ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯದಲ್ಲಿ ಮಾತ್ರವಲ್ಲ, ಇಡಿಯ ದೇಶದಲ್ಲೇ ಕಾಂಗ್ರೆಸ್ ಪಕ್ಷ ಎಲ್ಲೂ ಇಲ್ಲದೇ ಕ್ಷೀಣಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರು ನಿಮ್ಮನ್ನು ತೊರೆದು ಬಿಜೆಪಿಗೆ ಬಂದಿದ್ದಾರೆ. ನಿಮ್ಮ ಪಕ್ಷ ಭಷ್ಟಾಚಾರಿಗಳ ಪಕ್ಷವೆಂದು ನಿಮ್ಮನ್ನು ಅವರು ತೊರೆದರು. ಅವರು ಈಗ ಬಿಜೆಪಿ ಕಾರ್ಯಕರ್ತರು ಎಂದರು.
ಇನ್ನು, ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಕೇಂದ್ರ ಇಲ್ಲ. ಎಲ್ಲಿದೆ ಆ ಪಕ್ಷ ಎಂದು ಕಾಂಗ್ರೆಸ್ ಪಕ್ಷವನ್ನು ಹುಡುಕಬೇಕಿದೆ. ಕ್ಷೀಣಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಚಿಂತಿಸಬೇಕಿದೆ ಎಂದು ಸಲಹೆ ನೀಡಿದರು.
ಪೂರ್ಣ ಬಹುಮತ ನೀಡಿ
ಕಳೆದ ಚುನಾವಣೆಯಲ್ಲಿ ನಮಗೆ ಜನಾದೇಶ ಕೊಟ್ಟರೂ ಬಹುಮತ ನೀಡಲಿಲ್ಲ. ಹೀಗಾಗಿ, ರಾಜ್ಯ ರಾಜಕೀಯದಲ್ಲಿ ಇಷ್ಟೆಲ್ಲಾ ಸಮಸ್ಯೆ ಉದ್ಬವವಾಗಿದೆ. ಹೀಗಾಗಿ, ರಾಜ್ಯದಲ್ಲಿ ಬಲವಾಗಿ ಬೆಳೆದು ನಿಂತಿರುವ ಬಿಜೆಪಿಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ನೀಡಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಬಹಳಷ್ಟು ಆಗಬೇಕಿದೆ. ಇಂತಹ ಸಂದರ್ಭದಲ್ಲಿ ಖಾತೆಗಳಿಗಾಗಿ ಯಾರೂ ಕ್ಯಾತೆ ತೆಗಿಯದೇ, ಸರ್ಕಾರದ ಉತ್ತಮ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸೇವೆ ಸಲ್ಲಿಸಿ ಎಂದು ಖಾತೆಗಳ ವಿಚಾರದಲ್ಲಿ ವಿವಿಧ ಹೇಳಿಕೆ ನೀಡುತ್ತಿರುವವರಿಗೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post