ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಉಪವಿಭಾಗ ಡಿಎಸ್ಪಿ ಪ್ರಶಾಂತ್ ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ವಿನೋಬನಗರ ವೃತ್ತ ಸಿಪಿಐ ಎನ್.ಎಸ್. ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ವಾಸಿ ರಮೇಶ (67) ಬಂಧಿತ ಆರೋಪಿಯಾಗಿದ್ದು, 2020ನೇ ಸಾಲಿನಲ್ಲಿ ಜಯನಗರ ಮತ್ತು ವಿನೋಬನಗರ ಠಾಣೆಯಲ್ಲಿ ದಾಖಲಾದ ಪ್ರತ್ಯೇಕ ಎರಡು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ 12ಲಕ್ಷ ರೂ. ಮೌಲ್ಯದ 255 ಗ್ರಾಂ ಚಿನ್ನಾಭರಣ ಹಾಗೂ 170ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಜಯನಗರ ಠಾಣೆ ಪಿಎಸ್ಐ ಕೋಮಲ, ಎಎಸ್ಐ ಕೆ. ಸೋಮು ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. ಸುಧಾಕರ್, ಪಿ.ಸಿ. ಆದರ್ಶ್, ಶಿವರಾಜ್ ನಾಯಕ್, ರಾಮಕೃಷ್ಣ, ರೋಷನ್ರವರುಗಳನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post