Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಚಿವ ಈಶ್ವರಪ್ಪ ಪ್ರಯತ್ನದ ಫಲ: ಕೋವಿಡ್ ಚಿಕಿತ್ಸೆಯಲ್ಲಿ ಬಳಸುವ ಪ್ಲಾಸ್ಮಾ ಥೆರಪಿ ಈಗ ಶಿವಮೊಗ್ಗದಲ್ಲಿ ಲಭ್ಯ

July 30, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋವಿಡ್19 ವೈರಸ್ ಎದುರಿಸುವಲ್ಲಿ ಹಲವು ಉಪಕ್ರಮಗಳನ್ನು ಕೈಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪ್ರಯತ್ನದ ಫಲದಿಂದಾಗಿ, ಕೋವಿಡ್ ಚಿಕಿತ್ಸೆಯಲ್ಲಿ ಬಳಸುವ ಪ್ಲಾಸ್ಮಾ ಥೆರಪಿ ಈಗ ಶಿವಮೊಗ್ಗದಲ್ಲಿ ಲಭ್ಯವಾಗಲಿದೆ.

ರಾಜ್ಯದ ಕೆಲವೇ ಪ್ರಮುಖ ನಗರಗಳಲ್ಲಿ ಲಭ್ಯವಿರುವ, ಅತ್ಯಾಧುನಿಕ ತಂತ್ರಾಜ್ಞಾನವುಳ್ಳ ರಕ್ತ ಕಣಗಳನ್ನು ಬೇರ್ಪಡಿಸುವ ವಿಶೇಷ ಯಂತ್ರ (ಸೆಲ್ ಸಪರೇಟರ್)ವನ್ನು  ಶಿವಮೊಗ್ಗ ನಗರದ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಸ್ಥಾಪಿಸಲು, ಅಗತ್ಯವಿದ್ದ 20 ಲಕ್ಷ ರೂ.ಗಳ ಹಣಕಾಸಿನ ವ್ಯವಸ್ಥೆಯನ್ನು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಯಮಿತದ ಸಿ.ಎಸ್.ಆರ್ ಅನುದಾನದಿಂದ ಮಂಜೂರಾತಿ ದೊರಕಿದೆ.

ಈ ಸಂಬಂಧದ 20 ಲಕ್ಷ ರೂಗಳ ಚೆಕ್‌ನ್ನು, ಇತ್ತೀಚೆಗೆ ರೋಟರಿ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸಂಜಯ್, ಪ್ರಮುಖರಾದ ಡಾ. ಶಿವರಾಮ ಕೃಷ್ಣ ಮೊದಲಾದವರಿಗೆ ಈಶ್ವರಪ್ಪ ನೀಡಿದರು.

ಯಾರಿಗೆಲ್ಲಾ ಪ್ರಯೋಜನ?
ಈ ಅತ್ಯಾಧುನಿಕ ಯಂತ್ರ ಶಿವಮೊಗ್ಗದಲ್ಲೇ ದೊರೆಯುವುದರೊಂದಿಗೆ, ರಕ್ತ ಸಂಬಂಧಿ ರೋಗಗಳಿಂದ ನರಳುತ್ತಿರುವ ಅನೇಕ ರೋಗಿಗಳಿಗೆ ಸಹಾಯವಾಗಲಿದ್ದು, ಇದರಿಂದ ರೋಗಿಗಳಿಗೆ ಆರ್ಥಿಕ ಹೊರೆ ಇಳಿಯುವುದಲ್ಲದೇ, ಚಿಕಿತ್ಸೆಗಾಗಿ ಬೇರೆ ಊರುಗಳಿಗೆ ತೆರಳುವ ಪರದಾಟವು ತಪ್ಪಲಿದೆ.

ಏನಿದು ತಂತ್ರಜ್ಞಾನ? ಹೇಗೆ ಪ್ರಯೋಜನವಾಗಲಿದೆ?
ಟ್ರುಮಾ ಅ್ಯಕ್ಸಲ್ (ಆಟೋಮೆಟೆಡ್ ಬ್ಲಡ್ ಕಲಕ್ಷನ್ ಸಿಸ್ಟಂ)ಎನ್ನುವ ಈ ಅತ್ಯಾಧುನಿಕ ಯಂತ್ರದ ಸಹಾಯದಿಂದ ರಕ್ತದ ಬೇರೆ ಬೇರೆ ಭಾಗಗಳಾದ ಕೆಂಪು ರಕ್ತ ಜೀವಕೋಶ (ರೆಡ್ ಬ್ಲಡ್ ಸೆಲ್) ಬಿಳಿಯ ರಕ್ತ ಜೀವಕೋಶ  (ವೈಟ್ ಬ್ಲಡ್ ಸೆಲ್) ಮತ್ತು ಹಲಗೆ ಕಣ(ಪೇಟ್ಲೆಟ್ಸ್‌) ಗಳನ್ನು ಬೇರ್ಪಡಿಸಬಹುದು. ಈ ಚಿಕಿತ್ಸಾ ಪದ್ದತಿಯಿಂದ ಡೆಂಗ್ಯೂಜ್ವರ, ಗ್ಯೂಲಿಯನ್ – ಬೆರ್ರೆ ಸಿಡ್ರೋಮ್ ಹಾಗೂ ಕೆಲವು ಬಗೆಯ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ. ಕೋವಿಡ್ ಚಿಕಿತ್ಸೆಯಲ್ಲಿ ಪ್ರಾಯೋಗಿಕವಾಗಿ ಬಳಸಲಾಗುತ್ತಿರುವ ಪ್ಲಾಸ್ಮಾ ಥೆರಪಿಯನ್ನು ಸಹಾ ಈ ಯಂತ್ರದ ಸಹಾಯದ ಮೂಲಕ  ಕೂಡಾ ನೀಡಬಹುದಾಗಿದೆ.

ಈಗಾಗಲೇ ಸಚಿವ  ಕೆ.ಎಸ್. ಈಶ್ವರಪ್ಪನವರು ಶಿವಮೊಗ್ಗ ನಗರದ ನಾಗರಿಕರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ರೋಗ ನಿರೋಧಕ ಶಕ್ತಿಯನ್ನು ವರ್ಧಿಸುವ ಆಯುರ್ವೇದಿಯ ಔಷಧಿಗಳನ್ನು ಒಳಗೊಂಡ ಕಿಟ್‌ಗಳನ್ನು ಶಿವಮೊಗ್ಗ ನಗರದ ಮನೆಮನೆಗೆ  ವಿತರಿಸುವ ಪ್ರಯತ್ನಕ್ಕೆ  ಚಾಲನೆ ನೀಡಿದ್ದಾರೆ. ಈ ಮೂಲಕ ಕೊರೋನಾ ಸೋಂಕನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಯುರ್ವೇದ ಹಾಗು ಆಧುನಿಕ ವೈದ್ಯಕೀಯ ಚಿಕಿತ್ಸಾ ಪದ್ದತಿಗೆ ಕಾಯಕಲ್ಪ ನೀಡುವಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದಂತಾಗಿದೆ.

Get In Touch With Us info@kalpa.news Whatsapp: 9481252093

Tags: Automated Blood Collection SystemCell separatorKannada News WebsiteLatest News KannadaMalnad NewsPlasma TherapyShimogaShivamogga NewsTruma Axleಆಟೋಮೆಟೆಡ್ ಬ್ಲಡ್ ಕಲಕ್ಷನ್ ಸಿಸ್ಟಂಕೆ.ಎಸ್. ಈಶ್ವರಪ್ಪಪ್ಲಾಸ್ಮಾ ಥೆರಪಿಶಿವಮೊಗ್ಗ
Previous Post

ಕ್ರಿಯಾಶೀಲತೆಗೆ ಅರ್ಥದಂತಿದ್ದ ಪಿ.ಜಿ. ರಾಘವೇಂದ್ರ ರಾವ್ ನಿಧನ: ಗಣ್ಯರ ಸಂತಾಪ

Next Post

ಸ್ವತಃ ಹಾವು ಹಿಡಿದು ಸರಳ ವಿಧಾನ ತೋರಿಸಿದ ಪೇಜಾವರ ಶ್ರೀಗಳು: ವೀಡಿಯೋ ವೈರಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವತಃ ಹಾವು ಹಿಡಿದು ಸರಳ ವಿಧಾನ ತೋರಿಸಿದ ಪೇಜಾವರ ಶ್ರೀಗಳು: ವೀಡಿಯೋ ವೈರಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!