No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಗವಂತನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಕಲಾವಿದ ಹೆಚ್.ಎಂ. ನಾಗರಾಜಪ್ಪ 

ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ ಇಂದಿನ ತುರ್ತು ಅಗತ್ಯ ಸಿಲಿಕಾನ್ ಸಿಟಿಯಲ್ಲಿ  ಪರಿಸರ ಸ್ನೇಹಿ ಗೌರಿ -  ಗಣಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2020
in Special Articles
0
ಭಗವಂತನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಕಲಾವಿದ ಹೆಚ್.ಎಂ. ನಾಗರಾಜಪ್ಪ 
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತೀಯ ಪರಂಪರೆಯಲ್ಲಿ ಹಬ್ಬಗಳ ಸಂಭ್ರಮಕ್ಕೆ, ವೈವಿಧ್ಯಕ್ಕೆ ಎಣೆಯಿಲ್ಲ. ಹಬ್ಬಗಳೆಂದರೆ ನಮಗೆ ಕೇವಲ ಆಚರಣೆಗಳಷ್ಟೆ ಅಲ್ಲ ಅದನ್ನು ಮೀರಿದ  ಹಲವು ಮಜಲುಗಳು ಅದಕ್ಕಿರುತ್ತವೆ. ಇನ್ನು ಗಣೇಶೋತ್ಸವವು ತನ್ನದೆ ಆದ ವಿಶೇಷತೆಯನ್ನು ಹೊಂದಿದೆ, ಮೋದಕಪ್ರಿಯನಿಗೆ ಮೊದಲೊಂದಿಪೆ ಎನ್ನುವ ಕ್ಷಣಗಣನೆ ಆರಂಭವಾಗಿದೆ.

ಮತ್ತೊಂದು ಗಣೇಶನ ಹಬ್ಬಕ್ಕೆ ನಗರದೆಲ್ಲಡೆ ವಿಜೃಂಭಣೆಯ ತಯಾರಿ ನಡೆದಿದೆ. ಆಧುನಿಕತೆಯತ್ತ ಬೆಂಗಳೂರು ಹೆಜ್ಜೆ ಹಾಕಿದರೂ, ಗ್ರಾಮೀಣ ಸೊಗಡಿನ ಕಲೆ ನಗರದಲ್ಲಿ ಉಳಿದಿದೆ.

ಬಾಲ್ಯದಿಂದ ಕುಲಕಸುಬಾದ ಕುಂಬಾರಿಕೆ ವೃತ್ತಿಯ ನಾಗರಾಜಪ್ಪ ಮೆತ್ತಗಿನ ಮಣ್ಣಿನಿಂದ ಕರಕುಶಲ ವಸ್ತುಗಳನ್ನು ತಯಾರಿಸುತ್ತಿದ್ದರು. ಕ್ರಮೇಣ ಮೂರ್ತಿ ತಯಾರಿಕೆಯಲ್ಲಿ ಆಸಕ್ತಿ ಬೆಳೆಸಿಕೊಂಡರೂ ಕಲಿಸುವ ಸಹೃದಯಿಗಳು ಸಿಗಲಿಲ್ಲ. ಗಣಪತಿ ವಿಸರ್ಜನೆಯ ಮರುದಿನ ಮನೆ ಸಮೀಪವಿರುವ ಕೆರೆಯ ಬಳಿ ಹೋಗಿ ಭಗ್ನವಾದ ಮೂರ್ತಿಗಳನ್ನು ನೋಡಿ ಚಿಂತಿಸಿ ಶತಾಯುಗತಾಯ ಪ್ರಯತ್ನಿಸಿ ಯಶಸ್ವಿ ಕಲಾವಿದರಾದರು. ಹೆಚ್ಚೇನು ಓದಿರದ ಕುಂಬಾರಿಕೆಯನ್ನು ಉದ್ಯೋಗವಾಗಿಸಿಕೊಂಡರೂ ಮೂರ್ತಿ ತಯಾರಿಕೆಗೂ ಅಷ್ಟೇ ಮಹತ್ವ ನೀಡಿದ್ದಾರೆ.

ಹಬ್ಬಕ್ಕೆ ಬೇಕಾದ ಸಾಮಗ್ರಿಗಳ ಜೊತೆ ಪೂಜಿಸಲು ಗೌರಿ ಗಣಪನ ಮಣ್ಣಿನ ಮೂರ್ತಿಯನ್ನು ಕೊಂಡು ತರಲು ಅಂಗಡಿಗೆ ಹೋದರೆ ಸಾಲುಸಾಲಾಗಿ ಜೋಡಿಸಿಟ್ಟಿರುವ ಗೌರಿಗಣಪನ ವಿಗ್ರಹಗಳು ನಿಮ್ಮನ್ನು ಸ್ವಾಗತಿಸುತ್ತದೆ.


ಜೇಡಿಮಣ್ಣಿನಿಂದ ತಯಾರಾದ ಗಣಪತಿ ವಿಗ್ರಹಗಳು  ಪೂಜೆಗೆ ಶ್ರೇಷ್ಟವೆಂಬ ಭಾವನೆ ನಮ್ಮಲ್ಲಿದೆ. ಈ ಕಾರಣ ಕೆರೆಗಳು ಕಾಣದಾಗುತ್ತಿರುವ ದಿನಗಳಲ್ಲೂ, ಕುಂಬಾರಿಕೆ ಕಷ್ಟವೆನಿಸಿರುವ ಈ ಹೊತ್ತಿನಲ್ಲೂ ನಾವು ಮಣ್ಣಿನ ಗೌರಿ ಗಣಪನನ್ನು ಪೂಜಿಸುವುದನ್ನೇನ್ನೂ ಕಡಿಮೆ ಮಾಡಿಲ್ಲ.

ಭಕ್ತರ ಆಶಯಕ್ಕೆ ಪೂರಕವಾಗಿ ಸ್ಪಂದಿಸುವ ಕಲಾವಿದ ಹೆಚ್.ಜಿ.ನಾಗರಾಜಪ್ಪ ಮತ್ತು ಕರಿಬಸಪ್ಪ ಸಹೋದರರು, ಅರ್ಧ ಅಡಿಯಿಂದ ಆಳೆತ್ತರದ ತರಾವರಿ ದೇಶಾವರಿ ಗಣೇಶಗಳನ್ನು ತಯಾರಿಸುತ್ತಾರೆ.

ಮೂರ್ತಿ ತಯಾರಿಕೆ ಅವರ ಕುಲಕಸುಬು ಹೀಗಾಗಿ ಬಾಲ್ಯ ದಿಂದಲೇ ಈ ನಂಟನ್ನು ಬೆಳೆಸಿಕೊಂಡ ಈ ಕಲಾವಿದನ ಕುಟುಂಬ ದವರೆಲ್ಲ ಕಲಾಸೇವೆಯಲ್ಲಿ ತೊಡಗಿದ್ದಾರೆ.

ಕಲ್ಪ ನ್ಯೂಸ್ ನೊಂದಿಗೆ  ಲೋಕಾಭಿರಾಮವಾಗಿ ಮಾತಿಗೆ ಸಿಕ್ಕಿದ್ದರು  ಕುಂಬಳಗೊಡು, ಬಸವಗಂಗೋತ್ರಿಯ ಕಲಾವಿದ  ಹೆಚ್ .ಎಂ. ನಾಗರಾಜಪ್ಪ, ಸುಮಾರು 30  ವರುಷದಿಂದ  ಪರಿಸರ ಸ್ನೇಹಿ ಗೌರಿ –  ಗಣಪನನ್ನು ಮಾಡಿ  ಸಿಲಿಕಾನ್ ಸಿಟಿಯಲ್ಲಿ ಶ್ರೀನಿವಾಸ ನಗರದಲ್ಲಿ ಬಾಡಿಗೆ ಮನೆ ಪಡೆದು ಮೂರು ತಿಂಗಳು ಕ್ಯಾಂಪ್  ಹಾಕಿ  ಜೇಡಿ ಮಣ್ಣಿನ ಮೂರ್ತಿ ತಯಾರಿಸಿ ಮಾರಾಟ ಮಾಡುತ್ತಾರೆ. ಈ ಸಂದರ್ಭದಲ್ಲಿ ಗೌರಿ  ತಯಾರು ಮಾಡಲು ಅವರ ಪತ್ನಿ  ಶ್ರೀಮತಿ  ರೂಪ ನಾಗರಾಜಪ್ಪ ಮತ್ತು ನಾಗರಾಜಪ್ಪ ಅವರ ತಮ್ಮ  ಹೆಚ್.ಎಂ. ಕರಿಬಸಪ್ಪ ಅವರ ಜೊತೆ ಕೈ ಜೋಡಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ  ಸಂಪೂರ್ಣ  ಕುಟುಂಬ ಸಮೇತ ಭಗವಂತನ ಸೇವೆಗೆ ಬದುಕನ್ನು ಮುಡಿಪು ಆಗಿ ಇಟ್ಟಿದ್ದಾರೆ.


ಅರೆ ಮಲೆನಾಡಿನ ಶಿವಮೊಗ್ಗದ ಎಂ. ಮಲ್ಲಪ್ಪ ಮತ್ತು ಶ್ರೀಮತಿ ಸುಶೀಲಮ್ಮ ರವರ ಸುಪುತ್ರ  ಹೆಚ್.ಎಂ. ನಾಗರಾಜಪ್ಪ ಹುಟ್ಟಿದ್ದು 6 ನೇ ಆಗಸ್ಟ್ 1970 ರಲ್ಲಿ, ಓದಿದ್ದು ಎಸ್.ಎಸ್.ಎಲ್.ಸಿ, ವ್ಯಾಸಂಗ ಮಾಡಿದ್ದು ಶ್ರೀ ಸಿದ್ದಗಂಗಾ ಮಠದಲ್ಲಿ.  ಸಿಹಿ ಮೊಗ್ಗೆಯನ್ನು ಬಿಟ್ಟಿದ್ದು 7 ನೇ  ತರಗತಿ ಓದುವಾಗ ಬದುಕು ಕಟ್ಟಿಕೊಳ್ಳಲು ಅವಲಂಬಿಸಿದ್ದು  ವಂಶ ಪಾರಂಪರಿಕವಾಗಿ ಬಂದ ಕುಂಬಾರ ವೃತ್ತಿ  ಪರಿಸರ ಸ್ನೇಹಿ  ಜೆಡಿ ಮಣ್ಣಿನ  ಗೌರಿ ಮತ್ತು ಗಣಪ ಇವರಲ್ಲಿ ಲಭ್ಯ  – ವೃತ್ತಿಯ ಆರಂಭದಲ್ಲಿ ಎದುರಾದ ಅವಮಾನ. ಆರ್ಥಿಕ ಸಂಕಷ್ಟಗಳನ್ನು ಇಬ್ಬರೂ ಒಗ್ಗಟ್ಟಿನಿಂದ ಎದುರಿಸಿದ್ದಾರೆ. ಈಗ ನೆಮ್ಮದಿಯಿಂದ ಬದುಕುತ್ತಿರುವ ಅವರ ಧ್ಯಾನ, ಜೀವನ ವಿಧಾನಗಳೆಲ್ಲವನ್ನೂ ನಿರ್ಣಯಿಸುವವನು ಗಣಪನೇ!

ದೊಡ್ಡ ಗಣೇಶ, ಸಣ್ಣಗ ಣೇಶ, ಮರಿಗಣೇಶ, ಕಿರುಗಣೇಶ, ಹಸುವಿನ ಮೇಲೆ ಕುಳಿತ ಗಣೇಶ, ನವಿಲಿನ ಮೇಲೆ ಕುಳಿತ ಗಣೇಶ, ರಥದ ಮೇಲಿರುವ ಗಣೇಶ, ಕಮಲದ ಮೇಲಿರುವ ಗಣೇಶ.ಪಂಚಮುಖ ಗಣೇಶ, ವಿದ್ಯಾ ಗಣೇಶ, ಇಡಗುಂಜಿ ಗಣೇಶ… ಅಬ್ಬಬ್ಬಾ! ಎಷ್ಟೊಂದು ಗಣಪತಿಗಳು ನೋಡಲು ಕಣ್ಣುಗಳೆರಡು ಸಾಲದು.

ಮೂಲತಃ ಕುಂಬಳಗೋಡಿನ ಕಲಾವಿದ ನಾಗರಾಜಪ್ಪ ಮತ್ತು ಕುಟುಂಬದವರು ಭಕ್ತರ ಆಶಯಕ್ಕೆ ಪೂರಕವಾಗಿ ಸ್ಪಂದಿಸಿ ವೈವಿಧ್ಯಮಯ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ.

‘ನಮ್ಮ ತಂದೆ ಗಣೇಶನ ಮೂರ್ತಿಗಳನ್ನು ಮಾಡಿ ಮಾರುತ್ತಿದ್ದರು ಅದೇ ಪ್ರೇರಣೆ, ಸ್ವಯಂ ಅನುಭವವೇ ಗುರು ,ಗಣೇಶನನ್ನು ನಿರ್ಮಿಸುವುದು ಪೂಜನೀಯ ಕೆಲಸ, ದೇವರ ಹೆಸರಲ್ಲಿ ಅಕ್ಕರೆಯಿಂದ ಮಾಡುತ್ತಿರುವ ಈ ಕಾಯಕದಲ್ಲಿ ತೃಪ್ತಿಯನ್ನು ಕಾಣುವ ನಾಗರಾಜಪ್ಪ,  ಮಳೆಗಾಲದ ಆರಂಭದ ಮೊದಲೇ ನಮ್ಮ ಕೆಲಸ ಶುರು, ಮರಳು ಕಡಿಮೆ ಇರುವ ಜೇಡಿಮಣ್ಣ ಹಾಗು ಕಪ್ಪು ಮಣ್ಣನ್ನು ಸಂಗ್ರಹಿಸಿಟ್ಟುಕೊಳ್ಳುತ್ತೇವೆ, ಆರೇಳು ತಿಂಗಳು ಪರಿಶ್ರಮ ಪಟ್ಟ ಶ್ರಮಕ್ಕೆ ಬೆಲೆ ಬರುವುದು ಗಣೇಶನ ಹಬ್ಬದಲ್ಲಿ ಒಳ್ಳೆಯ ವ್ಯಾಪಾರವಾದಾಗ ಮಾತ್ರ. ಇದೇ ನಮಗೆ ಜೀವನಾಧಾರವೆನ್ನುತ್ತಾರೆ.

ಹೆಚ್.ಎಂ. ನಾಗರಾಜಪ್ಪ ಮಾತನಾಡುತ್ತಾ , ಜೇಡಿ ಮಣ್ಣಿನ  ಗೌರಿ – ಗಣೇಶನ ಮೂರ್ತಿಯನ್ನು ಪ್ರತಿ ವರ್ಷ ಮಾಡುತ್ತಿದ್ದೇವೆ, ಈ  ಸಲ ಗೌರಿ – ಗಣೇಶನ ಚಿಕ್ಕ ಮೂರ್ತಿಗಳನ್ನು ಮಾರಲು ಅವಕಾಶವಿದೆ. ನಾವು ಸರ್ಕಾರದ ಆದೇಶ ಪಾಲಿಸುತ್ತಿದ್ದೇವೆ ಎನ್ನುತ್ತಾರೆ.

ಕುಂಬಾರರ ಬದುಕಿಗೆ ಹಾಗೂ ಅವರ ವಂಶ ಪರಂಪರ್ಯವಾಗಿ ನಡೆಸಿಕೊಂಡು ಬರುತ್ತಿರುವ ವೃತ್ತಿ ಹಾಗೂ ನಮ್ಮ ಸಂಸ್ಕೃತಿ ಉಳಿಯ ಬೇಕಾದರೆ ಕುಂಬಾರರ ಬದುಕು ಹಸನು ಮಾಡುವ ಪ್ರಕ್ರಿಯೆ ಸರ್ಕಾರ ದಿಂದ ಆಗಬೇಕು ಎಂಬುದು ನನ್ನ ಈ ಲೇಖನದ ಉದ್ದೇಶ!

ಮೂರ್ತಿ ತಯಾರಿಕೆ ಬಗೆ
ಹಿಂದೂ ಧರ್ಮೀಯರಲ್ಲಿ ಗಣೇಶನ ಪೂಜೆಗೆ ಅಗ್ರ ಪ್ರಾಶ್ತಸ್ಯ. ಯಾವುದೇ ಪೂಜೆ – ಪುನಸ್ಕಾರ, ಹೋಮ – ಹವನಗಳಂತಹ ಕಾರ್ಯಕ್ರಮಗಳಿರಲಿ ಮೊದಲ ಪೂಜೆ ಗಣೇಶನಿಗೆ ಸಲ್ಲಬೇಕು. ಇನ್ನು ಭಾದ್ರಪದ ಚೌತಿಯ ದಿನದಂದು ಗಣೇಶನನ್ನು ಕೂರಿಸಿ ಹಬ್ಬವನ್ನು ಆಚರಿಸುವುದು ನಿಮಗೆ ಗೊತ್ತಿರುವ ವಿಷಯ. ಗಣೇಶನನ್ನು ಕೂಡಿಸದೇ ಇರುವವರು ಸಹ ಹಬ್ಬವನ್ನು ಜೋರಾಗಿಯೇ ಆಚರಿಸುತ್ತಾರೆ. ಗೌರಿ ಗಣೇಶ ಹಬ್ಬ ಹಿಂದೂಗಳ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಗಣೇಶ ಚತುರ್ಥಿಯ ವೇಳೆ ಕಲಾಕಾರರು ಮೂರ್ತಿಯನ್ನು ಹೇಗೆ ತಯಾರಿಸುತ್ತಾರೆ ಎನ್ನುವುದು ಸಹ ವಿಶೇಷವಾದದ್ದು.


ಗಣೇಶನ ಮೂರ್ತಿಗಳನ್ನು ತಯಾರಿಸುವುದರಲ್ಲಿ ಪಳಗಿರುವ ಕಲಾಕಾರರ ಕುಟುಂಬದವರೇ ಅವನ್ನು ಮಾಡುತ್ತಾರೆ. ಮೂರ್ತಿ ತಯಾರಿಕೆಯು ಗಣೇಶ ಚತುರ್ಥಿಗಿಂತ ಒಂದೂವರೆ ತಿಂಗಳ ಮುಂಚೆ ಆರಂಭವಾಗುತ್ತದೆ. ಮಣ್ಣಿನಿಂದ ತಯಾರಿಸುವ ಮೂರ್ತಿಗಳನ್ನೇ ಮುಖ್ಯವಾಗಿ ಕೂರಿಸಲಾಗುತ್ತದೆ.

ಜೇಡಿ ಮಣ್ಣು ಗಣೇಶನ ಮೂರ್ತಿ ತಯಾರಿಕೆಗೆ ಹೆಚ್ಚು ಅನುಕೂಲವಾದದ್ದು. ಇದು ಕೆರೆದಂಡೆಗಳಲ್ಲಿ ಮತ್ತು ಹೊಲಗದ್ದೆಗಳಲ್ಲಿ ಸಿಗುತ್ತದೆ. ಜಿಗುಟುತನ ಮತ್ತು ಗಟ್ಟಿಯಾಗಿರುವುದರಿಂದ ಸೂಕ್ತವೆನಿಸುತ್ತದೆ. ಇದೀಗ ನಗರ ಪ್ರದೇಶಗಳಲ್ಲಿ ಮಣ್ಣಿನ ಮೂರ್ತಿಗಲ ಬದಲಿಗೆ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತಿದೆ.

ಸಣ್ಣ ಗಾತ್ರದ ಗಣಪನ ಮೂರ್ತಿಗಳನ್ನು ತಯಾರಿಸಲು ಬ್ಲಾಕ್‍ಗಳನ್ನು ಮಾಡಿಕೊಳ್ಳುತ್ತಾರೆ. ಆದರೆ ಐದು ಅಡಿಗೂ ಹೆಚ್ಚು ಎತ್ತರದ ಮೂರ್ತಿಗಳನ್ನು ರೂಪಿಸಲು ಬ್ಲಾಕ್‍ಗಳು ಸರಿ ಎನಿಸುವುದಿಲ್ಲ. ಎತ್ತರ, ಗಾತ್ರದ ವಿಗ್ರಹಗಳನ್ನು ಕೈಯಿಂದಲೇ ತಯಾರಿಸಬೇಕು.

ಗಣೇಶನ ಮೂರ್ತಿ ತಯಾರಿಕೆಯಲ್ಲಿ ಮುಖ ಮತ್ತು ತಲೆಯ ಭಾಗ ಮೂರ್ತಿ ಕೆತ್ತುವವರಿಗೆ ಸವಾಲೆನಿಸುತ್ತದೆ. ಏಕಂದರೆ ದೊಡ್ಡ ಗಾತ್ರದ ಮೂರ್ತಿಗಳಲ್ಲಿ ಗ್ರಾಹಕರು ಮತ್ತು ನೋಡುಗರು ಸಣ್ಣ ಪುಟ್ಟ ಲೋಪದೋಷಗಳನ್ನು ಬೇಗನೆ ಗುರುತಿಸಬಲ್ಲರು. ಹಸ್ತ, ಪಾದಗಳ ತೀಡಿ ಬಿಡಿಸುವುದು ಕಲಾಕಾರರ ನೈಪುಣ್ಯವನ್ನು ಎತ್ತಿ ತೋರುತ್ತದೆ.

ಸಾರ್ವಜನಿಕ ಸ್ಥಳಗಳಳ್ಲಿ ಕೂಡಿಸುವ ಗಣೇಶ ಮೂರ್ತಿಗಳನ್ನು ತಯಾರಿಸಲು ಹೆಚ್ಚಿನ ಕಾಲಾವಕಾಶ ಬೇಕು. ಗಣೇಶನನ್ನು ವಿವಿಧ ಪಾತ್ರಗಳಲ್ಲಿ ಸೃಷ್ಟಿಸಬೇಕಾಗಿರುವುದರಿಂದ ಕಲಾವಿದ ಹೆಚ್ಚಿನ ತನ್ಮಯತೆಯನ್ನು ಮೈಗೂಡಿಸಿಕೊಳ್ಳುವುದು ಅನಿವಾರ್ಯ.

ಮೂರ್ತಿ ರಚನೆಯಾದ ಬಳಿಕ ಬಣ್ಣ ಬಳಿಯುತ್ತಾರೆ. ಪೇಂಟಿಂಗ್ ನೋಡಲು  ಆಕರ್ಷಕವಾದರೂ ಕಲಾಕಾರರಿಗೆ ಇದು ಸೂಕ್ಷ್ಮ ಕೆಲಸವೆನಿಸಿದೆ. ಇದೀಗ ಬಹುತೇಕ ಕಲಾಕಾರರು ಸ್ಪ್ರೈ ಮೂಲಕ ಬಣ್ಣ ಲೇಪಿಸುತ್ತಾರೆ. ಆದರೆ ಸಂಪ್ರದಾಯವನ್ನು ಬಿಡದವರಿಗೆ ಪೇಂಟಿಂಗ್ ಮೂರ್ತಿಗಳೇ ಬೇಕು.

ಬಣ್ಣದ ವಿಷಯಕ್ಕೆ ಬಂದರೆ ವಾಟರ್ ಕಲರ್ ಬಳಕೆ ಪರಿಸರ ಸ್ನೇಹಿಯಾದದ್ದು. ಸಣ್ಣ ಮತ್ತು ಮಧ್ಯಮ ಗಾತ್ರದ ಗಣೇಶನ ಮೂರ್ತಿಗಳಿಗೆ ರೂ. 500 ರಿಂದ ರೂ. 800 ರಷ್ಟು ಬೆಲೆ ಇರುತ್ತದೆ. ಐದು ಅಡಿಗೂ ಎತ್ತರದ ಮಣ್ಣಿನ ವಿಗ್ರಹಗಳಿಗೆ ರೂ.8000 ರಿಂದ ರೂ. 10,000 ಬೆಲೆ ಇದೆ.

ಇದು ಆಯಾ ಮೂರ್ತಿಯ ಪರಿಕಲ್ಪನೆ, ಗಾತ್ರದ ಮೇಲೆ ಅವಲಂಬಿತವಾಗಿದೆ. ಸಣ್ಣ ಮೂರ್ತಿಗಳು 5-6 ಕೆ.ಜಿಯಷ್ಟು ತೂಕವುಳ್ಳವಾದರೆ, ಐದು ಅಡಿಗೂ ಎತ್ತರದ ಮಣ್ಣಿನ ಮೂರ್ತಿಗಳು 75 ಕೆ.ಜಿ ಯಷ್ಟು ಅಧಿಕ ತೂಕವನ್ನು ಹೊಂದಿರುತ್ತವೆ. ಗಣೇಶನ ಮೂರ್ತಿ ತಯಾರಿಕೆಯ ಕುರಿತು ಕಲಾಕಾರ ಶ್ರೀನಿವಾಸ ನಗರದ ಬ್ರಹ್ಮಚೈತನ್ಯ ಮಂದಿರದ ಸಮೀಪ ವಿರುವ ಹೆಚ್ ಎಂ ನಾಗರಾಜಪ್ಪ  ಈ ಮಾಹಿತಿ ನೀಡಿದರು.

ಕೋವಿಡ್ -19  ಹಿನ್ನೆಲೆಯಲ್ಲಿ  ಈ ಬಾರಿ  ಸಾರ್ವಜನಿಕವಾಗಿ ಗೌರಿ – ಗಣೇಶನ ಪೂಜೆಗೆ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದೆ .” ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಸಮೀಪದ ದೇವಸ್ಥಾನಗಳು ಹಾಗೂ ಮನೆಗಳಲ್ಲಿ  ಪ್ರತಿಷ್ಠಾಪಿಸಿ ಸರಳವಾಗಿ  ಗೌರಿ – ಗಣೇಶೋತ್ಸವ  ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮನವಿ  ಮಾಡಿದೆ.

ಗಣಪತಿ ಮೂರ್ತಿಗಳಿಗಾಗಿ  ಇವರ ಸಂಪರ್ಕ ಸಂಖ್ಯೆ: 9880787122


Get In Touch With Us info@kalpa.news Whatsapp: 9481252093

Tags: Ananth KallapuraClayGanesha ChaturthiHindu religionKannada News WebsiteLatest News KannadaPotteryಕುಂಬಾರಿಕೆ ವೃತ್ತಿಗಣೇಶ ಚತುರ್ಥಿಗಣೇಶ ಮೂರ್ತಿಜೇಡಿ ಮಣ್ಣುಹಿಂದೂ ಧರ್ಮ
Share211Tweet123Send
Previous Post

ಗಣೇಶ ವಿದ್ಯೆ, ಗಣಪತಿ ತತ್ವ ಎಂದರೇನು?

Next Post

ಭದ್ರಾ ಜಲಾಶಯ ತುಂಬಲು ಇನ್ನು ಕೇವಲ ನಾಲ್ಕು ಅಡಿ ನೀರು ಬಾಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾ ಜಲಾಶಯ ತುಂಬಲು ಇನ್ನು ಕೇವಲ ನಾಲ್ಕು ಅಡಿ ನೀರು ಬಾಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL