ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದಿಂದ ಗುರುವಾರ ರಕ್ತದಾನ ಶಿಬಿರ ನಡೆಸಲಾಯಿತು.
ಸೊರಬ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ. ಹರಿಕೃಷ್ಣ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನದ ಬಗ್ಗೆ ಕೆಲವರಲ್ಲಿ ತಪ್ಪು ಕಲ್ಪನೆಗಳಿವೆ. ರಕ್ತದಾನದಿಂದ ಆರೋಗ್ಯ ವೃದ್ಧಿಸುತ್ತದೆ ಜೊತೆಗೆ ತುರ್ತುಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ ಎಂದರು.
ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಯುವ ಮೋರ್ಚಾದಿಂದ 670 ಯುನಿಟ್ ರಕ್ತವನ್ನು ದಾನ ಮಾಡಲಾಗಿದೆ. ಅ.2ರೊಳಗೆ 1000 ಯುನಿಟ್ ದಾನ ಮಾಡುವ ಗುರಿ ಹೊಂದಲಾಗಿದೆ ಎಂದರು.
ಇದಕ್ಕೂ ಮೊದಲು ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಮೌನಾಚರಣೆ ನಡೆಸಲಾಯಿತು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸದಸ್ಯ ಉದಯ ಸುತ್ತಕೋಟೆ ಅಧ್ಯಕ್ಷತೆ ವಹಿಸಿದ್ದರು. ಪಪಂ ಸದಸ್ಯರಾದ ಮಧುರಾಯ ಜಿ. ಶೇಟ್, ವೀರೇಶ್ ಮೇಸ್ತ್ರಿ, ಪ್ರಭು ಮೇಸ್ತ್ರಿ, ನಟರಾಜ ಉಪ್ಪಿನ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಯ ಶೇವಿರ್, ಯು.ಎಸ್. ಚಿನ್ಮಯ್, ಕಾರ್ಯದರ್ಶಿ ದ್ರುವ ಕುಮಾರ್, ಸಾಮಾಜಿಕ ಜಾಲತಾಣ ಪ್ರಮುಖ ಹರೀಶ್ ಕೊಡಕಣಿ, ಪ್ರಮುಖರಾದ ದೇವೇಂದ್ರಪ್ಪ ಚೆನ್ನಾಪುರ, ಸಂಜೀವ ಆಚಾರಿ, ಶ್ರೀಧರ ಭಂಡಾರಿ, ಅಭಿಷೇಕ್ ಬೆನ್ನೂರು, ಆಶೀಕ್ ನಾಗಪ್ಪ, ರಜಿನಿ ನಾಯ್ಕ್, ಪ್ರಸನ್ನ ಶೇಟ್ ಚಂದ್ರಗುತ್ತಿ, ಶಿವರಾಜ ಸಾರೇಮರೂರು, ಸಂದೀಪಗೌಡ ಯಲವಳ್ಳಿ, ದರ್ಶನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಕ್ಷತಾ ಖಾನಾಪುರ, ಆರೋಗ್ಯ ಶಿಕ್ಷಣಾಧಿಕಾರಿ ಅರುಂಧತಿ ಕಾಳೆ ಸೇರಿದಂತೆ ಹಲವರು ಇದ್ದರು.
ಈ ವೇಳೆ ಮಾತನಾಡಿದ ರಜಿನಿ ನಾಯ್ಕ್, ತಾಲೂಕು ಅಧ್ಯಕ್ಷರಾದ ಗುರುಪ್ರಸನ್ನ ಬಾಸೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಪ್ಪುಗಡ್ಡೆ ನಿರಂಜನ್, ಪಕ್ಷದ ಹಿರಿಯ ಮುಖಂಡ ಗಜಾನನ ರಾಯರು ಸೇರಿದಂತೆ ಹಲವು ಹಿರಿಯರ ಮಾರ್ಗದರ್ಶನ ಹಾಗೂ ಮುಂದಾಳತ್ವದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾಧ್ಯವಾಗಿದೆ. ಇವರೆಲ್ಲರಿಗೂ ಯುವ ಮೋರ್ಚಾದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ರಕ್ತದಾನ ಶಿಬಿರದಲ್ಲಿ 67 ಯುನಿಟ್ ರಕ್ತವನ್ನು ದಾನ ಸಾಗರದ ರೋಟರಿ ರಕ್ತ ನಿಧಿಗೆ ದಾನ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post