ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗದ ಯೋಜನೆಗೆ ಬಳಸಿಕೊಳ್ಳುವ ಕುಷ್ಕಿ ಜಮೀನಿಗೆ ಪ್ರತಿ ಎಕರೆಗೆ 1.5 ಕೋಟಿ ರೂ. ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಈ ಕುರಿತಂತೆ ನಿರಾಶ್ರಿತ ರೈತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮನವಿ ಮಾಡಿದ್ದಾರೆ.

ರೈತರ ಬೇಡಿಕೆಗಳೇನು?
- ಪ್ರತಿ ಎಕರೆ ಕುಷ್ಕಿ ಜಮೀನಿಗೆ 1.5 ಕೋಟಿ ಪರಿಹಾರ ನೀಡಬೇಕು
- ಇಲ್ಲವಾದಲ್ಲಿ ರೈತರಿಗೆ ಅದೇ ಗ್ರಾಮದಲ್ಲಿ ಪರ್ಯಾಯ ಜಮೀನು ನೀಡಬೇಕು
- ಪ್ರತಿ ಎಕರೆ ಅಡಕೆ ತೋಟಕ್ಕೆ 2.5 ಕೋಟಿ ಪರಿಹಾರ ನೀಡಬೇಕು
- ನಿರಾಶ್ರಿತರ ರೈತರ ಕುಟುಂಬಕ್ಕೆ ಉದ್ಯೋಗ ಕೊಡಬೇಕು
- ರೈತರು ಜಮೀನಿಗೆ ಹೋಗಲು ರಸ್ತೆ ಮಾಡಿಕೊಡಬೇಕು
- ಸರ್ಕಾರಿ ಜಮೀನು, ಸರ್ಕಾರಿ ಪಡಾ, ಬಗರ್ ಹುಕುಂ, ಗ್ರಾಮಠಾಣಾಗಳಿಗೆ ಸೂಕ್ತವಾದ ಜಮೀನು ನಿಗದಿಪಡಿಸಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post