್ ರೈಲು ಆರಂಭ | ಟೈಮಿಂಗ್ಸ್ ಏನು?

August 7, 2025

ಅಮೃತಕ್ಕೂ ಮಿಗಿಲಾಗಿರುವ ಎದೆಹಾಲು ಮಕ್ಕಳಿಗೆ ಅತ್ಯವಶ್ಯ: ಡಾ. ಯತೀಶ್

August 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!