ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಹಿರಿಯೂರು ತಾಲೂಕಿನ ಉಡುವಳ್ಳಿ ಬಳಿ ಬೆಳಗಿನ ಜಾವ ಲಾರಿಯೊಂದನ್ನು ತಡೆದು ಚಾಲಕನ ಮೇಲೆ ಹಲ್ಲೆ ನಡೆಸಿ ಚಾಲಕನಲ್ಲಿದ್ದ ಮೊಬೈಲ್ ಹಾಗೂ 15,000 ರೂಪಾಯಿ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.
ಲಾರಿ ಚಾಲಕ ನರಸಿಂಹ ರಾಜು ದರೋಡೆಕೋರರಿಂದ ಹಲ್ಲೆಗೊಳಗಾದ ವ್ಯಕ್ತಿ. ಆತನ ಬಳಿಯಿದ್ದ 15 ಸಾವಿರ ರೂ. ಹಾಗೂ ಒಂದು ಮೊಬೈಲನ್ನು ದೋಚಿದ್ದಾರೆ.ಲಾರಿ ಹಿರಿಯೂರಿನಿಂದ ಬಳ್ಳಾರಿ ಕಡೆಗೆ ಹೋಗುತ್ತಿತ್ತು. ಅದೇ ವೇಳೆಗೆ ಬಿಜಾಪುರದಿಂದ ಮೈಸೂರಿಗೆ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನ ಚಾಲಕ ಸಂಶಯ ಬಂದು ಇಳಿದು ನೋಡಲು ಹೋದಾಗ ಆತನ ತಲೆಗೂ ದರೋಡೆಕೋರರು ಕಲ್ಲಿನಿಂದ ಹೊಡೆದಿದ್ದಾರೆ. ಚಾಲಕ ಅಲ್ಲಿಯೇ ಕುಳಿತು ಕಂಗಾಲಾಗಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ, ಡಿವೈಎಸ್’ಪಿ ರೋಷನ್ ಜಮೀರ್, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಭೇಟಿ ನೀಡಿದ್ದರು. ಚಿತ್ರದುರ್ಗದಿಂದ ಶ್ವಾನದಳವನ್ನು ಕರೆಸಲಾಗಿತ್ತು. ಪ್ರಕರಣವನ್ನು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post