ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಅಡಿಯಲ್ಲಿ ಹೊಸಮನೆ ಅಶ್ವತ್ಥ್ ನಗರದ ಶ್ರೀರಾಮ ಘಟಕ ನ.21ರಂದು ಉದ್ಘಾಟನೆಗೊಳ್ಳಲಿದೆ.
ಅಂದು ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ನೂತನ ಘಟಕ ಉದ್ಘಾಟನೆಗೊಳ್ಳಲಿದ್ದು, ಈಗಾಗಲೇ ಎಲ್ಲ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ.
ಅಂದಿನ ಕಾರ್ಯಕ್ರಮದಲ್ಲಿ ಪ್ರಖರ ವಾಗ್ಮಿ, ಹಿಂದೂ ಪರ ಹೋರಾಟಗಾರ್ತಿ ಚೈತ್ರ ಕುಂದಾಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಘಟಕದ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಪಿ. ಮೋಹನ್, ಕಾರ್ಯದರ್ಶಿಯಾಗಿ ಪರಶುರಾಮ್, ಉಪಾಧ್ಯಕ್ಷರಾಗಿ ಪರಶುರಾಮ್, ಸಹ
ಕಾರ್ಯದರ್ಶಿಯಾಗಿ ಪಿ. ಮಂಜುನಾಥ್, ಸದಸ್ಯರಾಗಿ ಲೋಕೇಶ್ ಹಾಗೂ ದೇವರಾಜ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ಇನ್ನು, ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಅದ್ದೂರಿ ತಯಾರಿ ನಡೆದಿದ್ದು, ಚೈತ್ರ ಕುಂದಾಪುರ ಅವರು ಪಾಲ್ಗೊಳ್ಳುತ್ತಿರುವುದು ಉಕ್ಕಿನ ನಗರಿಯ ಹಿಂದೂ ಕಾರ್ಯಕರ್ತರಲ್ಲಿ ಕಾತರ ಹಾಗೂ ಉತ್ಸಾಹವನ್ನು ಹೆಚ್ಚಿಸಿದೆ. ಸಮಸ್ತ ಹಿಂದೂ ಕಾರ್ಯಕರ್ತರು ಹಾಗೂ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಮುಖಂಡರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post