No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಸಹಾನುಭೂತಿಯ ಅವಕಾಶ ತಪ್ಪಿಸಿಕೊಂಡ ಸಿದ್ಧರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 14, 2016
in Army
0
Share on FacebookShare on TwitterShare on WhatsApp
ಸುಪ್ರೀಂ ಕೋರ್ಟಿನ ವಿಚಾರ. ಘನವೆತ್ತ ನ್ಯಾಯಾಧೀಶರಿಗೆ ಕಾನೂನು, ಸಂವಿಧಾನದ ಪಾಠ ಹೇಳಬೇಕಾಗಿಲ್ಲ. ಆದರೆ ವಸ್ತು ಸ್ಥಿತಿಯ ವಿಶ್ಲೇಷಣೆ, ನೀರಿನ ಲಭ್ಯತೆ, ಅದರಿಂದ ಮುಂಬರುವ ದಿನಗಳಲ್ಲಿ ಆಗುವ ಪರಿಣಾಮ ಜಲತಜ್ಞರಿಗಷ್ಟೇ ಗೊತ್ತು. ರಾಜ್ಯದ ಜಲಾಶಯಗಳಿಂದ ಈ ಸಮಯದಲ್ಲಿ ನೀರು ಬಿಟ್ಟರೆ ಇನ್ನು ತುಂಬಿಕೊಳ್ಳುವುದು ಬರುವ ವರ್ಷ ಮಾನ್ಸೂನ್ ಸಮಯದಲ್ಲಿ ಮಾತ್ರ ಎಂಬುವುದು ಅವರಿಗೆ ತಿಳಿದಿಲ್ಲವೇ?
ಲೇಖಕರು: ಆಶಾಢ
ಬೆಂಗಳೂರು ಅಕ್ಷರಶಃ ಹೊತ್ತಿ ಉರಿಯಿತು. ಒಂದು ಕಾಲದಲ್ಲಿ ಪ್ರಶಾಂತ, ತಂಪು, ಉದ್ಯಾನನಗರಿ ಎಂದು ಪ್ರಶಂಸಿಸಲ್ಪಟ್ಟ ಕೆಂಪೇಗೌಡರ ರಾಜಧಾನಿ ಈ ವಾರ ಅಕ್ಷರಶಃ ರಣರಂಗವಾಗಿತ್ತು. ಎಲ್ಲಿ ನೋಡಿದರೂ ಕೈಯಲ್ಲಿ ಬಡಿಗೆ ಹಿಡಿದು, ಕಲ್ಲು ತೂರಾಟ ಮಾಡುತ್ತ ರಕ್ಕಸರಂತೆ ಕೇಕೇ ಹಾಕುವ ಯುವಜನತೆ. ಇನ್ನೊಂದೆಡೆ ನೋಡಿಯೂ ನೋಡದವರಂತೆ, ಕೈಲಾಗದವರಂತೆ ನಿಂತು ನಿಟ್ಟುಸಿರು ಬಿಡುವ ಪೊಲೀಸ್ ವ್ಯವಸ್ಥೆ. ಇವರ ಆಟಾಟೋಪಕ್ಕೆ ಹೊತ್ತಿ ಉರಿಯುತ್ತಿರುವ ತಮಿಳು ನಾಡಿನ ವಾಹನಗಳು. ಇದರ ಹಿಂದೆ ಅದೃಶ್ಯ ರಾಜಕೀಯ ಕೈವಾಡವಿದೆ. ಜನರನ್ನು ಪ್ರಚೋದಿಸಿ, ಅರಾಜಕತೆಯನ್ನು ಉಂಟು ಮಾಡಿ ಮೀಸೆಯಡಿ ನಗುವ ಹಾಗೂ ಅದರಿಂದ ಲಾಭ ಪಡೆಯುವ ಹುನ್ನಾರವೂ ನಡೆದಿದೆ.
ಬೆಳಗ್ಗಿನಿಂದ ಉರಿಯಲು ಪ್ರಾರಂಭವಾದ ಬೆಂಗಳೂರು ರಾತ್ರಿ ವರೆಗೂ ಹೊತ್ತಿ ಉರಿಯುತ್ತಲೇ ಇತ್ತು. ಅದಕ್ಕೆ ಪುಷ್ಟಿ ಕೊಡುವಂತೆ ದೃಶ್ಯ ಮಾಧ್ಯಮಗಳು ಸುದ್ದಿ ಚಿತ್ರಣಗಳನ್ನು ಯಥಾವತ್ತಾಗಿ ಮೇಲಿಂದ ಮೇಲೆ ಮಸಾಲೆಯುಕ್ತವಾಗಿ ಪ್ರಸಾರ ಮಾಡುತ್ತಿದ್ದವು.
ಕೊಡಗಿನ ತಲಕಾವೇರಿಯಲ್ಲಿ ಹುಟ್ಟಿ, ಪೂರ್ವಾಭಿಮುಖವಾಗಿ ಹರಿದು ತಮಿಳು ನಾಡು, ಪುದುಚೇರಿ ಹಾದು ಬಂಗಾಳಕೊಲ್ಲಿ ಸೇರುವ ಕಾವೇರಿ ನದಿಯ ನೀರಿನ ಮೇಲಿನ ಹಕ್ಕಿನ ಕಲಹ ಇಂದು ನಿನ್ನೆಯದ್ದಲ್ಲ. ೧೯೩೫ ರಲ್ಲಿ ಕನ್ನಂಬಾಡಿ ಆಣೆಕಟ್ಟು ಕಟ್ಟಿದ ದಿನದಿಂದ ತಮಿಳು ನಾಡು ತಕರಾರು ತೆಗೆದಿತ್ತು. ನಮ್ಮ ರಾಜ್ಯದಲ್ಲಿ ಹುಟ್ಟಿದ ನದಿಯ ನೀರನ್ನು ಬಳಸುವ ಪ್ರಥಮ ಹಕ್ಕು ನಮಗಲ್ಲವೇ? ಆಣೆಕಟ್ಟು ಕಟ್ಟಿದರೂ ಎಷ್ಟು ನೀರು ಸಂಗ್ರಹಿಸಬಹುದು? ಮಿಕ್ಕಿ ಹರಿದ ನೀರು ವರ್ಷವಿಡೀ ಅವರಿಗೆ ದೊರಕುತ್ತಿಲ್ಲವೇ? ಮಟ್ಟೂರು ಬಳಿ ಕಟ್ಟೆ ಕಟ್ಟಿ ಅವರು ನೀರು ಸಂಗ್ರಹಿಸುದಿಲ್ಲವೇ? ಇಂದು ಪ್ರಾಕೃತಿಕವಾಗಿ ನೀರಿನ ಅಭಾವ ತಲೆದೋರಿದಾಗ ಹಂಚಿ ಬಳಸುವ ಪರಿಜ್ಞಾನ ಎರದೂ ರಾಜ್ಯದವರಿಗೂ ಇರಬೇಕು.
ನೀರಿನ ಹಂಚಿಕೆಯ ವಿಷಯದಲ್ಲಿ ರಾಜಕೀಯ ಮಾಡಿ, ಉದ್ವಿಗ್ನತೆ ಸೃಷ್ಟಿಸಿ ಗಲಭೆ ಉಂಟು ಮಾಡಿದರೆ ತೊಂದರೆಗೀಡಾಗುವವರು ಜನಸಾಮಾನ್ಯರೇ. ಬಂಗಲೆಯಲ್ಲಿ ವಾಸಿಸುವ ರಾಜಕಾರಣಿಗಳಲ್ಲ. ಬೆಂಕಿಯಲ್ಲಿ ಉರಿದುಹೋದ ತಮಿಳು ನಾಡಿನ ಲಾರಿಗಳಲ್ಲಿ ಇದ್ದ ವಸ್ತುಗಳು ಕನ್ನಡಿಗರಿಗೆ ಸೇರಿದ್ದಾಗಿತ್ತು. ಇಪ್ಪತ್ತೊಂದು ಟನ್ ಅಕ್ಕಿ ಉರಿದು ನಷ್ಟವಾದರೆ ಆ ಕನ್ನಡಿಗನಿಗಾದ ನಷ್ಟ ತುಂಬಿ ಕೊಡುವವರು ಯಾರು? ಇದು ಜಲ ವಿವಾದ ಬಗೆಹರಿಸುವ ರೀತಿಯೇ?
ಅದು ಹಾಗಿರಲಿ. ಬೆಂಗಳೂರು ಹೊತ್ತಿ ಉರಿಯುತ್ತಿರುವಾಗ ವಿಶ್ವದ ಕಣ್ಣು ಬೆಂಗಳೂರಿನತ್ತ ತಿರುಗಿದೆ. ಅಮೆರಿಕಾದ ಪ್ರಜೆಗಳಿಗೆ ಅವರ ಸಚಿವಾಲಯದಿಂದ ಮನೆಯೊಳಗೇ ಉಳಿಯುವಂತೆ ಸೂಚನೆ ಬಂದಿದೆ. ಐಟಿ-ಬಿಟಿ ಕಂಪನಿಗಳು ಅನಿರ್ಧಿಷ್ಟಾವಧಿವರೆಗೆ ತಮ್ಮ ವ್ಯವಹಾರಗಳನ್ನು ಮೊಟಕುಗೊಳಿಸಿವೆ. ಇದರಿಂದ ದೇಶದ ಆರ್ಥಿಕ ಪರಿಸ್ಥಿತಿಯ ಮೇಲೂ ವಿಪರೀತ ಪರಿಣಾಮಗಳಾಗುವ ಸಂಭವವಿದೆ. ನಮ್ಮ ಬೆಂಗಳೂರಿನ ಜನಸಂಖ್ಯೆ ಕೋಟಿಯ ಲೆಕ್ಕದಲ್ಲಿದ್ದರೂ, ಕೆಲವೇ ನೂರು ಸಂಖ್ಯೆಯ ಪುಂಡರು ನಗರವನ್ನು ಅಲ್ಲೋಲಕಲ್ಲೋಲ ಮಾಡುತ್ತಿದ್ದಾರೆ. ಜನರು ಸಂಕಷ್ಟದಲ್ಲಿರುವಾಗ ನಮ್ಮ ಘನ ಸರಕಾರವು ಶಾಂತಿ ಕಾಪಾಡಲು ಮನವಿ ಮಾಡುತ್ತಿದೆ.
ಮನವಿ ಮಾಡಲು ಇದು ಚುನಾವಣೆ ಭಾಷಣ ಅಲ್ಲ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವುದು ಸರಕಾರದ ಕರ್ತವ್ಯ. ಅದಕ್ಕಾಗಿ ಪೊಲೀಸ್ ಹಾಗೂ ಇನ್ನಿತರ ರಕ್ಷಣಾ ಪಡೆಗಳ ಬಲವಿದೆ. ಬೇಕಿದ್ದರೆ ಕೇಂದ್ರ ಸರಕಾರದಿಂದಲೂ ಹೆಚ್ಚಿನ ಬಲವನ್ನೂ ತರಿಸಿಕೊಳ್ಳಬಹುದು. ಆದರೆ ರಾಜ್ಯ ಹೊತ್ತಿ ಉರಿಯುತ್ತಿರುವಾಗ ಸರಕಾರದ ಮೃದುದೋರಣೆ ಮನೆಹೊಕ್ಕ ಕಳ್ಳನಲ್ಲಿ ಯಾಚನೆ ಮಾಡಿದಂತಾಗುವುದಿಲ್ಲವೇ? ಚಾಣಕ್ಯ ನೀತಿ ಪ್ರಕಾರ ರಾಜನಲ್ಲಿರಬೇಕಾದ ಯಾವುದೇ ಗುಣಗಳು ಈ ಸರಕಾರದಲ್ಲಿಲ್ಲ. ಇದು ಆಳುವ ಹಕ್ಕನ್ನು ಕಳೆದುಕೊಂಡಿದೆ.
ದಂಗೆಯ ಬಗ್ಗೆ ವಿಶ್ಲೇಷಿಸುವುದಾದರೆ ಜನರ ಸೇಡು ತೀರಿಸಿಕೊಳ್ಳುವ ಉನ್ಮಾದಕರ ಮನೋಸ್ಥಿತಿಯಂತೆ ತೋರುತ್ತಿತ್ತು. ತಮಿಳರ ಮೇಲಿನ ಕೋಪ ರಾಜ್ಯದಲ್ಲಿ ವಾಸಿಸುವ ಅನ್ಯ ಭಾಷಿಗರ ಆಸ್ತಿ ಪಾಸ್ತಿ ಧ್ವಂಸಗೊಳಿಸುವ ಅತಿರೇಕಕ್ಕೆ ಹೋಗಿತ್ತು. ಇಂತಹ ನೆಪದಿಂದ ಸಮಾಜದ ಸ್ವಾಸ್ಥ್ಯ ಕೆಡಿಸುವ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟ ಹಾಕಲೇ ಬೇಕು. ಮೊಟ್ಟಮೊದಲು ತಮಿಳು ನಾಡಿನಲ್ಲಿ ಕನ್ನಡಿಗರ ಹೋಟೆಲ್ ಮೇಲೆ ಧಾಳಿ ನಡೆದಿತ್ತು. ಇದರ ಪ್ರತಿಕಾರವೆಂಬಂತೆ ಬೆಂಗಳೂರಿನಲ್ಲಿ ಶುರುವಾದ ಕಿಚ್ಚು, ಮಂಡ್ಯ, ಮದ್ದೂರು, ಮೈಸೂರಿನತ್ತ ಹೊರಳಿದೆ.
ಇಂದು ದೇಶದಲ್ಲಿ ಜಲವಿವಾದ, ಗಡಿತಕರಾರು, ಭಾಷಾವಾರು, ಪ್ರಾಂತ್ಯ ರಚನೆಯಿಂದಾಗಿ ತಮ್ಮ ತಮ್ಮ ಜನರನ್ನು ಮೆಚ್ಚಿಸಲು, ನಾಯಕ ಚೂಡಾಮಣಿಗಳು ವಿವಿಧ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಜಯಲಲಿತಾರ ಮನೋಸ್ಥಿತಿಯೂ ಇದಕ್ಕೆ ಭಿನ್ನವಾಗಿಲ್ಲ. ತಮ್ಮಲ್ಲಿ ಸಾಕಷ್ಟು ನೀರು ದಾಸ್ತಾನು ಇದ್ದರೂ ಮುಂಬರುವ ತಿಂಗಳುಗಳಲ್ಲಿ ಮಾನ್ಸೂನ್ ಮಳೆ ಪ್ರಾರಂಭವಾಗಿ ಹೆಚ್ಚಿನ ಪ್ರಮಾಣದ ನೀರು ಲಭಿಸುವ ಸಾಧ್ಯತೆ ಹೊಂದಿದ್ದರೂ, ರೈತರ ಬಗ್ಗೆ ತನಗಿರುವ ಕಾಳಜಿ ತೋರಿಸಲು ಎಂಬಂತೆ ಪುನಃ ಪುನಃ ನೀರಿನ ಖ್ಯಾತೆ ತೆಗೆಯುತ್ತಿದ್ದಾರೆ.
ಇನ್ನು ಸುಪ್ರೀಂ ಕೋರ್ಟಿನ ವಿಚಾರ. ಘನವೆತ್ತ ನ್ಯಾಯಾಧೀಶರಿಗೆ ಕಾನೂನು, ಸಂವಿಧಾನದ ಪಾಠ ಹೇಳಬೇಕಾಗಿಲ್ಲ. ಆದರೆ ವಸ್ತು ಸ್ಥಿತಿಯ ವಿಶ್ಲೇಷಣೆ, ನೀರಿನ ಲಭ್ಯತೆ, ಅದರಿಂದ ಮುಂಬರುವ ದಿನಗಳಲ್ಲಿ ಆಗುವ ಪರಿಣಾಮ ಜಲತಜ್ಞರಿಗಷ್ಟೇ ಗೊತ್ತು. ರಾಜ್ಯದ ಜಲಾಶಯಗಳಿಂದ ಈ ಸಮಯದಲ್ಲಿ ನೀರು ಬಿಟ್ಟರೆ ಇನ್ನು ತುಂಬಿಕೊಳ್ಳುವುದು ಬರುವ ವರ್ಷ ಮಾನ್ಸೂನ್ ಸಮಯದಲ್ಲಿ ಮಾತ್ರ ಎಂಬುವುದು ಅವರಿಗೆ ತಿಳಿದಿಲ್ಲವೇ?
ಈಗ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಒಂದು ಕಿವಿಮಾತು. ರಾಜ್ಯದ ಎಲ್ಲ ಪಕ್ಷಗಳ ಒಮ್ಮತದ ಸಹಕಾರದಿಂದ ಸುಪ್ರೀಂ ಕೋರ್ಟಿನ ಆದೇಶವನ್ನು ಧಿಕ್ಕರಿಸಿ ನಮ್ಮ ಜನರ ಒಳಿತಿಗಾಗಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಘೋಷಿಸಿರಿ. ಇದರಿಂದಾಗಿ ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ. ಸರಕಾರ ವಿಸರ್ಜಿಸಿದರೂ ಮುಂಬರುವ ಚುನಾವಣೆವರೆಗೆ ನೀವೇ ಅಧಿಕಾರದಲ್ಲಿದ್ದುಕೊಂಡು ಜನರ ಸಹಾನುಭೂಯುತಿಯನ್ನು ಪಡೆಯುತ್ತೀರಿ. ಇತಿಹಾಸದಲ್ಲಿ ಜನರ ಆಶೋತ್ತರಗಳನ್ನು ಈಡೇರಿಸಲು ಸರಕಾರವನ್ನೇ ತ್ಯಾಗ ಮಾಡಿದ ನಾಯಕನೆಂದು ಬಿಂಬಿಸಿಕೊಳ್ಳಿ. ಆದರೆ ಅಂತಹ ಅವಕಾಶವನ್ನು ಸಿದ್ಧರಾಮಯ್ಛ ಬಹುತೇಕ ಕಳೆದುಕೊಂಡಿದ್ದಾರೆ ಎಂದೇ ಹೇಳಬೇಕು.
Share196Tweet123Send
Previous Post

ಬಿಜೆಪಿ ಬೆಳೆಸಲು ಎಸ್‌ಟಿ ಮೋರ್ಚಾ ಮುಂದಾಗಲಿ: ಕೆ.ಎಸ್‌. ಈಶ್ವರಪ್ಪ ಕರೆ

Next Post

ಮನೆಯಲ್ಲಿ ಹೆಣ್ಣು ಮಗು, ಕೊಟ್ಟಿಗೆಯಲ್ಲಿ ಗಂಡು ಕರು ಜನಿಸಿದರೆ ಸಂತಸ ಪಡಿ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆಯಲ್ಲಿ ಹೆಣ್ಣು ಮಗು, ಕೊಟ್ಟಿಗೆಯಲ್ಲಿ ಗಂಡು ಕರು ಜನಿಸಿದರೆ ಸಂತಸ ಪಡಿ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL