ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿಕಾರಿಪುರ ಪಶು ಆಹಾರ ಘಟಕದಲ್ಲಿ ಹಾಗೂ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ರೈತರು ಗುಬ್ಬಿ ಪಶು ಆಹಾರ ಘಟಕದಲ್ಲಿ ಪ್ರತಿ ಕ್ವಿಂಟಾಲ್ಗೆ 1520/-ರೂ. ದರದಲ್ಲಿ ಖರೀದಿಸಲು ಬೆಂಬಲ ಬೆಲೆಯನ್ನು ನಿಗಧಿಪಡಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಆದೇಶಿಸಿದ್ದು, ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಒಬ್ಬ ರೈತ ಪ್ರತಿ ಎಕರೆಗೆ ಗರಿಷ್ಟ 20 ಕ್ವಿಂಟಾಲ್ಗೆ ಮೀರದಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಟ 5 ಎಕರೆಗೆ 50 ಕ್ವಿಂಟಾಲ್ಗೆ ಮೀರದಂತೆ ಮೆಕ್ಕೆಜೋಳ ಸರಬರಾಜಿಗೆ ಅವಕಾಶ ಕಲ್ಪಿಸಲಾಗಿದ್ದು, ಮೆಕ್ಕೆಜೋಳ ಬೆಳೆದ ರೈತರು ಈ ಸದಾವಕಾಶವನ್ನು ಬಳಸಿಕೊಳ್ಳುವಂತೆ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ಮೆಕ್ಕೆಜೋಳ ಬೆಳೆದ ರೈತರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯದೆ ಆರ್ಥಿಕವಾಗಿ ತೊಂದರೆಯಾಗುತ್ತಿರುವುದನ್ನು ಗಮನಿಸಿ, ಮೆಕ್ಕೆಜೋಳವನ್ನು ಪಶುಆಹಾರ ಘಟಕಗಳಲ್ಲಿ ಬೆಂಬಲಬೆಲೆ ಘೋಷಿಸಿ ಖರೀದಿಸುವಂತೆ ಸಂಸದರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಆದೇಶವನ್ನು ಹೊರಡಿಸಿದ ಕೆಎಎಫ್. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ. ಸತೀಶ್ ಅವರುಗಳಿಗೆ ಮೆಕ್ಕೆಜೋಳ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post