ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಒಂದು ವರ್ಷದಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಈ ಕುರಿತಂತೆ ಮಾತನಾಡಿದ ಅವರು, ಸರ್ಕಾರವು ಅಸ್ತಿತ್ವಕ್ಕೆ ಬಂದ ಒಂದು ವರ್ಷದಲ್ಲಿ ಜನಸಾಮಾನ್ಯರ ನೆರವಿಗೆ ಸರ್ಕಾರ ಧಾವಿಸಿ, ಅವರ ಸಂಕಷ್ಟಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ ಅಲ್ಲದೇ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಮುಂದಾಗಿದೆ ಎಂದರು.
ಕಳೆದ ಒಂದು ಸಾಲಿನಲ್ಲಿ ಸಮರೋಪಾಧಿಯಲ್ಲಿ ಜಿಲ್ಲೆಯಲ್ಲಿ ಅಸಂಖ್ಯಾತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ವಿಶೇಷವಾಗಿ ರಸ್ತೆ, ನೀರಾವರಿ, ಸೇತುವೆ, ಕೈಗಾರಿಕೆ, ಪ್ರವಾಸೋದ್ಯಮ ಮುಂತಾದವ ಅನೇಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಅಗತ್ಯ ಆರ್ಥಿಕ ನೆರವನ್ನು ಒದಗಿಸಿ ಸಹಕರಿಸಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದೀಜಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
Get In Touch With Us info@kalpa.news Whatsapp: 9481252093
Discussion about this post