No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಚಿರತೆ ಹಾವಳಿ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ: 35 ಹೆಚ್ಚು ನಾಯಿ ಆಹುತಿ

ಗ್ರಾಮೀಣ ಭಾಗದ ಮನೆ ಆವರಣಕ್ಕೆ ಬಂದಿದ್ದ ಚಿರತೆ ಎಕ್ಸ್‌'ಕ್ಲೂಸಿವ್ ಸಿಸಿ ಕ್ಯಾಮೆರಾ ದೃಶ್ಯಾವಳಿ ನೋಡಿ

kalpa News by kalpa News
September 22, 2020
in ಭದ್ರಾವತಿ
0
ಭದ್ರಾವತಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಚಿರತೆ ಹಾವಳಿ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ: 35 ಹೆಚ್ಚು ನಾಯಿ ಆಹುತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾಲೂಕಿನ ಕಾಡಿನ ಅಂಚಿನಲ್ಲಿರುವ ಕೆಲವು ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದೆ.

ತಾಲೂಕಿನ ದಿಗ್ಗೇನಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರಿಗೆ ಕಳೆದ ಕೆಲವು ದಿನಗಳಿಂದ ರಾತ್ರಿ ಚಿರತೆಯದೇ ಚಿಂತೆಯಾಗಿದೆ. ರಾಜಾರೋಷವಾಗಿ ಓಡಾಡುವ ಈ ಚಿರತೆಗಳು ಯಾವ ಸಮಯದಲ್ಲಿ ಬಂದು ದಾಳಿ ಮಾಡುತ್ತವೆ ಎನ್ನುವ ಭಯದಲ್ಲಿ ಬದುಕುತ್ತಿದ್ದಾರೆ.

ದಿಗ್ಗೇನಹಳ್ಳಿ ಗ್ರಾಮದಲ್ಲಿರುವ 35ಕ್ಕೂ ಹೆಚ್ಚು ನಾಯಿಗಳನ್ನು ಚಿರತೆಗಳು ಬೇಟೆಯಾಡಿವೆ. ಕಾಡಿನಲ್ಲಿರಬೇಕಾದ ಕಾಡು ಪ್ರಾಣಿಗಳು ಗ್ರಾಮಗಳಿಗೆ ಬಿಂದಾಸ್ ಆಗಿ ಗ್ರಾಮಗಳಿಗೆ ಎಂಟ್ರಿ ಕೊಡುತ್ತಿವೆ. ಸದ್ಯ ಚಿರತೆಗಳ ಸೆರೆಹಿಡಿಯಲು ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಚಿರತೆ ಬಲೆಗೆ ಬೋನು ಹಾಕಿದ್ದರೂ ಪ್ರಯೋಜನವಿಲ್ಲ. ಬೋನಿಗೆ ಬೀಳದ ಚಿರತೆಗಳು ಗ್ರಾಮದಲ್ಲಿ ಭಯ ಹುಟ್ಟಿಸಿವೆ.

ಭದ್ರಾವತಿ ತಾಲೂಕಿನ ದಿಗ್ಗೇನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಎರಡು ಚಿರತೆಗಳು ಬಿಂದಾಸ್ ಆಗಿ ಒಡಾಡಿಕೊಂಡಿವೆ. ಕಾಡಿನಿಂದ ಚಿರತೆಗಳು ಆಹಾರಕ್ಕಾಗಿ ಗ್ರಾಮಗಳತ್ತ ಬೇಟೆಗೆ ಮುಂದಾಗಿವೆ. ಸದ್ಯ ರಾತ್ರಿ ಆದ್ರೆ ಸಾಕು ದಿಗ್ಗೇನಹಳ್ಳಿ, ಆದ್ರಿಹಳ್ಳಿ, ಸೈದರಕಲ್ಲಹಳ್ಳಿ ಗ್ರಾಮಗಳಲ್ಲಿ ಚಿರತೆಯ ಹಾವಳಿ ಜೋರಾಗಿದೆ. ಶಾಂತಿಸಾಗರ ಅರಣ್ಯವ್ಯಾಪ್ತಿಯಲ್ಲಿ ಚಿರತೆಗಳ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿವೆ. ಇದರಿಂದ ಚಿರತೆಗಳು ಗ್ರಾಮಗಳಿಗೆ ನುಗ್ಗಿ ರಾತ್ರಿ ಸಾಕುಪ್ರಾಣಿಗಳನ್ನು ತಿನ್ನುತ್ತಿವೆ. ಅದರಲ್ಲೂ ಸುತ್ತುಮುತ್ತಲಿನ ಗ್ರಾಮದಲ್ಲಿರುವ ನಾಯಿಗಳನ್ನು ಚಿರತೆಗಳು ತಿನ್ನುತ್ತಿವೆ. ಈ ನಾಯಿಗಳ ಸಾವಿನಿಂದ ಸದ್ಯ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಎರಡು ಚಿರತೆಗಳು ಗ್ರಾಮದ ಸುತ್ತುಮುತ್ತಲಿದ್ದು, ಅವು ಯಾವ ಸಂದರ್ಭದಲ್ಲಿ ಅಟ್ಯಾಕ್ ಮಾಡುತ್ತವೆ ಎನ್ನುವುದೇ ಸದ್ಯ ದೊಡ್ಡ ಆತಂಕ ಎದುರಾಗಿದೆ. ಹೀಗಾಗಿ ದಿಗ್ಗೇನಹಳ್ಳಿ ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಸದ್ಯ ಮನೆಯಿಂದ ಹೊರಗೆ ಹೋಗುವುದಕ್ಕೆ ಭಯಬೀಳುತ್ತಿದ್ದಾರೆ.

ಚಿರತೆಗಳ ದಾಳಿ ಕುರಿತು ಈಗಾಗಲೇ ಭದ್ರಾವತಿಯ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಚಿರತೆಯು ಗ್ರಾಮದ ಗಗನ ಎನ್ನುವ ಮಹಿಳೆಯ ಮನೆಯ ಆವರಣದಲ್ಲಿ ಸುತ್ತಾಡಿ ನಾಯಿಯನ್ನು ತೆಗೆದುಕೊಂಡು ಹೋಗಿದೆ. ಇದೇ ಮನೆಯಿಂದ ನಾಲ್ಕು ನಾಯಿಗಳನ್ನು ಚಿರತೆಗಳು ಬೇಟೆಯಾಡಿವೆ. ಚಿರತೆಯು ಮನೆಯ ಆವರಣದಲ್ಲಿ ಓಡಾಡಿಕೊಂಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಗ್ರಾಮದಲ್ಲಿ 35ಕ್ಕೂ ಹೆಚ್ಚು ನಾಯಿಗಳು ಚಿರತೆಗಳಿಗೆ ಬಲಿಯಾಗಿವೆ. ಚಿರತೆಗಳನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ರಾತ್ರಿ ಸಮಯದಲ್ಲಿ ಎರಡು ಚಿರತೆಗಳ ಚಲನವಲನ ಈ ಗ್ರಾಮದಲ್ಲಿ ಹೆಚ್ಚಾಗಿದೆ. ಗ್ರಾಮದಲ್ಲಿರುವ ಸಾಕು ಪ್ರಾಣಿಗಳನ್ನು ಗ್ರಾಮಸ್ಥರು ಚಿರತೆಗಳ ಭಯದಿಂದ ಮನೆ ಒಳಗೆ ಕಟ್ಟುತ್ತಿದ್ದಾರೆ. ಭದ್ರಾವತಿಯ ಅರಣ್ಯಾಧಿಕಾರಿಗಳು ಸದ್ಯ ಈ ಎರಡು ಚಿರತೆಗಳ ಬಲೆಗೆ ಬೋನ್ ನನ್ನು ಗ್ರಾಮದಲ್ಲಿಟ್ಟಿದ್ದಾರೆ. ಆದರೆ ಚಾಲಾಕಿ ಚಿರತೆಗಳು ಮಾತ್ರ ಬೋನ್ ಒಳಗೆ ಬೀಳುತ್ತಿಲ್ಲ. ಇದರಿಂದ ಗ್ರಾಮಸ್ಥರು ಆತಂಕ ಮತ್ತಷ್ಟು ಹೆಚ್ಚಾಗಿದೆ. ಗ್ರಾಮಸ್ಥರು ಸಂಜೆಯಾಗುತ್ತಲೇ ಭಯದಿಂದ ಮನೆ ಸೇರುತ್ತಿದ್ದಾರೆ. ಗ್ರಾಮಸ್ಥರಿಗೆ ಅರಣ್ಯದಿಂದ ಕಾಡುಪ್ರಾಣಿಗಳು ಒಂದಲ್ಲ ಒಂದು ಸಮಸ್ಯೆಗಳನ್ನು ಮಾಡುತ್ತಿವೆ.

ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 20.09.2020 ರಿಂದ 26.09.2020

ಕಳೆದ ತಿಂಗಳಷ್ಟೇ ಕರಡಿಯು ಗ್ರಾಮದ ಓರ್ವ ವ್ಯಕ್ತಿಯ ಮೇಲೆ ದಾಳಿ ಮಾಡಿತ್ತು. ಈ ನಡುವೆ ಗದ್ದೆಯಲ್ಲಿ ಕಾಡು ಹಂದಿಗಳ ಹಾವಳಿ ಕೂಡಾ ಜೋರಾಗಿದೆ. ರೈತರ ಮೆಕ್ಕೆಜೋಳ ಬೆಳೆ ಕಾಡು ಹಂದಿಗಳು ಹಾಳುಮಾಡುತ್ತಿವೆ. ಈ ಪ್ರಾಣಿಗಳ ಕಾಟದ ನಡುವೆ ಈಗ ಚಿರತೆಗಳು ಗ್ರಾಮಕ್ಕೆ ಲಗ್ಗೆಯಿಟ್ಟಿವೆ. ಗ್ರಾಮಸ್ಥರು ಸದ್ಯ ನೆಮ್ಮದಿಯಿಂದ ಮನೆಯಿಂದ ಹೊರಗೆ ಹೋಗಿ ಕೆಲಸ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಿರತೆಯನ್ನು ಬೋನಿನಲ್ಲಿ ಬೀಳಿಸುವ ವಿಶ್ವಾಸದಲ್ಲಿದ್ದಾರೆ. ಕಳೆದ ವರ್ಷ ಕೂಡಾ ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು ಆ ಚಿರತೆಯನ್ನು ತಮ್ಮ ಬೋನಿಗೆ ಬೀಳಿಸಿದ್ದರು. ಈ ವರ್ಷ ಕೂಡಾ ಮತ್ತೆ ಚಿರತೆಗಳು ಗ್ರಾಮದಲ್ಲಿ ಪ್ರತ್ಯಕ್ಷವಾಗಿವೆ. ಈ ಚಿರತೆಗಳ ಕಾಟದಿಂದ ತಮಗೆ ಮುಕ್ತಿಕೊಡಬೇಕೆಂದು ಗ್ರಾಮದ ಮುಖಂಡರು ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಕಾಡಿನಲ್ಲಿ ಆಹಾರ ಹುಡುಕುವುದು ಚಿರತೆಗಳಿಗೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳಿಗೆ ಕಾಡಿನ ಸಮೀಪದಲ್ಲಿರುವ ಗ್ರಾಮದಲ್ಲಿರುವ ನಾಯಿಗಳು ಸುಲಭವಾಗಿ ಬಲೆಗೆ ಬೀಳುತ್ತಿವೆ ಎಂಬ ಕಾರಣಕ್ಕೆ ಬರುತ್ತಿವೆ ಎನ್ನಲಾಗಿದೆ. ಸದ್ಯ ಈ ಗ್ರಾಮ ಮತ್ತು ಸುತ್ತಮುತ್ತಲು ರಾತ್ರಿಹೊತ್ತಿನಲ್ಲಿ ಚಿರತೆಗಳ ಓಡಾಟ ಹೆಚ್ಚಾಗಿವೆ. ನಾಯಿಗಳ ಬೇಟೆಯಾಡುವ ಚಿರತೆಗಳಿಗೆ ಅಪ್ಪಿತಪ್ಪಿ ಮನುಷ್ಯರು ಕೈಗೆ ಸಿಕ್ಕರೇ ಕಥೆ ಏನು? ಚಿರತೆಗಳು ನರಭಕ್ಷಕ ಆಗುವ ಮೊದಲೇ ಅವುಗಳನ್ನು ಅರಣ್ಯಾಧಿಕಾರಿಗಳು ತಮ್ಮ ಬಲೆಗೆ ಬೀಳಿಸಬೇಕಿದೆ.

Get In Touch With Us info@kalpa.news Whatsapp: 9481252093

Tags: BhadravathiCC CameracheetahForestKannada News WebsiteLatest News KannadaleopardLocal NewsMalnad NewspantherShimogaShivamogga Newsಚಿರತೆಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸಿಸಿ ಕ್ಯಾಮೆರಾ
Share253Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಸ್ವತಃ ಊಟ ಮಾಡಿ ಮಾದರಿಯಾದ ತಹಶೀಲ್ದಾರ್ ಹಾಗೂ ಆಯುಕ್ತರು

Next Post

ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

kalpa News

kalpa News

Next Post
ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL