ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವುದು ತೀವ್ರ ಆಘಾತ ತಂದಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಮುಂಜಾನೆಯೇ ಈ ಆಘಾತಕಾರಿ ಸುದ್ದಿ ತಿಳಿದು ತೀವ್ರ ದುಃಖ ಉಂಟಾಯಿತು. ರಾಜಕಾರಣಿಗಳಿಗೆ ಮಾದರಿ ಎಂಬಂತೆ ಸೌಮ್ಯ ಸ್ವಭಾವ ಹೊಂದಿದ್ದ ಧರ್ಮೇಗೌಡರು ಇಂತಹ ಒಂದು ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎಂದರೆ ನಂಬುವುದು ಕಷ್ಟವಾಗುತ್ತದೆ ಎಂದರು.

ಸದಾ ಕಾಲ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ, ಜನರ ನಡುವೆ ಅತ್ಯಂತ ಸರಳವಾಗಿಯೇ ಬೆಳೆದು ಈ ಮಟ್ಟಕ್ಕೆ ಬೆಳೆದಿದ್ದ ಅವರ ಅಕಾಲಿಕ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಧರ್ಮೇಗೌಡರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















