No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ: ಸಚಿವ ಜಗದೀಶ ಶೆಟ್ಟರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2021
in ಬೆಂಗಳೂರು ನಗರ
0
ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ: ಸಚಿವ ಜಗದೀಶ ಶೆಟ್ಟರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿಯ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿಸಿದೆ. ಇವೆಲ್ಲ ಕ್ರಮಗಳು ಅನುಷ್ಠಾನದಿಂದಾಗಿ ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಬೆಂಗಳೂರಿನಲ್ಲಿ ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ ಆಫ್ ಡ್ಯೂಯಿಂಗ್ ಬ್ಯುಸಿನೆಸ್ ವೇಬಿನಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಭಾರತ ದೇಶವನ್ನು ಕೈಗಾರಿಕಾ ಮತ್ತು ಬಂಡವಾಳ ಹೂಡಿಕೆ ಸ್ನೇಹಿ ದೇಶವನ್ನಾಗಿಸಿದೆ. ವಿಶ್ವ ಬ್ಯಾಂಕಿನ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಸುಚ್ಯಾಂಕದಲ್ಲಿ 2014ನೇ ಸಾಲಿನಲ್ಲಿ 142 ನೇ ಸ್ಥಾನದಲ್ಲಿದ್ದ ಭಾರತ ದೇಶ 2019 ರಲ್ಲಿ 63 ನೇ ಸ್ಥಾನ ಪಡೆದುಕೊಂಡಿರುವುದು ಇದಕ್ಕೆ ಸಾಕ್ಷಿ. ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತಿ ಪಡೆದಿರುವ ಕರ್ನಾಟಕ ರಾಜ್ಯ, ಐಟಿ, ಮಾಹಿತಿ ತಂತ್ರಜ್ಞಾನ ಅವಲಂಬಿತ ಸೇವೆಗಳು, ಮಷೀನ್ ಟೂಲ್ಸ್, ಏರೋಸ್ಪೇಸ್, ಬಯೋಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಡಿಸೈನ್ ಕ್ಷೇತ್ರದಲ್ಲಿ ಮುಂಚೂಣಿಯ ಸ್ಥಾನ ಹೊಂದಿದೆ ಎಂದು ಹೇಳಿದರು.


ಇದೇ ರೀತಿ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲೂ ಮುಂಚೂಣಿಯಲ್ಲಿದ್ದು, ಕೈಗಾರಿಕಾ ಸ್ನೇಹಿ, ಪಾರದರ್ಶಕ ಮತ್ತು ಸರಳೀಕೃತ ನಿಯಮಾವಳಿಗಳು ಮತ್ತು ಕಾನೂನುಗಳಿಂದಾಗಿ ರಾಜ್ಯದಲ್ಲಿ ಬೃಹತ್ ಅಷ್ಟೇ ಅಲ್ಲದೆ, ಎಮ್‌ಎಸ್‌ಎಂಇ ಮತ್ತು ಸ್ಟಾರ್ಟ್ ಅಪ್‌ಗಳನ್ನು ರಾಜ್ಯದಲ್ಲಿ ಸ್ಥಾಪನೆಯ ಕಾರ್ಯವನ್ನು ಸುಲಭಗೊಳಿಸಿವೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾದ ಎಬಿಸಿ ಅಫಿಡವಿಟ್ ಬೇಸ್ಡ್ ಕ್ಲೀಯರೆನ್ಸ್ ಸ್ಕೀಮ್, ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮ ಮತ್ತು ನೂತನ ಕೈಗಾರಿಕಾ ನೀತಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಇದ್ದಂತಹ ಬಹಳಷ್ಟು ತೊಡಕುಗಳನ್ನು ಸರಳೀಕೃತಗೊಳಿಸುವಲ್ಲಿ ಯಶಸ್ವಿಯಾಗಿವೆ. ಈ ಎಲ್ಲಾ ಉಪಕ್ರಮಗಳು ಮುಂಬರುವ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಸೂಚ್ಯಾಂಕದಲ್ಲಿ ನಮ್ಮ ರಾಜ್ಯ ಪ್ರಮುಖ ಸ್ಥಾನ ಪಡೆದುಕೊಳ್ಳುವಲ್ಲಿ ಮುಖ್ಯ ಪಾತ್ರವನ್ನು ವಹಿಸಲಿವೆ ಎಂದು ವಿವರಿಸಿದರು.


ಪ್ರತಿ ವರ್ಷವೂ ನಾವು ರಾಜ್ಯದಲ್ಲಿದ್ದ ಜಟಿಲ ನಿಯಮಾವಳಿಗಳನ್ನು ಸರಳೀಕೃತಗೊಳಿಸುವತ್ತ ಹೆಚ್ಚಿನ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್‌ನಿಂದಾಗಿ ಕೈಗಾರಿಕಾ ಕ್ಷೇತ್ರದಲ್ಲಿ ಕ್ಷಿಪ್ರವಾಗಿ ಅಭಿವೃದ್ದಿಯನ್ನು ಕಾಣಬಹುದು ಎಂಬುದನ್ನು ನಾವು ಅರಿತುಕೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಗೌರವ್ ಗುಪ್ತಾ, ಡಿಪಿಐಟಿ ನಿರ್ದೇಶಕಿ ಸುಪ್ರಿಯಾ ಎಸ್ ದೇವಸ್ಥಲ್ಲಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ. ಎನ್. ಶಿವಶಂಕರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreKannada News WebsiteLatest News KannadaMinister Jagadish ShettarState Newsಬೆಂಗಳೂರು
Share198Tweet123Send
Previous Post

ಮಂಡ್ಯ: ನಾಮಸಹಸ್ರಂ ಯೋಜನೆಯ ಎರಡನೇ ಕಾರ್ಯಕ್ರಮ ಯಶಸ್ವಿ

Next Post

ಕೆರೂರು ಏತ ನೀರಾವರಿ ಜಾರಿಗೆ ಸಿದ್ಧರಾಮಯ್ಯ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆರೂರು ಏತ ನೀರಾವರಿ ಜಾರಿಗೆ ಸಿದ್ಧರಾಮಯ್ಯ ಒತ್ತಾಯ

ಕೆರೂರು ಏತ ನೀರಾವರಿ ಜಾರಿಗೆ ಸಿದ್ಧರಾಮಯ್ಯ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

March 11, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL