No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವಂತೆ ಮನವಿ: ಸಿ.ಎಸ್.ಷಡಾಕ್ಷರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2021
in ಶಿವಮೊಗ್ಗ
0
ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವಂತೆ ಮನವಿ: ಸಿ.ಎಸ್.ಷಡಾಕ್ಷರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಈ ಹಿಂದೆ ಉದ್ಭವಿಸಿದ ಹಣದುಬ್ಬರ ಪರಿಸ್ಥಿತಿ ಹಾಗೂ ನಿತ್ಯ ಬಳಕೆ ಪದಾರ್ಥಗಳ ಬೆಲೆ ಹೆಚ್ಚಳದಿಂದಾಗಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಸಹಾನುಭೂತಿಯಿಂದ ಪರಿಗಣಿಸಿ, ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ತಡೆಹಿಡಿಯಲಾಗಿರುವ ತುಟ್ಟಿಭತ್ಯೆ ಕಂತುಗಳನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದರ ಜೊತೆಗೆ ಸಂಪ್ರದಾಯದಂತೆ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಬಿಡುಗಡೆಗೊಳಿಸಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಅವರು ಆಯ-ವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಂಪ್ರದಾಯದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನಿಯೋಗವನ್ನು ಚರ್ಚೆಗೆ ಆಹ್ವಾನಿಸಿದ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದರು.


ವಿಶ್ವದಾದ್ಯಂತ ತಲೆದೋರಿದ ಕೋವಿಡ್-19 ಮಾರಕ ರೋಗದ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿ ಮಾಡಿದ್ದರಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸಮತೋಲನಗೊಳಿಸುವ ಸಲುವಾಗಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ತಡೆ ಹಿಡಿಯಲಾಗಿತ್ತು. ಹಾಗೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು ಹಗಲಿರುಳು ಶ್ರಮಿಸಿರುವುದನ್ನು ಮನಗಂಡು ತುಟ್ಟಿ ಭತ್ಯೆ ಮಂಜೂರು ಮಾಡುವಂತೆ ಅವರು ಮುಖ್ಯಮಂತ್ರಿಯವರನ್ನು ವಿನಂತಿಸಿದರು.

ಮೈಸೂರು ಆಡಳಿತ ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ವಿಭಾಗಗಳಲ್ಲಿ ವಸತಿ ಸಹಿತ ಸರ್ಕಾರಿ ನೌಕರರ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು, ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ವಸತಿ ಗೃಹ ನಿರ್ಮಾಣ, ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಹಾಗೂ ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು, ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಾಗೂ ಇನ್ನಿತರ ಸಂಘದ ಕಾರ್ಯಕ್ರಮ, ನಿರ್ವಹಣೆ ಉದ್ದೇಶಕ್ಕೆ ಸಹಾಯಾನುದಾನ ಮಂಜೂರು ಮಾಡುವಂತೆ ಅವರು ಮನವಿ ಮಾಡಿದರು.


ಸರ್ಕಾರಿ ನೌಕರರಿಗೆ – ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಹಾಗೂ ನೌಕರರಿಗೆ ಸುಗಮ ಸೇವೆಗಾಗಿ ಕೆಜಿಐಡಿ ಕಚೇರಿಗಳ ಗಣಕೀಕರಣ ಕಾರ್ಯವನ್ನು ಏಪ್ರಿಲ್ 2021ರಿಂದ ಜಾರಿಗೆ ತರಬೇಕು, ನೌಕರರ ಎಲ್ಲಾ ಸೇವೆಗಳನ್ನು ಆನ್‌ಲೈನ್ ಮೂಲಕ ಜಾರಿಗೊಳಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ ಹಾಲಿ ನೌಕರರ ಮೇಲಿನ ಕಾರ್ಯಭಾರ ಒತ್ತಡವನ್ನು ತಗ್ಗಿಸಬೇಕು. ಶಿಕ್ಷಣ ಇಲಾಖೆಯಲ್ಲಿನ ನೌಕರರ ವೇತನ ತಾರತಮ್ಯವನ್ನು ಸರಿಪಡಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 15, 20, 25 ಮತ್ತು 30 ವರ್ಷಗಳ ವೇತನ ಬಡ್ತಿಯಲ್ಲಿ ಉಂಟಾಗಿರುವ ತಾರತಮ್ಯವನ್ನು ಸರಿಪಡಿಸಬೇಕು. ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯದ ನೌಕರರಿಗೂ ವೇತನ ಪರಿಷ್ಕ್ರಣೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಮಾಸಿಕ ವೇತನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ 21,000ರೂ. ಕನಿಷ್ಟ ವೇತನ ನಿಗಧಿಪಡಿಸಬೇಕು. ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ-2012ರಲ್ಲಿ ಅಧಿಸೂಚಿಸಲ್ಪಟ್ಟ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದಂತೆ ಪೂರ್ಣಪ್ರಮಾಣದಲ್ಲಿ ಮನೆ ಬಾಡಿಗೆ ಭತ್ಯೆ, ವಾರ್ಷಿಕ ವೇತನ ಬಡ್ತಿ ಹಾಗೂ ನಗದು ರಹಿತ ಆರೋಗ್ಯ ಸೌಲಭ್ಯವನ್ನು ನೀಡುವಂತೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆ ದರ ಶೇ.೨೪ರಷ್ಟನ್ನು ಬೆಂಗಳೂರು ನಗರ ಜಿಲ್ಲೆಗೂ ವಿಸ್ತರಿಸುವಂತೆ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

ಪ್ರಸ್ತುತ ರಾಷ್ಟ್ರ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಭಾರತ ಸರ್ಕಾರ ಕೈಗೊಂಡ ಕ್ರಮಗಳು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಈ ಕಾರ್ಯನಿರ್ವಹಣೆಗೆ ಸಂಪೂರ್ಣವಾಗಿ ಸಹಕರಿಸಿದ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರಗಳು ನಿರ್ವಹಿಸಿದ ಪಾತ್ರವನ್ನು ಪ್ರಧಾನ ಮಂತ್ರಿಯವರು ಶ್ಲಾಘಿಸಿರುವುದು ಎಲ್ಲರಲ್ಲೂ ಸಂತಸವನ್ನುಂಟು ಮಾಡಿದೆ ಎಂದು ಇದೇ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಸರ್ಕಾರದ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್, ಹೇಮಲತಾ, ಶಾಲಿನಿ ರಜನೀಶ್, ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್ ಸೇರಿದಂತೆ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: agriculture university shimogaB S YadiyurappaBangaloreKannada News WebsiteLatest Kannada NewsLocal NewsMalnad NewsShimogaShivamogga NewsState Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಕುರಿ-ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ

Next Post

ಬೆಳಕಿನ ವಿನ್ಯಾಸ-ನಿರ್ವಹಣೆ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳಕಿನ ವಿನ್ಯಾಸ-ನಿರ್ವಹಣೆ ಕಾರ್ಯಾಗಾರ

ಬೆಳಕಿನ ವಿನ್ಯಾಸ-ನಿರ್ವಹಣೆ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್

June 4, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮೊದಲ ದಿನವೇ ಸಿಎಂ ಖಡಕ್ ಸಂದೇಶ | ಸಚಿವರಿಗೆ 24/7 ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚನೆ

June 4, 2026
ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

June 4, 2026
ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

June 4, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL