No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕ್ಯಾನ್ಸರ್ ಬಾಧಿತ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಾಂದರ್ಭಿಕ ರಜೆ: ಷಡಾಕ್ಷರಿ ಹೇಳಿಕೆ

kalpa News by kalpa News
February 3, 2021
in Small Bytes, ಶಿವಮೊಗ್ಗ
0
ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯದ ಸರ್ಕಾರಿ ನೌಕರರು ಒಳ-ಹೊರರೋಗಿಯಾಗಿ ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಆರೋಗ್ಯಸಿರಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಯೋಜನೆ ಅಡಿಯಲ್ಲಿ ಎಲ್ಲಾ ವಿಧದ ಔಷದಿಗಳು, ಮೆಡಿಕಲ್ ಇಮೇಜಿಂಗ್ ಸ್ಕ್ಯಾನಿಂಗ್, ಲ್ಯಾಬೊರೇಟರಿ ಪರೀಕ್ಷೆಗಳು, ವಾಹನ ಸೌಲಭ್ಯ ವ್ಯವಸ್ಥೆ ಉಚಿತವಾಗಿ ದೊರೆಯಲಿದ್ದು, ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಎಪ್ರಿಲ್ 1ರಿಂದ ಜಾರಿಗೊಳಿಸಲು ಪೂರಕವಾಗಿರುವ ಸಾಫ್ಟ್‌ವೇರ್ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು, ಕ್ಯಾನ್ಸರ್ ಕಾಯಿಲೆ ಪೀಡಿತ ಸರ್ಕಾರಿ ನೌಕರರಿಗೆ ರೇಡಿಯೇಷನ್/ಕಿಮೋಥೆರಪಿ ಮಾಡಿಸಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವ ಆದೇಶ ಶೀಘ್ರ ಹೊರಬೀಳಲಿದೆ ಎಂದರು.

ಕೇಂದ್ರ ಸರ್ಕಾರದ ಮಾದರಿಯಲ್ಲಿ ಇಡೀ ದೇಶದಲ್ಲಿ ಪ್ರಪ್ರಥಮವಾಗಿ ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಚರಿಸುವುದು ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಈಗಾಗಲೇ ಪ್ರತಿ ವರ್ಷ ಜನವರಿ 26 ರ ಗಣರಾಜ್ಯೋತ್ಸವ ದಿನದಂದು ನೀಡುತ್ತಿರುವ ಸವೋತ್ತಮ ಸೇವಾ ಪ್ರಶಸ್ತಿಯನ್ನು ರಾಜ್ಯ ಸರ್ಕಾರಿ ನೌಕರರ ದಿನದಂದು ನೀಡುವಂತೆ ಆದೇಶ ಸರ್ಕಾರವು ಆದೇಶ ಹೊರಡಿಸಿರುತ್ತದೆ ಎಂದರು.

ಇತ್ತೀಚಿನ ಕೆಲವು ದಿನಗಳಲ್ಲಿ ಸಂಘವು ನೌಕರರ ಹಿತ-ಸುಖ ಕಾಯುವ ನಿಟ್ಟಿನಲ್ಲಿ ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡಿದೆ. ರಾಜ್ಯ ಸರ್ಕಾರಿ ನೌಕರರಿಗೆ 2021ನೇ ವರ್ಷದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ಸರ್ಕಾರವು ಆದೇಶ ಹೊರಡಿಸಿತ್ತು. ಇದರಿಂದಾಗಿ ಸರ್ಕಾರಿ ನೌಕರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳ ಕುರಿತಂತೆ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಗಮನಕ್ಕೆತಂದು, ತಡೆಹಿಡಿಯಲಾಗಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮಂಜೂರು ಮಾಡಿಸಲಾಗಿದೆ ಎಂದರು.
ರಾಜ್ಯದ ಸರ್ಕಾರಿ ನೌಕರರು ಅಕೌಂಟ್ಸ್‌ ಹೈಯರ್/ಲೋಯರ್ ಹಾಗೂ ಜನರಲ್ ಲಾ ಭಾಗ-1 ಮತ್ತು 2 ಇಲಾಖಾ ಪರೀಕ್ಷೆ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಆನ್‌ಲೈನ್ ಮೂಲಕ ತರಗತಿಗಳನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದ ಸರ್ಕಾರಿ ನೌಕರರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಕೋವಿಡ್ ಹಿನ್ನಲೆಯಲ್ಲಿ ತಡೆಹಿಡಿಯಲಾಗಿದ್ದ ಅನುಕಂಪ ಆಧಾರದ ನೇಮಕಾತಿ ಪ್ರಕ್ರಿಯೆಯನ್ನು ಸಂಘದ ಮನವಿಯಂತೆ ಸರ್ಕಾರವು ಪುನ: ಪ್ರಾರಂಭಿಸಿದೆ. ಸರ್ಕಾರವು ಸರ್ಕಾರಿ ನೌಕರರಿಗೆ ಮಾರಕವಾಗುವಂತಹ ಅಂಶಗಳನ್ನು ಸೇರ್ಪಡೆಗೊಳಿಸಲು ಕೆ.ಸಿ.ಎಸ್(ಸಿಸಿಎ) ನಿಯಮಾವಳಿಗೆ ತಿದ್ದುಪಡಿ ಮಾಡುವ ಸಲುವಾಗಿ ಕರಡು ನಿಯಮಾವಳಿಗಳನ್ನು ಪ್ರಕಟಿಸಿದ್ದು, ಸಂಘದ ವತಿಯಿಂದಸರ್ಕಾರಿ ನೌಕರರಿಗೆ ಮಾರಕವಾಗಿರುವ ನಿಯಮಾವಳಿಗಳನ್ನು ಜಾರಿ ಮಾಡದಂತೆ ಸೂಕ್ತ ಆಕ್ಷೇಪಣೆ ಸಲ್ಲಿಸುವ ಮೂಲಕ ಸರ್ಕಾರವು ಉದ್ದೇಶಿಸಿರುವ ತಿದ್ದುಪಡಿ ನಿಯಮಗಳಿಗೆ ತಾತ್ಕಾಲಿಕ ತಡೆ ಹಾಕಲಾಗಿದೆ ಎಂದವರು ವಿವರಿಸಿದರು.

ಎಚ್.ಆರ್.ಎಂ.ಎಸ್ ತಂತ್ರಾಶದ ಮೂಲಕ ವೇತನ ಮತ್ತು ಇನ್ನಿತರೆ ಸೇವಾ ಸವಲತ್ತುಗಳನ್ನು ಪಡೆಯುವಲ್ಲಿ ಸರ್ಕಾರಿ ನೌಕರರು ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದು, ಈ ಬಗ್ಗೆ ಇ-ಆಡಳಿತ ಇಲಾಖೆಯ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ, ನೌಕರರ ಸೇವಾ ವಿವರಗಳನ್ನು ತಿದ್ದುಪಡಿ ಮಾಡಲು, ಜಿಲ್ಲಾ ಮಟ್ಟದಲ್ಲಿ ಮಂಜೂರಾಗುವ ಎಲ್ಲಾ ಸೇವಾ ಸವಲತ್ತುಗಳನ್ನು ಆದೇಶ/ಮಾಹಿತಿಗಳನ್ನು ತಂತ್ರಾಶದಲ್ಲಿ ಇಂದೀಕರಿಸಲು ಹಾಗೂ ದೂರು ದಾಖಲಿಸಲು/ವೀಕ್ಷಿಸಲು ಆಯಾ ಡಿಡಿಓಗಳಿಗೆ ಅಧಿಕಾರ ನೀಡಲು ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಆದೇಶ ಹೊರಬೀಳಲಿದೆ ಎಂದರು.


ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಸಹಶಿಕ್ಷಕರು, ಪದವಿ ಪೂರ್ವಕಾಲೇಜು ಉಪನ್ಯಾಸಕರು ಹಾಗೂ ಭೋಧಕೇತರ ನೌಕರರಿಗೆಕೇಂದ್ರ ಸರ್ಕಾರ ಮಾದರಿಯ ಸರಿಸಮಾನ ವೇತನ, ವೃಂದ ನೇಮಕಾತಿ ನಿಯಮಗಳಿಗೆ ಸಮಗ್ರತಿದ್ದುಪಡಿ ಮಾಡುವ ಮೂಲಕ ವರ್ಷಕ್ಕೆ 2 ಬಾರಿ ಮುಂಬಡ್ತಿ, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಹಾಗೂ ಶಿಕ್ಷಕರು/ಉಪನ್ಯಾಸಕರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲು ಎಲ್ಲಾಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಮಂತ್ರಿಗಳ ಜೊತೆಯಲ್ಲಿ ಐತಿಹಾಸಿಕ ಸಭೆ ನಡೆಸಲಾಗಿದ್ದು, ಶಿಕ್ಷಕರ/ಉಪನ್ಯಾಸಕರು/ಭೋಧಕೇತರ ನೌಕರರಜ್ವಲಂತ ಸಮಸ್ಯೆಗಳು ಶೀಘ್ರ ಇತ್ಯರ್ಥವಾಗಲಿದೆ ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸಭೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರು ಒಪ್ಪಿಗೆ ಸೂಚಿಸಿದ್ದು, ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ರಮೇಶ್, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್. ಮೋಹನ್ ಕುಮಾರ್, ಕಾರ್ಯದರ್ಶಿ ಐ.ಪಿ. ಶಾಂತರಾಜ್, ಉಪಾಧ್ಯಕ್ಷ ಪಾಪಣ್ಣ, ಆರ್. ಮಾರುತಿ, ದಿನೇಶ್, ಸತೀಶ್, ಸಿಂಗ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: C S ShadakshariKannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ. 8-9ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

Next Post

ಎಲೆಮರೆಯ ತ್ರಿಭಾಷಾ ಸಾಹಿತಿ ಯೋಗೀಶ್ ಅಡೆಕಳಕಟ್ಟೆ ಬಗ್ಗೆ ನೀವು ತಿಳಿಯಲೇಬೇಕು

kalpa News

kalpa News

Next Post
ಎಲೆಮರೆಯ ತ್ರಿಭಾಷಾ ಸಾಹಿತಿ ಯೋಗೀಶ್ ಅಡೆಕಳಕಟ್ಟೆ ಬಗ್ಗೆ ನೀವು ತಿಳಿಯಲೇಬೇಕು

ಎಲೆಮರೆಯ ತ್ರಿಭಾಷಾ ಸಾಹಿತಿ ಯೋಗೀಶ್ ಅಡೆಕಳಕಟ್ಟೆ ಬಗ್ಗೆ ನೀವು ತಿಳಿಯಲೇಬೇಕು

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL