No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವ ಅವಸರ ಇಲ್ಲ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2020
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡ 36ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವರ ವೆಬಿನಾರ್ ಸಂವಾದ
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ವಿವಿಧ ಸರ್ಕಾರೇತರ 36ಕ್ಕೂ ಹೆಚ್ಚು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ ವೆಬಿನಾರ್‌ನಲ್ಲಿ ಇಂತಹ ಪರಿಸ್ಥಿತಿಯಲ್ಲಿ ಯಾವ ರೀತಿಯಲ್ಲಿ ಮಕ್ಕಳ ಕಲಿಕೆಯ ನಿರಂತರತೆಗೆ ಮಾಡಬಹುದಾದ ಮತ್ತು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಾವು ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಆಲಿಸಿದ ಸಚಿವರು ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದೆರಗಿರುವುದರಿಂದ ಆ ನಿಟ್ಟಿನಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದರು.

ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಅವರು ಹೇಳಿದರು.

ಈ ಎಲ್ಲ ಸಾಮೂಹಿಕವಾದ ಪ್ರಯತ್ನಗಳು ಗಟ್ಟಿ ರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ, ಗ್ರಾಮ್ಸ್ , ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋರ್ತ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯೆ ಫೌಂಡೇಷನ್, ಲೆಂಡ್ ಎ ಹ್ಯಾಂಡ್ ಇಂಡಿಯಾ, ವೈಟ್‌ಫೀಲ್ಡ್ ರೆಡಿ ಸಮೃದ್ಧಿ ಟ್ರಸ್ಟ್‌, ಇಂಡಿಯನ್ ಲಿಟ್ರೆಸಿ ಪ್ರಾಕ್ಟ್‌, ಬಿಜಿವಿಎಸ್, ಎಸ್‌ಟಿಐಆರ್, ಏಕ್ ಸ್ಟೆಪ್-ದೀಕ್ಷಾ, ರೂಂ ಟು ರೀಡ್ ಇಂಡಿಯಾ ಟ್ರಸ್ಟ್‌, ಗ್ರಾಮ್, ಐ.ಎಲ್.ಪಿ. ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂವಾದದಲ್ಲಿ ಭಾಗವಹಿಸಿದ ಎಲ್ಲ ಸಂಸ್ಥೆಗಳ ಹಿತದೃಷ್ಟಿಯೂ ನಮ್ಮ ಮಕ್ಕಳೇ ಪ್ರಮುಖವಾಗಿದ್ದರಿಂದ ಅವರನ್ನು ಈ ಪರಿಸ್ಥಿತಿಯಲ್ಲಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ರೀತಿಯ ಸಾಧ್ಯತೆಗಳನ್ನು ಕ್ರೋಢೀಕರಿಸಿಕೊಂಡು ಅವಕಾಶವಾಗುವ ಯಾವುದೇ ಸೌಲಭ್ಯದ ಮೂಲಕವಾಗಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಸಂವಾದದಲ್ಲಿ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ಶಿಕ್ಷಣ ತಜ್ಞರಾದ ಎಂ.ಕೆ. ಶ್ರೀಧರ್, ಡಾ. ಗುರುರಾಜ ಖರ್ಜಗಿ, ಡಾ. ವಿ.ಪಿ. ನಿರಂಜನಾರಾಧ್ಯ, ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಭಾಗವಹಿಸಿದ್ದರು.

ಸಂವಾದದಲ್ಲಿ ವ್ಯಕ್ತವಾದ ಅಭಿಪ್ರಾಯಗಳು ಕೆಳಕಂಡಂತಿವೆ:

  • ಯೂ-ಟ್ಯೂಬ್, ವಾಟ್ಸಪ್ ಸೇರಿದಂತೆ ಯಾವುದರ ಮೂಲಕವೇ ಆದರೂ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳು ಹೆಚ್ಚು ದಿನ ಐಡಲ್ ಆಗಿ ಇರುವಂತಾಗಬಾರದು. ನೇರ ಪ್ರಸಾರ, ರೆಕಾರ್ಡೆಡ್ ಪಾಠದ ಮಾದರಿಯ ತರಗತಿಗಳೂ ಆಗಬಹುದು.
  • ಶಾಲೆಗಳ ಗ್ರಂಥಾಲಯಕ್ಕೆ ದಿನಬಿಟ್ಟು ದಿನ ಮಕ್ಕಳು ಬಂದು ಪಾಠ ಪಡೆದು ಅದನ್ನು ಓದಿ ಮತ್ತೊಂದು ದಿನ ಬಂದು ಅದನ್ನು ಒಪ್ಪಿಸುವುದು. ಈ ಹಂತದಲ್ಲಿ ಸಿಲೆಬಸ್ ಮುಖ್ಯವಲ್ಲ, ಕಲಿಕೆಯ ಅಂತರವನ್ನು ನಿವಾರಿಸುವುದು ಮುಖ್ಯವಾಗಬೇಕು. ಅದಕ್ಕಾಗಿ ಪಠ್ಯೇತರ ಚಟುವಟಿಕೆಗಳೇ ಆದರೂ ಸರಿ. ಅವುಗಳನ್ನೇ ಕಲಿಸುವ ಪ್ರಯತ್ನ ನಡೆಯಬೇಕು.
  • ಪ್ರಸ್ತುತ ಶೈಕ್ಷಣಿಕ ವರ್ಷ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಪಠ್ಯದ ಕುರಿತು ಒಂದು ಹೈಬ್ರಿಡ್ ಪ್ಲಾನ್ ಮಾಡಿ ಮಕ್ಕಳನ್ನು ತಲುಪುವುದೊಳಿತು. ಸಮುದಾಯ ಆಧಾರಿತ ಕೇಂದ್ರಗಳು, ನೆರೆಹೊರೆ ಮಕ್ಕಳ ಗುಂಪು, ಗ್ರಾಮದಲ್ಲಿರುವ ಶಿಕ್ಷಕರು, ಶಿಕ್ಷಕ ಪದವೀಧರರು, ಶಿಕ್ಷಕ ತರಬೇತಿ ಪಡೆದವರು, ಸ್ವಯಂ ಸೇವಕರನ್ನು ಈ ಹಂತದಲ್ಲಿ ಬಳಸಿಕೊಳ್ಳಬೇಕು.
  • ಇಂತಹ ಪ್ರಯತ್ನ ಜಾರಿಯಲ್ಲಿ ಆಯಾ ಗ್ರಾಮ ಪಂಚಾಯ್ತಿ ಸದಸ್ಯರು, ಅಧಿಕಾರಿಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಹೆಜ್ಜೆ ಇಡಬೇಕು.
  • ಕೋವಿಡ್ ಒಂದು ಅವಕಾಶವೆಂದು ಪರಿಗಣಿಸಿ ಆ ಸಮಯದಲ್ಲಿ ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೇ ಇತರೆ ಚಟುವಟಿಕೆಗಳಲ್ಲಿ ತೊಡಗಿಸಲು ಮುಂದಾಗಬೇಕು.
  • ತಂತ್ರಜ್ಞಾನಾಧಾರಿತ ಶಿಕ್ಷಣ ನೀಡುವಾಗ ಅದು ಮಕ್ಕಳಿಗೆ ಸಮರ್ಪಕಾಗಿ ತಲುಪುತ್ತಿದೆಯೇ ಇಲ್ಲವೇ ಎಂಬ ಬಗ್ಗೆ ಮಾನಿಟರ್ ಮಾಡುವ ವ್ಯವಸ್ಥೆ ಸಹ ಮುಖ್ಯವಾಗುತ್ತದೆ.
  • ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳು ಆರಂಭಿಸುವ ಸಾಧ್ಯತೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಆಧಾರದಲ್ಲಿ ವಿಕೇಂದ್ರೀಕರಣಗೊಳಿಸಿ ಮಕ್ಕಳ ಹಿತದೃಷ್ಟಿಯಿಂದ ಪರ್ಯಾಯ ಕಲಿಕಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು.
  • ತಜ್ಞರ ಅಭಿಪ್ರಾಯಗಳೇನೇ ಇರಲಿ, ಒಟ್ಟಾರೆ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಕಲಿಕಾ ಚಟುವಟಿಕೆಗಳನ್ನು ಆರಂಭಿಸುವುದು ಒಳ್ಳೆಯದು.
  • ಮಕ್ಕಳು ಶೈಕ್ಷಣಿಕ ಚಟವಟಿಕೆಯಿಂದ ಹೆಚ್ಚು ದಿನಗಳು ವಿಮುಖವಾಗುವುದು ಅಷ್ಟು ಉಚಿತವಲ್ಲವಾದ್ದಾರಿಂದ ಯಾವುದಾದರೂ ರೀತಿಯಿಂದ ಅವರಿಗೆ ತರಗತಿಗಳು ತಲುಪುವಂತಾಗಬೇಕು. ಕೊರೋನಾ ಪರಿಸ್ಥಿತಿ ತಿಳಿಗೊಳ್ಳುವುದು ತಡವಾಗಬಹುದಾದರೂ ಶಾಲೆಗಳು ಇಲ್ಲವೇ ಕಲಿಕೆ ಒಮ್ಮೆ ಶುರುವಾದರೆ ಸಮಸ್ಯೆಗಳು ಒಂದು ಹಂತಕ್ಕೆ ಪರಿಹಾರ ದೊರೆಯಬಹುದು.
  • ಪ್ರಯತ್ನಗಳತ್ತಲೇ ನಾವು ಚಿಂತಿಸುತ್ತಾ ಕೂರುವ ಬದಲು ಅವುಗಳನ್ನು ಜಾರಿಗೆ ತಂದು ಮಕ್ಕಳನ್ನು ತಲುಪುವುದಕ್ಕೆ ಮೊದಲ ಆದ್ಯತೆ ನೀಡಬೇಕಾದ ಅಗತ್ಯ ಹೆಚ್ಚಾಗಿದೆ.
  • ಆಯಾ ಪರಿಸ್ಥಿತಿಯಲ್ಲಿ ಲಭ್ಯವಿರುವ ಯಾವುದೇ ಅವಕಾಶ ಇಲ್ಲವೇ ಸೌಲಭ್ಯವನ್ನೂ ಈ ಸಂದರ್ಭದಲ್ಲಿ ಬಳಸಿಕೊಳ್ಳುವುದು ಒಳ್ಳೆಯದು. ಪ್ರಸ್ತುತ ಸಂದರ್ಭದಲ್ಲಿಯೂ ಗ್ರಾಮಗಳಲ್ಲಿ ಮಕ್ಕಳು ತಮ್ಮ ಶಾಲೆ ಬಳಿಯೇ ಬಂದು ದಿನಂಪ್ರತಿ ಆಟವಾಡುತ್ತಿದ್ದಾರೆ. ಮಕ್ಕಳಿಗೆ ಶಾಲಾ ತರಗತಿಗಳೇ
  • ಅಚ್ಚುಮೆಚ್ಚು. ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿ ಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತಪ್ಪೇನು ಇಲ್ಲ.
  • ಆಯಾ ಪ್ರದೇಶದಲ್ಲಿ ಆಯಾ ನೆಲೆಯಲ್ಲಿ ಸಾಧ್ಯವಾಗಬಹುದಾದ ಆವಕಾಶಗಳನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕು

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUKannada News WebsiteLatest News KannadaMinisterS Suresh kumarSchoolಎಸ್. ಸುರೇಶ್ ಕುಮಾರ್ಬೆಂಗಳೂರು
Share219Tweet123Send
Previous Post

ಯಕ್ಷ ನಗುವಿನ ಹಿಂದೆ-2: ಹಾಸ್ಯ ಸಾಮ್ರಾಟ್, ಹಾಸ್ಯದರಸು ಸುಂದರ ಬಂಗಾಡಿ

Next Post

ಜುಲೈ 30-31ರಂದು ಸಿಇಟಿ ಪರೀಕ್ಷೆ: ಜಿಲ್ಲಾಡಳಿತ ಏನೆಲ್ಲಾ ಕ್ರಮ ಕೈಗೊಂಡಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜುಲೈ 30-31ರಂದು ಸಿಇಟಿ ಪರೀಕ್ಷೆ: ಜಿಲ್ಲಾಡಳಿತ ಏನೆಲ್ಲಾ ಕ್ರಮ ಕೈಗೊಂಡಿದೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

April 3, 2026
ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

April 3, 2026
2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

April 3, 2026
ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

April 3, 2026
ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL