ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪ್ರತಿವರ್ಷದಂತೆ ಈ ವರ್ಷವೂ ಸಹ ಸಮೀಪದ ಯಲವಟ್ಟಿ ಕೆರೆ ಒಡೆದಿದ್ದು, ಪರಿಣಾಮವಾಗಿ ಸಮೀಪದ ತೋಟಗಳಿಗೆ ನೀರು ನುಗ್ಗಿ ಅಪಾರ ಬೆಳೆ ನಾಶವಾಗಿದೆ.
ಸಾಮಾನ್ಯವಾಗಿ ಪ್ರತಿವರ್ಷವೂ ಸಹ ಮಳೆಗಾಲದಲ್ಲಿ ಯಲವಟ್ಟಿ ಕೆರೆ ತುಂಬಿ ಒಡೆಯುತ್ತದೆ. ಅದರಂತೆಯೇ ಈ ಬಾರಿಯೂ ಸಹ ಕೆರೆ ಒಡೆದಿದ್ದು, ಸಮೀಪದ ತೋಟ-ಗದ್ದೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಪರಿಣಾಮವಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ಕಣ್ಣೀರು ಹಾಕುವಂತಾಗಿದೆ.
ಪ್ರತಿ ಮಳೆಗಾದಲ್ಲೂ ಇಲ್ಲಿ ಇದೇ ಸಮಸ್ಯೆಯಿದ್ದು, ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಸಬೇಕಾದ ಅಗತ್ಯವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post