No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

kalpa News by kalpa News
September 4, 2016
in ಬೆಂಗಳೂರು ನಗರ, ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಗೋ ಅಪಹರಣ ತಡೆಯಲು ಹೋರಾಡಿದ ಪಾಂಡವರ ಕಥೆಯನ್ನು ನಿರೂಪಿಸಿದ ಶ್ರೀಗಳು, ನಮ್ಮ ಸ್ವಭಾವದ ಬಗ್ಗೆ ಸ್ನೇಹಿತರಿಗಿಂತ, ವೈರಿಗಳಿಗೇ ಹೆಚ್ಚು ತಿಳಿದಿರುತ್ತದೆ. ಅಜ್ಞಾತವಾಸದಲ್ಲಿದ್ದ ಪಾಂಡವರನ್ನು ಹುಡುಕಲು ಕೌರವರು ಗೋ ಅಪಹರಣ ಮಾಡಿದರು. ಪಾಂಡವರ ಗೋ ಪ್ರೇಮದ ಅರಿವಿರುವುದರಿಂದಲೇ ಗೋವನ್ನು ದಾಳವಾಗಿ ಬಳಸಿದರು. ಗುಣಗಳೂ ಶತ್ರುಗಳಾಗಬಹುದಾದ ಸಾಧ್ಯತೆ ಇದ್ದು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತು ಹೇಳಿದರು.

ವಿರಾಟರಾಯನ ಗೋವುಗಳು ಅಪಹರಣವಾಗುತ್ತಿದ್ದಾಗ ಶಾಂತಿಪ್ರಿಯನಾದ ಧರ್ಮರಾಜನೂ ಗೋವುಗಳಿಗಾಗಿ ಯುದ್ಧಕ್ಕೆ ಮುಂದಾದ, ಉತ್ತರಕುಮಾರನು ತನ್ನ ದೌರ್ಬಲ್ಯವನ್ನು ತೊರೆದು ವೀರ ಗೋರಕ್ಷಕನಾದ, ಅರ್ಜುನ ಬೃಹನ್ನಳೆಯ ರೂಪವನ್ನು ತೊರೆದು ತನ್ನ ಗಾಂಡೀವವನ್ನು ಹಿಡಿದು ಲಕ್ಷಲಕ್ಷ ಸಂಖ್ಯೆಯ ಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋವುಗಳನ್ನು ಸಂರಕ್ಷಿಸಿ ತನ್ನ ಗೋಪ್ರೇಮವನ್ನು ಮೆರೆದ. ಇವರೆಲ್ಲರ ನಡೆ ನಮಗೆ ಅನುಕರಣೀಯ, ಭಾರತರೆಲ್ಲರೂ ಗೋಸಂರಕ್ಷಣೆಗೆ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.

 ಗೋಕಥಾದಲ್ಲಿ ಶ್ರೀಗಳ ಕಥಾನಿರೂಪಣೆಗೆ ಸಂಬಂಧಿಸಿ ಚಿತ್ರ ರಚನೆಯಲ್ಲಿ ತೊಡಗಿರುವ ನೀರ್ನಳ್ಳಿ ಗಣಪತಿ ಹೆಗಡೆ
ಗೋಕಥಾದಲ್ಲಿ ಶ್ರೀಗಳ ಕಥಾನಿರೂಪಣೆಗೆ ಸಂಬಂಧಿಸಿ ಚಿತ್ರ ರಚನೆಯಲ್ಲಿ ತೊಡಗಿರುವ ನೀರ್ನಳ್ಳಿ ಗಣಪತಿ ಹೆಗಡೆ

ಗೋಸೇವೆ ವನವಾಸಿಗಳನ್ನು ರಾಜಭವನ ವಾಸಿಗಳನ್ನಾಗಿಸುತ್ತದೆ, ಗೋವಿನ ಹಿಂಸೆ ರಾಜಭವನ ವಾಸಿಗಳೇ ಆದರೂ ಅವರನ್ನು ಯಮರಾಜಭವನ ವಾಸಿಗಳನ್ನಗಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರವಚನ, ಕಥನ, ಗಾಯನ, ರೂಪಕಗಳನ್ನೊಳಗೊಂಡ ಈ ಗೋಕಥೆಯಲ್ಲಿ ಸಂದರ್ಭಕ್ಕೆ ಹೊಂದುವ ಚಿತ್ರಗಳನ್ನು ನೀರ್ನಳ್ಳೀ ಗಣಪತಿ ಅವರು ಮನಮೋಹಕವಾಗಿ ಚಿತ್ರಿಸಿದರು. ಡಾ| ಗಜಾನನ ಶರ್ಮ ಅವರ ಸಾಹಿತ್ಯ ಸಹಕಾರ, ಗಾಯನದಲ್ಲಿ ಶ್ರೀಪಾದ ಭಟ್, ದೀಪಿಕಾ ಭಟ್, ಶೃತಿರಂಜಿನಿ, ಸತ್ಯಜಿತ್ ಜೈನ್ ಕೊಲ್ಕೋತಾ, ಶ್ರದ್ಧಾ, ಪ್ರಿಯಾ ಕೊರಿಕ್ಕಾರ್, ರಘುನಂದನ ಬೇರ್ಕಡವು ಹಾಗೂ ಸಂಗೀತ ವಾದ್ಯಗಳಲ್ಲಿ ಪ್ರಜ್ಞಾನಲೀಲಾಶುಕ ಉಪಾಧ್ಯಾಯ, ಗಣೇಶ್ ಕೆ.ಎಸ್., ಗಣೇಶ್ ಗುಂಡ್ಕಲ್, ಆದಿತ್ಯ ಭಟ್ ಕೆಕ್ಕಾರು ಮೊದಲಾದವರು ಭಾಗವಹಿಸಿದ್ದರು. ಅನಂತರ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರ ಸಾರಥ್ಯದಲ್ಲಿ ರೂಪಕ ನಡೆಯಿತು. ಸಾವಿರಾರು ಜನರು ಈ ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು
ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು

ಗೋಕಥೆಯ ನಂತರ ಶ್ರೀಗಳು ಹಾಗೂ ಗೋವಿನ ಸಮ್ಮುಖದಲ್ಲಿ ಸೇರಿದ ಸಾವಿರಾರು ಜನರು ಗೋರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಂಡರು, ಗೋಕುಲಕ್ಕೆ ಒಳಿತಾಗಲೆಂಬ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ವಕೀಲರ ಬಳಗ ಇಂದಿನ ಗೋಕಥೆಯ ಪ್ರಾಯೋಜಕತ್ವವನ್ನು ವಹಿಸಿತ್ತು, ಬಳಗದ ಪರವಾಗಿ ವೈ ಕೆ ಎನ್ ಶರ್ಮಾ ಅವರು ಪುಷ್ಪಾರ್ಚನೆ ನೆರವೇರಿಸಿದರು. ಮಾ ಗೋ ಪ್ರಾಡೆಕ್ಟ್ಸ್ ನ ಮಹಾವೀರ್ ಸೋನಿಕಾ ಶ್ರೀಗಳ ಮಾರ್ಗದರ್ಶನದಲ್ಲಿ ಉತ್ಪಾದಿಸಲಾಗುತ್ತಿರುವ ವಿಶ್ವದರ್ಜೆಯ ಗವ್ಯೋತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ಗೋಕಥಾದಲ್ಲಿ ಮೂಡಿಬಂದ ರೂಪಕದ ದೃಶ್ಯ
ಗೋಕಥಾದಲ್ಲಿ ಮೂಡಿಬಂದ ರೂಪಕದ ದೃಶ್ಯ

ಮಧ್ಯಾಹ್ನ ನಡೆದ ಸಭೆಯಲ್ಲಿ ಶ್ರೀಭಾರತೀಪ್ರಕಾಶನವು ಹೊರತಂದಿರುವ ಗೋಕಥಾಗೀತೆ ಹಾಗೂ ಸಾಧನಾಪಂಚಕದ ದೃಶ್ಯಮುದ್ರಿಕೆಯನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆಗೊಳಿಸಿದರು. ಕಂಪನಿ ಕಾರ್ಯದರ್ಶಿಗಳ ಬಳಗ ಇಂದಿನ ಸರ್ವಸೇವೆಯನ್ನು ನೆರವೇರಿಸಿತು. ಉದ್ಯಮಿಗಳಾದ ಮಹಾವೀರ್ ಸೋನಿಕಾ , ನ್ಯಾಯವಾದಿಗಳಾದ ಶಂಭುಶರ್ಮ, ಶ್ರೀಮಠದ ಪದಾಧಿಕಾರಿಗಳು, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಶ್ರೀ ಸೂಕ್ತ ಜಪ, ಶ್ರೀ ಸೂಕ್ತ ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ ನಡೆಯಿತು.

ಗಣೇಶಚತುರ್ಥಿ (5.09.2016):
ಗೋ-ಗಣಪತಿಯ ಪ್ರಾಣ ಪ್ರತಿಷ್ಠೆಯೊಂದಿಗೆ ಕಲ್ಪೋಕ್ತಪೂಜೆ ನೆರವೇರಲಿದ್ದು, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಗೋ-ಗಣಪತಿಗೆ ವಿಶೇಷ ಪೂಜೆಯನ್ನು ನೆರವೇರಿಸಲಿದ್ದಾರೆ. ಮಹಾಗಣಪತಿ ಹವನ, ಕ್ಷಿಪ್ರಗಣಪತಿ ಹವನ, ಸಹಸ್ರ ಅಪ್ಪ(ಅಪೂಪ) ಸೇವೆ, ಸಹಸ್ರದೂರ್ವಾಚನೆ, ಅಷ್ಟಾವಧಾನ ಸೇವೆ, ಅಥರ್ವಶೀರ್ಷ ಪಾರಾಯಣ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಲ್ಕುದಿನಗಳ ಕಾಲ ಗೋ-ಗಣಪತಿಯ ಉಪಾಸನೆ ನೆರವೇರಲಿದೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣಮಠದ ಸುತುಪೌಳಿ ನವೀಕರಣಕ್ಕೆ ಚಾಲನೆ

Next Post

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

kalpa News

kalpa News

Next Post

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL