Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ನೀರಸ

September 2, 2016
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ, ಸೆ.2: ಕನಿಷ್ಟ ವೇತನ, ಪಿಂಚಣಿ ವ್ಯವಸ್ಥೆ, ರಸ್ತೆ ಸುರಕ್ಷತಾ ಮಸೂದೆ ವಾಪಾಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್‌ಗೆ ಇಂದು ಕರೆ ನೀಡಿದ್ದರೂ, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 10 ಕಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗುವ ನಿರೀಕ್ಷೆ ಇತ್ತಾದರೂ, ಬಂದ್ ಪರಿಣಾಮ ಜನರಿಗೆ ತಟ್ಟಿದಂತೆ ಅನಿಸಲಿಲ್ಲ. ಮುಂಜಾನೆಯಿಂದಲೇ ಕೆಲವು ಕಾರ್ಮಿಕ ಸಂಘಟನೆಗಳು ಬೀದಿಗಿಳಿದು ತಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಸರ್ಕಾರವನ್ನು ಆಗ್ರಹಿಸಿದವು.
ಇನ್ನುಳಿದಂತೆ ನಗರದ ಪ್ರಮುಖ ವಹಿವಾಟು ರಸ್ತೆಗಳಾದ ದುರ್ಗಿಗುಡಿ ಮತ್ತು ಗಾಂಧಿ ಬಜಾರ್‌ನಲ್ಲಿ ಕೆಲವು ಅಂಗಡಿ ಮಾಲಕರು ಅಂಗಡಿಯನ್ನು ಮುಚ್ಚಿದ್ದರೆ, ಇನ್ನೂ ಕೆಲವರು ನಿಧಾನವಾಗಿ ವಹಿವಾಟು ಆರಂಭಿಸುತ್ತಿದ್ದರು. ಕೆಲವು ಸಂಘಟನೆಗಳು ಬಲವಂತವಾಗಿ ಗಾಂಧಿಬಜಾರ್‌ನಲ್ಲಿ ಅಂಗಡಿಗಳನ್ನು ಮುಚ್ಚಿಸಲು ಪ್ರಯತ್ನಿಸಿತಾದರೂ ಪೊಲೀಸರ ಮನವೊಲಿಕೆಯಿಂದ ಅವರು ಹಿಂತಿರುಗಬೇಕಾಯಿತು.
ಜಿಲ್ಲೆಯ ಹೊರಭಾಗಕ್ಕೆ ತೆರಳುವ ಕೆಲವು ಖಾಸಗಿ ಬಸ್ಸುಗಳು ತಮ್ಮ ಸೇವೆಯನ್ನು ಕೆಲವುಕಾಲ ಸ್ಥಗಿತಗೊಳಿಸಿದ್ದರಾದರೂ ನಂತರ ಪ್ರಾರಂಭಿಸಿದರು. ಆದರೆ ಬಸ್ ನಿಲ್ದಾಣದಲ್ಲಿ ಜನಸಂಖ್ಯೆ ಅತಿ ವಿರಳವಾಗಿತ್ತು. ಇನ್ನು ಕೆಎಸ್‌ಆರ್‌ಟಿಸಿ ಬಸ್ ಬೆಳಿಗ್ಗೆ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರೆ ಮಧ್ಯಾಹ್ನದ ನಂತರ ಎಂದಿನಂತೆ ಓಡಾಟ ನಡೆಸಿದವು. ಆಟೋಗಳು ವಿರಳವಾಗಿದ್ದವು.
ಶಾಲಾಕಾಲೇಜುಗಳಿಗೆ ಜಿಲ್ಲಾಡಳಿತ ರಜೆಯನ್ನು ಘೋಷಿಸಿರಲಿಲ್ಲವಾದರೂ ತಮ್ಮ ಅಗತ್ಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿತ್ತು. ಆದರೆ, ಎಂದಿನಂತೆ ನಗರದಲ್ಲಿ ಶಾಲಾಕಾಲೇಜುಗಳು ತೆರೆದಿದ್ದವು. ಅಂಬುಲೆನ್ಸ್, ಔಷಧ ಮಾರಾಟ ಮಳಿಗೆಗಳು, ಪೆಟ್ರೋಲ್ ಬಂಕ್‌ಗಳು, ಚಿತ್ರಮಂದಿರಗಳು ತೆರೆದಿದ್ದವು. ವ್ಯಾಪಾರ ವಹಿವಾಟಿಗೆ ಯಾವುದೇ ಅಡಚಣೆ ಉಂಟಾಗಲಿಲ್ಲ.
ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಕೈಗಾರಿಕಾ ಪ್ರದೇಶದ ಕಾರ್ಮಿಕರುಗಳು, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಕಾರ್ಮಿಕರಿಗೂ ನಿಗದಿತ ಕನಿಷ್ಟ ನಿವೃತ್ತಿ ವೇತನ ೩ ಸಾವಿರ ರೂ. ನೀಡಬೇಕು, ಕೇಂದ್ರ ಮತ್ತು ರಾಜ್ಯದ ಸಾರ್ವಜನಿಕ ಸಾಮ್ಯದ ಕೈಗಾರಿಕೆಗಳಲ್ಲಿ ಬಂಡವಾಳ ಹಿಂತೆಗೆತದ ಕ್ರಮಗಳನ್ನು ನಿಲ್ಲಿಸಬೇಕು, ಬೋನಸ್, ಭವಿಷ್ಯ ನಿಧಿ ಮಿತಿ ಹೆಚ್ಚಳ ಮಾಡಬೇಕು, ಮೂಲ ಕಾರ್ಮಿಕರ ಕಾನೂನುಗಳನ್ನು ಯಾವುದೇ ವಿನಾಯಿತಿ ಇಲ್ಲದೇ ಕಟ್ಟುನಿಟ್ಟಾಗಿ ಪಾಲಿಸಬೇಕು, ಕಾರ್ಮಿಕ ಕಾನೂನುಗಳಿಗೆ ಕಾರ್ಮಿಕ ವಿರೋಧಿ ತಿದ್ದುಪಡಿಗೊಳಿಸಬಾರದು, ರಸ್ತೆ ಸುರಕ್ಷತಾ ಮಸೂದೆ ಕೈಬಿಡಬೇಕು, ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಗೆ ನೂರಾರು ಆಗಮಿಸಿದ್ದ ಜನರಿಂದ ಜಿಲ್ಲಾಧಿಕಾರಿ ಕಚೇರಿ ಸರ್‌ಎಂವಿ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಸುಮಾರು ೧ ಗಂಟೆಗೂ ಹೆಚ್ಚುಕಾಲ ನಡೆದ ಪ್ರತಿಭಟನೆಯಿಂದ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಬೇಕಾಯಿತು. ಒಟ್ಟಿನಲ್ಲಿ ನಗರದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ಜೋರಾಗಿತ್ತು.

cit
ಏನಿತ್ತು?
ಆಂಬುಲೆನ್ಸ್, ಆಸ್ಪತ್ರೆ, ಔಷಧ ಮಾರಾಟ ಮಳಿಗೆ, ಪೆಟ್ರೋಲ್ ಬಂಕ್, ಹೊಟೇಲ್, ಚಿತ್ರಮಂದಿರ, ಟ್ಯಾಕ್ಸಿ ಸೇವೆ, ಅಂಗಡಿ ಮುಂಗಟ್ಟು.

ಏನಿರಲಿಲ್ಲ?
ರಾಷ್ಟ್ರೀಕೃತ ಬ್ಯಾಂಕ್, ಕೆಎಸ್‌ಆರ್‌ಟಿಸಿ ಬಸ್, ಎಪಿಎಂಸಿ ಮಾರುಕಟ್ಟೆ, ಆಟೋ, ಕೆಲವು ಖಾಸಗಿ ಬಸ್‌ಗಳು.

ind CMEEE1111111

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದರ ಸುಲಿಗೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳು ತನ್ನ ಸೇವೆ ಸ್ಥಗಿತಗೊಳಿಸಿತ್ತಾದರೂ ಕೆಲವೊಂದು ಕಡೆ ಸಂಚಾರ ಎಂದಿನಂತೆ ಇತ್ತು. ಆಯನೂರಿನಿಂದ ಶಿವಮೊಗ್ಗಕ್ಕೆ ಬರಲು ಕೆಎಸ್‌ಆರ್‌ಟಿಸಿ ಬಸ್ಸುಗಳು ಇತ್ತಾದರೂ ಅದಕ್ಕೆ ಎಂದಿಗಿಂತ ದುಪ್ಪಟ್ಟು ಹಣವನ್ನು ವಸೂಲು ಮಾಡಿದ್ದಾರೆ ಎಂಬ ದೂರು ಬಂದಿದೆ. ಆಯನೂರಿನಿಂದ ಶಿವಮೊಗ್ಗಕ್ಕೆ ಬರಲು ೧೯ ರೂ. ದರ ನಿಗದಿಯಾಗಿದ್ದರೂ ಇಂದು ಪ್ರಯಾಣಿಕರಿಂದ ೩೫ ರೂ. ವಸೂಲು ಮಾಡಲಾಯಿತು ಮತ್ತು ಟಿಕೆಟ್ ಸಹಾ ನೀಡಲಿಲ್ಲ ಎಂಬ ದೂರು ಪ್ರಯಾಣಿಕರಿಂದ ಕೇಳಿ ಬಂದಿದೆ. ಇನ್ನೊಂದು ಕಡೆ ಕೆಎಸ್‌ಆರ್‌ಟಿಸಿ ಸಂಚಾರ ವಿರಳವಾಗಿತ್ತಾದರೂ ಮಾನವೀಯತೆ ಮೆರೆದ ಟ್ಯಾಕ್ಸಿ ಚಾಲಕರು ಎಂದಿನಂತೆ ಹಣವನ್ನು ಪ್ರಯಾಣಿಕರಿಂದ ಪಡೆದರು.
ಒಂದೆಡೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕೆಲವು ನಿರ್ವಾಹಕರು ಟಿಕೇಟ್ ನೀಡದೇ ಹೆಚ್ಚಿನ ದರ ವಸೂಲಿ ಮಾಡಿದ್ದರೆ, ಇನ್ನೊಂದೆಡೆ ಟ್ಯಾಕ್ಸಿ ಚಾಲಕರು ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಬಂದ್‌ನಿಂದಾಗಿ ಭದ್ರಾವತಿಯಿಂದ ಶಿವಮೊಗ್ಗ ಮಾರ್ಗದಲ್ಲಿ ಸರ್ಕಾರಿ ಬಸ್ ಸಂಚಾರ ಇಲ್ಲದೇ ಪ್ರಯಾಣೀಕರು ಪರದಾಡುತ್ತಿದ್ದರು. ಆದರೆ, ಈ ಮಾರ್ಗದ ಟ್ಯಾಕ್ಸಿ ಚಾಲಕರು ಎಂದಿನಂತೆ ತಮ್ಮ ನಿಗದಿತ ದರವನ್ನು ಪ್ರಯಾಣಿಕರಿಂದ ಪಡೆದದ್ದು ವಿಶೇಷವಾಗಿತ್ತು.
ಬೆಲೆ ಏರಿಕೆ ನಿಯಂತ್ರಿಸಿ ಸಾರ್ವತ್ರಿಕ, ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಜಾರಿ ಮಾಡಬೇಕು, ನಿರುದ್ಯೋಗ ತಡೆಗಟ್ಟಿ ಉದ್ಯೋಗ ಸೃಷ್ಟಿಸುವ ಕ್ರಮ ಕೈಗೊಳ್ಳಬೇಕು, ಕಾರ್ಮಿಕರ ಕನಿಷ್ಟ ವೇತನ ೧೮ ಸಾವಿರ ರೂ. ರಾಷ್ಟ್ರವ್ಯಾಪಿ ಜಾರಿಯಾಗಬೇಕು, ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಬೇಕು, ಸಾರ್ವಜನಿಕ ಉದ್ದಿಮೆಗಳಲ್ಲಿ ಖಾಸಗೀಕರಣ ಮತ್ತು ವಿದೇಶಿ ನೇರ ಬಂಡವಾಳ ತರಬಾರದು ಎನ್ನುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.

Previous Post

11 ದಿನಗಳ ದಸರಾ ಆಚರಣೆಗೆ ಸಿದ್ಧತೆ

Next Post

ಸಾರ್ವಜನಿಕ ಗಣೇಶಮೂರ್ತಿಗೆ ಬಹುಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾರ್ವಜನಿಕ ಗಣೇಶಮೂರ್ತಿಗೆ ಬಹುಮಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!