ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಪಿತೃಪಕ್ಷಕ್ಕಾಗಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆ ವಸ್ತುಗಳು ಹೊತ್ತಿ ಉರಿದ ಘಟನೆ ಹುತ್ತಾ ಕಾಲೋನಿಯಲ್ಲಿ ನಡೆದಿದೆ.
ಹುತ್ತಾ ಕಾಲೋನಿಯ ವಿಐಎಸ್’ಎಲ್’ಬಿಡಬ್ಲ್ಯೂಸಿ35ರಲ್ಲಿ ವಾಸವಾಗಿರುವ ಕಾಳಯ್ಯ ಎನ್ನುವವರ ನಿವಾಸದಲ್ಲಿ ಪಿತೃಪಕ್ಷಕ್ಕಾಗಿ ಅಡುಗೆ ಮಾಡುತ್ತಿದ್ದರು.
ಏಕಾಏಕಿ ಗ್ಯಾಸ್ ಲೀಕ್ ಆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ತತಕ್ಷಣವೇ ಎಚ್ಚೆತ್ತ ಮನೆಯಲ್ಲಿದ್ದ ಐದು ಮಂದಿ ಹೊರಕ್ಕೆ ಓಡಿ ಬಂದ ಕಾರಣ ಯಾರಿಗೂ, ಯಾವುದೇ ರೀತಿಯ ಹಾನಿಯಾಗಿಲ್ಲ. ಮನೆಯಲ್ಲಿದ್ದ ಟಿವಿ, ಫ್ರಿಡ್ಜ್ ಹಾಗೂ ಇತರೆ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.
ಪಕ್ಷ ಮಾಸ: ಪಿತೃ ಶ್ರಾದ್ಧಾ ಮಾಡಲು ಶಕ್ತಿಯಿಲ್ಲದವರು ಏನು ಮಾಡಬಹುದು? ಅಮಾವಾಸ್ಯೆಯಂದು ಪಿಂಡದಾನದ ವೈಜ್ಞಾನಿಕ ಹಿನ್ನೆಲೆಯೇನು?
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ವಿಷಯ ತಿಳಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದು, ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post