No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜೀವನದ ಸಮಸ್ಯೆಗೆ ಸಾಹಿತ್ಯ ಸಂಜೀವಿನಿ: ಡಾ.ಎಂ.ಕೆ.ಭಟ್ ಅಭಿಮತ

ಸೊರಬ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ

kalpa News by kalpa News
February 10, 2021
in Small Bytes, ಸೊರಬ
0
ಜೀವನದ ಸಮಸ್ಯೆಗೆ ಸಾಹಿತ್ಯ ಸಂಜೀವಿನಿ: ಡಾ.ಎಂ.ಕೆ.ಭಟ್ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಕನ್ನಡ ಭಾಷೆ ನೆಲ ಜಲ ಸಮಸ್ಯೆಗಳು ಬಂದಾಗ ಸಮಸ್ತ ಕನ್ನಡಿಗರು ಪಕ್ಷಬೇಧ, ಧರ್ಮಬೇಧ ಮರೆತು ಒಂದಾಗಿ ಹೋರಾಟ ಮಾಡದೆ ನುಣುಚಿಕೊಳ್ಳುವ ಕನ್ನಡ ದ್ರೋಹಿಗಳಿದ್ದಾರೆ ಎಂದು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಂ.ಕೆ.ಭಟ್ ವಿಷಾಧದ ನುಡಿಗಳನ್ನಾಡಿದರು.

ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ತಾಲೂಕು ಕಸಾಪ ಹಾಗೂ ಜಡೆ ಘಟಕದ ವತಿಯಿಂದ ಬುಧವಾರ ಏರ್ಪಡಿಸಿದ್ದ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ನುಡಿಗಳನ್ನಾಡಿದರು.

ಕನ್ನಡ ನಾಡಿನಲ್ಲಿ ಪ್ರತಿಯೊಬ್ಬರೂ ಕನ್ನಡ ಭಾಷೆ ಮಾತನಾಡಲು, ಬರೆಯಲು ಕಲಿಯಬೇಕು. ಸರಕಾರ ಕನ್ನಡ ಭಾಷೆ, ಜನರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವಂತೆ ಕನ್ನಡಿಗರು ಹೋರಾಟ ನಡೆಸಬೇಕು. ನಾಡಿನ ಜನರಿಗೆ ಕನ್ನಡ ಭಾಷಾ ಮೀಸಲಾತಿ ಬೇಕೇ ವಿನಃ ಜಾತಿ ಮೀಸಲಾತಿ ಅಲ್ಲ. ಕನ್ನಡ ಉದ್ಯೋಗ ಒದಗಿಸಿ ಅನ್ನದ ಭಾಷೆಯಾಗುವಂತೆ ಕಟ್ಟಬೇಕು. ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ಕೊಡಬೇಕು. ಮೆಡಿಕಲ್, ಇಂಜಿನಿಯರಿಂಗ್ ಹಾಗೂ ಉನ್ನತ ಶಿಕ್ಷಣ ವ್ಯಾಸಂಗಗಳಲ್ಲಿ ಹೆಚ್ಚಿನ ಮೀಸಲಾತಿ ನೀಡಬೇಕು. ಉದ್ಯೋಗದ ನಿರ್ಣಾಯಕ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದವರಿಗೆ ಹೆಚ್ಚುರಿ 15 ಅಂಕಗಳನ್ನು ನೀಡಬೇಕು. ಆಡಳಿತ ಭಾಷೆ ಅಕ್ಷರಶಃ ಕಾರ್ಯರೂಪಕ್ಕೆ ಬಂದು ಕನ್ನಡ ನಿರ್ಲಕ್ಷಿಸುವವರಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ತಾಲೂಕು ಸಾಹಿತ್ಯ ಸಂಶೊಧನಾ ಕ್ಷೇತ್ರದಲ್ಲಿ ಗಮನಾರ್ಹವಾಗಿದೆ. ಕಾದಂಬರಿ ಬರೆದು ಚಲನಚಿತ್ರದ ಮೂಲಕ ಗಮನ ಸೆಳೆದ ನಡಹಳ್ಳಿ ರಂಗನಾಥ ಶರ್ಮ ಸೇರಿದಂತೆ ತಾಲೂಕಿ ಸಾಹಿತಿಗಳನ್ನು ನೆನಪಿಸಿಕೊಂಡ ಅವರು ಶೋಷಣೆ ಹಾಗೂ ಮೂಢನಬಿಕೆಗಳ ವಿರುದ್ಧ ಧ್ವನಿ ಎತ್ತಿದ ಬಂಡಾಯ ಸಾಹಿತ್ಯವನ್ನು ಒಪ್ಪಿಕೊಳ್ಳುತ್ತೇನೆ. ಜಾತಿ, ವರ್ಗರಹಿತವಾಗಿ ಉತ್ತಮ ಸಮಾಜ ನಿರ್ಮಾಣವಾಗಬೇಕು. ಜೀವನದ ಸಮಸ್ಯೆಗೆ ಸಾಹಿತ್ಯ ಸಂಜೀವಿನಿಯಾಗಿದೆ. ಸ್ಥಳೀಯವಾಗಿರುವ ನದಿ, ದೇವಸ್ಥಾನ, ಕೆರೆಕಟ್ಟೆಗಳು ಹಾಗೂ ಜನರನ್ನು ಗೌರವದಿಂದ ಕಾಣಬೇಕು. ಕುವೆಂಪು, ಬೇಂದ್ರೆ, ಕಾರಂತ ಈ ನೆಲೆದಲ್ಲಿ ಮತ್ತೆ ಜನಿಸಲು ಮಕ್ಕಳಿಗೆ ಸಾಹಿತ್ಯದ ಹುಚ್ಚು ಹತ್ತಿಸಬೇಕು. ಯಾರ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ಸಿಗುವುದಿಲ್ಲವೋ ಆ ಮನೆಯಲ್ಲಿ ಭಯೋತ್ಪಾದಕರು ಜನಿಸುತ್ತಾರೆ. ಬಡವರಿಗೆ ಮದ್ಯ ಕುಡಿಸುವ ಮೂಲಕ ಅವರ ಮನೆ ಹಾಳು ಮಾಡಿ ಸರಕಾರ ನಡೆಸುವುದು ಸರಿಯಲ್ಲ. ರೈತರು ದೇಶದ ಬೆನ್ನೆಲುಬಾಗಿದ್ದು, ಸರಕಾರ ಅವರ ಬೆನ್ನು ಮೂಳೆ ಮುರಿಯುವ ಕೆಲಸ ಮಾಡಬಾರದು. ಜ್ಯೋತಿಷಿಗಳ ಮಾತುಕೇಳಿ ಭವಿಷ್ಯ ನಾಶಮಾಡಿಕೊಳ್ಳಬೇಡಿ ಎಂದ ಅವರು ಜಡೆ ಗ್ರಾಮದಲ್ಲಿ ಜಟಾಯು ಪಕ್ಷಿ ಹೆಣ್ಣಿನ ರಕ್ಷಣೆ ಮಾಡಿದಕ್ಕೆ ಹಾಗೂ ಜಟಾಯುಮುನಿ ತಪಸ್ಸು ಆಚರಿಸಿದ ಸ್ಥಳವಾಗಿದ್ದರಿಂದ ಜಡೆ ಎಂಬ ಹೆಸರು ಬಂದಿದೆ ಎಂದರು.

ಸಮ್ಮೇಳನ ಉದ್ಘಾಟಿಸಿ ಶಾಸಕ ಎಸ್.ಕುಮಾರ್ ಬಂಗಾರಪ್ಪ ಮಾನತಾಡಿ ರಾಜಕೀಯ ದುರುದ್ದೇಶಕ್ಕಾಗಿ ನಾಡುನುಡಿ ಭಾಷೆ ಜಾತಿ ಬಳಕೆ ಸಲ್ಲದು, ಕಾವೇರಿ ನೀರನ್ನು ಕುಡಿಯುವರೆಲ್ಲರು ಕನ್ನಡಿಗರು ಎಂದ ಅವರು ಕನ್ನಡ ಮೊದಲ ರಾಜ ವಂಶಸ್ಥರು ಆಳಿದ ಬನವಾಸಿಯಲ್ಲಿ ವಿಶ್ವ ವಿದ್ಯಾನಿಲಯ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.


ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ಚಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರು ಆಶಯ ನುಡಿಗಳನ್ನಾಡಿದರು. ಸಮ್ಮೇಳನ ಸಂಚಾಲಕ ವಿಜೇಂದ್ರಕುಮಾರ್ ಮಾತನಾಡಿದರು.

ಜಿ.ಪಂ ಸದಸ್ಯ ಶಿವಲಿಂಗೇಗೌಡ ಅವರು ಸಮ್ಮೇಳನದ ಸರ್ವಾಧ್ಯಕ್ಷರ ನೇತೃತ್ವದ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಜನಪದ ಕಲಾ ತಂಡಗಳಿಂದ ಜಡೆಯ ಈಶ್ವರ ಬಸವಣ್ಣ ದೇವಸ್ಥಾನದಿಂದ ಸಂಸ್ಥಾನ ಮಠದ ವರೆಗೆ ಸಾಂಗವಾಗಿ ನೆರವೇರಿತು.

ತಾ.ಪಂ ಸದಸ್ಯೆ ಅಂಜಲಿ ಸಂಜೀವ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದರು.  ಜಿಲ್ಲಾ ಕಸಾಪ ಕಾರ್ಯದರ್ಶಿ ರುದ್ರಮುನಿ ಎನ್. ಸಜ್ಜನ್ ಅವರು ಶಿಕ್ಷಕಿ ಶ್ರೀಮತಿ ಜೋಷಿ ಅವರ ಭಾವ ಅರಳಿದಾಗ’ ಕವನ ಸಂಕಲನ ಬಿಡುಗಡೆ ಮಾಡಿದರು. ಜಡೆ ಹಿರೇಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶಿಕ್ಷಕ ಅಶೋಕ್ ತತ್ತೂರು ಮತ್ತು ತಂಡ ನಾಡಗೀತೆ ಹಾಗೂ ರೈತಗೀತೆ ಹಾಡಿದರು. ಜಡೆ ಕಸಾಪ ಅಧ್ಯಕ್ಷ ಮೃತ್ಯುಂಜಯಗೌಡ ಸ್ವಾಗತಿಸಿ, ಕಾರ್ಯದರ್ಶಿ ಎನ್ ಲಲಿತಾ ವಂದಿಸಿ, ಬಿಆರ್‌ಪಿ ಮಂಜಪ್ಪ ನಿರೂಪಿಸಿದರು.

ಕಸಾಪ ಅಧ್ಯಕ್ಷ ಮಧುರಾಯ್ ಜಿ.ಶೇಟ್ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸೂರ್ಯನಾರಾಯಣ ಹೆಗಡೆ, ನಿಕಟಪೂರ್ವ ಅಧ್ಯಕ್ಷ ಹಾಲೇಶ ನವುಲೆ, ಕೋಶಾಧ್ಯಕ್ಷ ಮಹೇಶ್ ಗೋಖಲೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಹುನವಳ್ಳಿ, ಉಳವಿ ಘಟಕದ ಅಧ್ಯಕ್ಷ ಶಿವಕುಮಾರ್, ಆನವಟ್ಟಿ ಘಟಕದ ಅಧ್ಯಕ್ಷ ಉಮೇಶ್ ಬಿಚ್ಚುಗತ್ತಿ, ರಾಜಶೇಖರ್ ಪಾಟೀಲ್, ಬೋರ್ಕೆ ಮಾಸ್ತರ್, ವಿಶ್ವನಾಥ ನಾಡಿಗೇರ, ಕಾಳಿಂಗರಾಜ್ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSahitya sammelanaShimogaShivamoggaShivamogga NewsSorabaಕನ್ನಡ ಭಾಷೆಸೊರಬ
Share242Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಗುರಿಯಿದೆ: ಬಿ.ಸಿ. ಪಾಟೀಲ್

Next Post

ದಾಸಸಾಹಿತ್ಯದ ಮೇರುಶೃಂಗ “ಶ್ರೀ ಪುರಂದರದಾಸರು”

kalpa News

kalpa News

Next Post
ಬೆಂಗಳೂರಿನಲ್ಲಿ ಜ.20ರಂದು ಲೋಕಾರ್ಪಣೆಯಾಗಲಿದೆ ದಾಸಶ್ರೇಷ್ಠ ಪುರಂದರದಾಸರ ಏಕಶಿಲಾ ಪ್ರತಿಮೆ

ದಾಸಸಾಹಿತ್ಯದ ಮೇರುಶೃಂಗ "ಶ್ರೀ ಪುರಂದರದಾಸರು"

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL