No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೆ.20 ರ ನಂತರ ಕಾವೇರಿ ನೀರು ಬಿಡದಿರಲು ಸಿಎಂ ನಿರ್ಧಾರ?

kalpa News by kalpa News
September 16, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಸೆ.16: ತಮಿಳುನಾಡಿಗೆ ಸೆಪ್ಟೆಂಬರ್ 20ರ ನಂತರ ಕಾವೇರಿ ನೀರು ಬಿಡಲು ನಾನು ಸಿದ್ಧನಿಲ್ಲ. ಸರ್ಕಾರ ವಜಾ ಆದರೂ ಚಿಂತೆಯಿಲ್ಲ ಎಂದು ಆಪ್ತ ಸಚಿವರ ಎದುರು ಗುಡುಗಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರ ಬಿದ್ದರೆ ಬೀಳಲಿ, ಜನತಾ ನ್ಯಾಯಾಲಯಕ್ಕೆ ಹೋಗಲು ಸಜ್ಜಾಗೋಣ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಸುಪ್ರೀಂಕೋರ್ಟ್ ಆದೇಶದ ಅನ್ವಯ ಸೆ.20ರ ತನಕ ನೀರು ಕೊಡುವುದೇ ಕಷ್ಟ. ಹೀಗಿರುವಾಗ ಸೆ.20ರಂದು ನ್ಯಾಯಾಲಯ ಮತ್ತೆ ತೀರ್ಪು ನೀಡಿ, ತಮಿಳುನಾಡಿಗೆ ನೀರು ಬಿಡಿ ಎಂದರೆ ಸ್ಪಷ್ಟವಾಗಿ ಆ ಆದೇಶ ಉಲ್ಲಂಘಿಸುತ್ತೇನೆ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದಿದ್ದಾರೆ.
ಉನ್ನತ ಮೂಲಗಳು ಈ ವಿಷಯ ಸ್ಪಷ್ಟಪಡಿಸಿದ್ದು, ಸೆ.20ರ ನಂತರವೂ ನೀರು ಬಿಡುವ ಸ್ಥಿತಿ ಬಂದರೆ ಕಾವೇರಿ ನೀರನ್ನು ನೆಚ್ಚಿಕೊಂಡ ಜನರಿಗೆ ಕುಡಿಯಲು ನೀರು ಕೊಡಲು ಸಾಧ್ಯವಿಲ್ಲ. ಈ ರೀತಿ ನಿಮಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಜನರ ಮುಂದೆ ಅಸಹಾಯಕನಾಗಿ ನಿಲ್ಲುವುದಕ್ಕಿಂತ ಸಿಎಂ ಪಟ್ಟದಿಂದ ಕೆಳಗಿಳಿಯುವುದೇ ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ
ಎಂದಿವೆ.
ಸೆ.20ರ ತನಕ ನೀರು ಬಿಡುಗಡೆ ಮಾಡಿದ ನಂತರ ನಮ್ಮಲ್ಲಿ ಉಳಿಯುವ ನೀರನ್ನು ಕುಡಿಯುವ ನೀರಿಗೆ ಒದಗಿಸಲು ಪರದಾಡಬೇಕಿದೆ.ಹೀಗಿರುವಾಗ ಮಳೆಯೇ ಬಾರದಿದ್ದರೆ ಸೆ.20ರ ನಂತರ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ.
ಒಂದು ವೇಳೆ ನ್ಯಾಯಾಲಯ ಕಾವೇರಿ ನೀರನ್ನು ಸೆ.20ರ ನಂತರವೂ ಬಿಡುಗಡೆ ಮಾಡಿ ಎಂದರೆ ಮತ್ತು ಆ ಆದೇಶವನ್ನು ನಾವು ಪಾಲಿಸಿದರೆ ಇತ್ತೀಚೆಗೆ ಮಹಾರಾಷ್ಟ್ರದ ಲಾಥೂರ್ ನಲ್ಲಿ ಸೃಷ್ಟಿಯಾದ ಜಲಕ್ಷಾಮ ಇಲ್ಲೂ ಆಗುತ್ತದೆ.
ಹೀಗೆ ಕುಡಿಯಲು ನೀರಿಲ್ಲದೆ ಜಲಕ್ಷಾಮ ಸೃಷ್ಟಿಸಿಕೊಳ್ಳಲು ನಾನು ತಯಾರಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ನೀರಿಗಾಗಿ ಹಾಹಾಕಾರ ಮಾಡುವ ಪರಿಸ್ಥಿತಿ ಜನರಿಗೆ ಬಂದರೆ ಅದನ್ನು ನೋಡಿಕೊಂಡು ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಇಷ್ಟವೂ ಇಲ್ಲ ಎಂದು ಸಿದ್ದರಾಮಯ್ಯ ಆಪ್ತ ಸಚಿವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದಿದ್ದರೆ ಏನಾಗಬಹುದು..? ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ವಜಾ ಮಾಡಬಹುದು. ತಾನೇ ಸೇನೆಯನ್ನು ಮುಂದೆ ನಿಲ್ಲಿಸಿಕೊಂಡು ರಾಜ್ಯದ ಕಾವೇರಿ ನದಿ ಪಾತ್ರದ ಜಲಾಶಯಗಳಿಂದ ನೀರು ಬಿಡಿಸಲು ಮುಂದಾಗಬಹುದು.
ಹಾಗಂತ  ಅಧಿಕಾರಕ್ಕಾಗಿ ಅದನ್ನು ನೋಡಿಕೊಂಡು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಲು ನನಗೆ ಇಷ್ಟವಿಲ್ಲ. ಹೀಗಾಗಿ ಸೆ.20ರ ನಂತರವೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿದರೆ, ಆ ತೀರ್ಪನ್ನು ಉಲ್ಲಂಘಿಸಲು ನಾನು ಸಿದ್ಧ ಎಂದಿದ್ದಾರೆ.
ಅಧಿಕಾರದಲ್ಲಿರುವವರು ಪದತ್ಯಾಗಕ್ಕೆ ಸಜ್ಜಾಗುವುದು ಕಷ್ಟವಾದರೂ ಜನರ ಕಣ್ಣಲ್ಲಿ ಕುಡಿಯುವ ನೀರಿಗೆ ಪರಿತಪಿಸುವ ದೈನ್ಯತೆ ನೋಡುವುದು ಅದಕ್ಕಿಂತ ಕಷ್ಟ ಎಂದು ಸಿದ್ದರಾಮಯ್ಯ ಆಪ್ತರೆದುರು ತಮ್ಮ ಮನದಿಂಗಿತ ತೋಡಿಕೊಂಡಿದ್ದಾರೆ.
ಹೀಗೆ ಸರ್ಕಾರ ವಜಾ ಆದರೂ ಅಡ್ಡಿಯಿಲ್ಲ.ಸೆ.20ರ ನಂತರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ನಾನು ಸಿದ್ಧನಿಲ್ಲ ಎಂದು ಸಿದ್ಧರಾಮಯ್ಯ ಹೇಳಿಕೊಂಡ ಮಾತು ಇದೀಗ ದಿಲ್ಲಿಯವರೆಗೆ ತಲುಪಿದ್ದು, ಇದರ ಬೆನ್ನಲ್ಲೇ ರಹಸ್ಯ ಸಂಧಾನ ಪ್ರಕ್ರಿಯೆಗಳು ಚುರುಕುಗೊಂಡಿವೆ.
ಕಾವೇರಿ ನದಿ ಪಾತ್ರದಲ್ಲಿ ಮುಂದೆ ಮಳೆಯಾದರೆ ತಮಿಳುನಾಡಿಗೆ ಬಿಡುಗಡೆ ಮಾಡಬಹುದು. ಹೀಗಾಗಿ ಸೆ.20ರ ನಂತರ ಕಾವೇರಿಯಿಂದ ನೀರು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ ನೀಡದಂತೆ ನೋಡಿಕೊಳ್ಳಬೇಕು ಎಂದು ದಿಲ್ಲಿ ಮಟ್ಟದಲ್ಲಿ ಸಂಧಾನ ನಡೆಸುತ್ತಿರುವವರು ಸಲಹೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಒಂದು ವೇಳೆ ಸುಪ್ರೀಂಕೋರ್ಟ್ ಏನಾದರೂ ಸೆ.20ರ ನಂತರವೂ ತಮಿಳುನಾಡಿಗೆ ನೀರು ಬಿಡಿ ಎಂದರೆ ಸರ್ಕಾರ ವಜಾ ಆದರೂ ಸಿದ್ದರಾಮಯ್ಯ ಲೆಕ್ಕಿಸುವುದಿಲ್ಲ. ಹೀಗಾಗಿ ನೇರವಾಗಿಯೇ ತೀರ್ಪನ್ನು ಪಾಲಿಸಲು ಸಾಧ್ಯವಿಲ್ಲ ಎನ್ನುತ್ತಾರೆ.
ಒಂದು ಸಲ ಅವರು ಹಾಗೆ ಹೇಳಿದ ಕೂಡಲೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುತ್ತದೆ ಮತ್ತು ಇದನ್ನು ಪರಿಹರಿಸಲು ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವುದು ಅನಿವಾರ್ಯವಾಗುತ್ತದೆ.
ಒಂದು ವೇಳೆ ಕೇಂದ್ರ ಸರ್ಕಾರವೇನಾದರೂ ರಾಜ್ಯ ಸರ್ಕಾರವನ್ನು ವಜಾ ಮಾಡಿ ನೀರು ಬಿಡುಗಡೆಗೆ ಕ್ರಮ ಕೈಗೊಂಡರೆ ಕರ್ನಾಟಕದ ಜನ ದಂಗೆ ಏಳುತ್ತಾರೆ. ಅಷ್ಟೇ ಅಲ್ಲ, ಚುನಾವಣೆ ಆರು ತಿಂಗಳು ಬಿಟ್ಟು ನಡೆದರೂ ಬಿಜೆಪಿ ರಾಜ್ಯದಲ್ಲಿ ಸಂಪೂರ್ಣ ನೆಲ ಕಚ್ಚಿ ಹೋಗುತ್ತದೆ. ಕುಸಿದಿರುವ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಾಗುತ್ತದೆ ಮತ್ತು ಅದು ಭಾರೀ ಜನಬೆಂಬಲದೊಂದಿಗೆ ಅಧಿಕಾರಕ್ಕೆ ಬರಲು ದಾರಿಯಾಗುತ್ತದೆ.
ಇದಕ್ಕೆ ಅವಕಾಶ ನೀಡಬಾರದು ಎಂದರೆ ಸೆ.20ರ ತನಕ ತಮಿಳುನಾಡಿಗೆ ನೀರು ಬಿಟ್ಟಿದ್ದು ಸಾಕು, ಮುಂದಿನ ದಿನಗಳಲ್ಲಿ ಕಾವೇರಿ ನದಿ ಪಾತ್ರದಲ್ಲಿ ಮಳೆ ಬಂದರೆ ಕರ್ನಾಟಕ ನೀರು ಬಿಡುಗಡೆ ಮಾಡುತ್ತದೆ ಎಂಬ ನಂಬಿಕೆ ಮೂಡಿಸುವ ಕೆಲಸವಾಗಬೇಕು ಎಂದು ದಿಲ್ಲಿ ನಾಯಕರಿಗೆ ಸಂಧಾನಕಾರರು ವಿವರಿಸಿದ್ದು, ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಅದೇ ರೀತಿ ಸೆ.20ರಂದು ಸುಪ್ರೀಂಕೋರ್ಟ್ ಮತ್ತೆ ವಿಚಾರಣೆ ಕೈಗೆತ್ತಿಕೊಳ್ಳಲಿದ್ದು, ಅದೇ ಕಾಲಕ್ಕೆ ಕುಡಿಯುವ ನೀರಿಗಾಗಿ ಜನ ಹಾಹಾಕಾರ ಮಾಡುವುದನ್ನು ನೋಡಲಾರೆ. ಸರ್ಕಾರ ವಜಾ ಆದರೂ ಚಿಂತೆಯಿಲ್ಲ ಎಂಬ ಹಠಕ್ಕೆ ಬಿದ್ದಿರುವ ಸಿದ್ದರಾಮಯ್ಯ ಜನತಾ ನ್ಯಾಯಾಲಯಕ್ಕೆ ಹೋಗುವ ಸ್ಥಿತಿ ಬರುತ್ತದಾ..? ಇಲ್ಲವಾ..? ಎಂಬ ಪ್ರಶ್ನೆ ಕಾಡತೊಡಗಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ: ಬಿ ಎಸ್ ಯಡಿಯೂರಪ್ಪ

Next Post

ಕಾವೇರಿ ಗಲಭೆ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ 9 ಎಸ್ ಐ ಅಮಾನತಿಗೆ ಆಯುಕ್ತರ ಮನವಿ

kalpa News

kalpa News

Next Post

ಕಾವೇರಿ ಗಲಭೆ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ 9 ಎಸ್ ಐ ಅಮಾನತಿಗೆ ಆಯುಕ್ತರ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL