No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರಾಮಕೃಷ್ಣ-ವಿವೇಕಾನಂದರ ನಿವೇದಿತಾ, ತನ್ನದೆಲ್ಲವನ್ನೂ ಭಾರತದ ಏಳಿಗೆಗಾಗಿ ಸಮರ್ಪಿಸಿದ ಮಹಾತಾಯಿ

ಇಂದು ಮಾರ್ಚ್ 25 ದೀಕ್ಷಾ ದಿವಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2021
in Special Articles
0
ರಾಮಕೃಷ್ಣ-ವಿವೇಕಾನಂದರ ನಿವೇದಿತಾ, ತನ್ನದೆಲ್ಲವನ್ನೂ ಭಾರತದ ಏಳಿಗೆಗಾಗಿ ಸಮರ್ಪಿಸಿದ ಮಹಾತಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನಾನು ಸತ್ಯವಾಗಿ ಹೇಳುತ್ತಿದ್ದೇನೆ, ನಿನಗೆ ಇಲ್ಲಿ ಉಜ್ವಲ ಭವಿಷ್ಯ ದೊರೆಯುವುದು ಎಂಬುದನ್ನು ನಾನು ಅರಿತುಕೊಂಡಿದ್ದೇನೆ. ನಮಗೆ ಈಗ ಬೇಕಾಗಿರುವುದು ಮನುಷ್ಯರಲ್ಲ, ಆದರೆ ಸ್ತ್ರೀ; ನಿಜವಾದ ಸಿಂಹಿಣಿ, ಯಾರು ಈ ಭಾರತದ ಅದರಲ್ಲೂ ವಿಶೇಷವಾಗಿ ಭಾರತದ ಸ್ತ್ರೀಯರ ಉದ್ಧಾರಕ್ಕಾಗಿ ಕಾರ್ಯ ಮಾಡಬಲ್ಲರೊ ಅಂತಹವರು, ಸ್ವಾಮಿ ವಿವೇಕಾನಂದರು ಮಾರ್ಗರೇಟ್ ಎಲಿಜಬೆತ್ ನೋಬೆಲ್’ಗೆ ಬರೆದ ಪತ್ರ. ಈ ಪತ್ರದಿಂದ ಶುರುವಾಗುವುದು ಮಾರ್ಗರೇಟ್ ಎಲಿಜಬೆತ್ ನೋಬೆಲ್ ಎಂಬ ಐರಿಷ್ ಹೆಣ್ಣು ಮಗಳು ಭಾರತೀಯತನವನ್ನು ತನ್ನ ಉಸಿರನ್ನಾಗಿಸಿಕೊಂಡು, ಭಾರತಕ್ಕಾಗಿ ಪರಿಪೂರ್ಣ ರೀತಿಯಲ್ಲಿ ನಿವೇದನೆಯಾಗಿ ‘ಸೋದರಿ ನಿವೇದಿತಾ’ ಎಂಬ ಭಾರತೀಯ ಹೆಣ್ಣು ಮಗಳಾದ ಪರಿವರ್ತನೆಯ ಮಹಾಗಾಥೆ. ಈ ಮಹಾಯಜ್ಞದ ಕಾರ್ಯಕ್ಕೆ ಚಾಲನೆ ನೀಡಿದ ಪವಿತ್ರದಿನವೇ ’ದೀಕ್ಷಾದಿವಸ್’( 1898 ಮಾರ್ಚ್ 25 ), ಅಂದೇ ವಿವೇಕಾನಂದರು ಮಾರ್ಗರೇಟ್ ನೋಬೆಲ್ ಗೆ ’ನಿವೇದಿತಾ’ ಎಂಬ ಹೊಸ ಹೆಸರು ನೀಡಿ ಭಾರತದ ಸೇವೆಗೆಂದು ಅವರನ್ನು ಶ್ರೇಷ್ಠ ಪುಷ್ಪವಾಗಿ ಸಮರ್ಪಿಸಿದರು.


ಪ್ರಪಂಚದ ಇಡೀ ಇತಿಹಾಸವು ಭಾರತೀಯ ಬುದ್ಧಿಶಕ್ತಿ ಯಾವುದಕ್ಕೂ ಎರಡನೆಯದಲ್ಲ ಎಂಬುದನ್ನು ತೋರ್ಪಡಿಸುತ್ತದೆ. ಇತರರ ಶಕ್ತಿಯನ್ನು ಮೀರಿಸುವ ಕಾರ್ಯಕ್ಷಮತೆಯಿಂದ ಹಾಗೂ ಪ್ರಪಂಚದ ಬೌದ್ಧಿಕ ಪ್ರಗತಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಳ್ಳುವುದರಿಂದ ಇದನ್ನು ಸಾಬೀತುಪಡಿಸಬೇಕು. ಇದನ್ನು ಮಾಡಲು ನಮಗೆ ಅಸಾಧ್ಯವಾಗುವಂತಹ ಯಾವುದೇ ಅಂತರ್ಗತ ದೌರ್ಬಲ್ಯವಿದೆಯೇ? ಭಾಸ್ಕರಾಚಾರ್ಯ ಮತ್ತು ಶಂಕರಾಚಾರ್ಯರಂತಹ ದೇಶವಾಸಿಗಳು ನ್ಯೂಟನ್ ಮತ್ತು ಡಾರ್ವಿನ್ ಗಳಿಗಿಂತ ಕೆಳಮಟ್ಟದಲ್ಲಿದ್ದಾರೆಯೆ? ನಾವು ಇದನ್ನು ನಂಬುವುದಿಲ್ಲ. ನಮ್ಮ ಆಲೋಚನಾ ಶಕ್ತಿಯಿಂದ, ನಮ್ಮನ್ನು ಎದುರಿಸುವ ವಿರೋಧದ ಕಬ್ಬಿಣದ ಗೋಡೆಗಳನ್ನು ಒಡೆದು ಮತ್ತು ಪ್ರಪಂಚದ ಬೌದ್ಧಿಕ ಸಾರ್ವಭೌಮತ್ವವನ್ನು ವಶಪಡಿಸಿಕೊಂಡು ಅದನ್ನು ನಾವು ಆನಂದಿಸಬೇಕು- ಕರ್ಮಯೋಗಿನ್ ನಲ್ಲಿ ಸೋದರಿ ನಿವೇದಿತಾ. ಈ ರೀತಿಯ ನಿವೇದಿತಾರ ಅನೇಕಾನೇಕ ವಿಚಾರಗಳು ಇಂದಿಗೂ ಕೂಡ ಪ್ರಸ್ತುತವೆನಿಸುತ್ತದೆ.

21ನೇ ಶತಮಾನದಲ್ಲಿ ಅತಿಯಾಗಿ ಕಾಡುತ್ತಿರುವ ಬೌದ್ಧಿಕತೆಯ ಆಕ್ರಮಣದ ಸಮಸ್ಯೆಗೆ ಅಂದೇ 19ನೆಯ ಶತಮಾನದಲ್ಲಿಯೇ ಉತ್ತರವನ್ನು ಬರೆದಿದ್ದಾರೆ. ಆದರೆ ಅವರು ಹೀಗೆ ಬೌದ್ಧಿಕ ಕ್ಷೇತ್ರದಲ್ಲಿ ಭರತ ಭೂಮಿಯು ಸಾರ್ವಭೌಮತ್ವವನ್ನು ಸಾಧಿಸಬಹುದೆಂದು ನಿರೂಪಿಸಿದದ್ದು ಇಂದಿನ ಅಭಿವೃದ್ಧಿ ಪಥದ ಸಕ್ಷಮ ಭಾರತದ ಸಂದರ್ಭದಲ್ಲಲ್ಲ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಬ್ರಿಟಿಷರ ಕ್ರೌರ್ಯ ಆಡಳಿತ ವೈಖರಿಯ ಪೆಟ್ಟನ್ನು ತಿನ್ನುತ್ತಾ, ತಮ್ಮ ಸೌಜನ್ಯತೆಗೆ ವ್ಯತಿರಿಕ್ತವಾದ ಅಧರ್ಮ ಕ್ರಿಯೆಯ ಹಾದಿಯಲ್ಲಿ ಸಾಗುತ್ತಿದ್ದ ಇಂಗ್ಲೀಷರನ್ನು ಎದುರಿಸುತ್ತಾ, ರಾಷ್ಟ್ರದ ಸಂಸ್ಕೃತಿ- ಪರಂಪರೆಯ ಆತ್ಮವಿಸ್ಮೃತಿಯ ದಾರಿಯಲ್ಲಿ ಬಲವಂತವಾಗಿ ಸಾಗಲು ದೂಡಿದ್ದಂತಹ ಪರಿಸ್ಥಿತಿಯಲ್ಲಿ ಎಂಬುದು ನಿವೇದಿತಾರ ಆತ್ಮಶಕ್ತಿಗೆ ಹಿಡಿದ ಕೈಗನ್ನಡಿ. ಭಾರತ ರಾಷ್ಟ್ರದ ಬಗ್ಗೆ ಮಿಥ್ಯ ಆರೋಪಗಳನ್ನು ಮಾಡುತ್ತಾ, ಭಾರತದ ವಿರುದ್ಧವಾಗಿ ಕಾರ್ಯ ಮಾಡುತ್ತಿದ್ದ ಹಲವಾರು ಭಾರತ ವಿರೋಧಿಗಳು ಹಾಗೂ ಭಾರದ ಒಳಗಿನ ವಿರೋಧಿಗಳಿಗೆ ನಿವೇದಿತಾರ ಪ್ರಖರ ಭಾಷಣಗಳು ಹಾಗೂ ಪ್ರಖರ ಸಾಹಿತ್ಯಗಳು ಸರಿಯಾದ ಪೆಟ್ಟನ್ನೇ ಕೊಟ್ಟವು. ನಿವೇದಿತಾ ಅವರು ಅಗಾಧವಾಗಿ ಸ್ವಾತಂತ್ರ್ಯ ಹೋರಾಟಗಾರರ ಜೊತೆ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು ಹಾಗೂ ಅವರ ಪತ್ರಿಕೆಗಳಿಗೆ ಖಡಕ್ ರಾಷ್ಟೀಯವಾದದ ಲೇಖನಗಳನ್ನು ಬರೆಯುತ್ತಿದ್ದರು. ಬ್ರಿಟಿಷರು ಅವರ ಚಟುವಟಿಕೆಗಳ ಮೇಲೆ ಕಣ್ಣಿಡಲು ಗೂಢಾಚಾರರನ್ನು ನೇಮಿಸಿದ್ದರು ಹಾಗೆ ನಿವೇದಿತಾ ಅವರು ಕೂಡ ವಿದೇಶದಿಂದ ಮರಳಿ ಬರುವಾಗ ಮಾರುವೇಷದಲ್ಲಿ ಬಂದು ಬಂಧನದಿಂದ ತಪ್ಪಿಸಿಕೊಂಡು, ಅವರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದರು ಎಂಬುದು ಅವರ ಹೋರಾಟದ ತೀವ್ರತೆಗೆ ಸಾಕ್ಷಿ.
ಐರ್ಲೆಂಡ್’ನಲ್ಲಿದ್ದಾಗಲೇ ಕೇವಲ 18ನೆ ವರ್ಷದಲ್ಲೇ ಶಿಕ್ಷಕಿ ವೃತ್ತಿಯನ್ನು ಗಳಿಸಿ, ಕಾರ್ಯ ಆರಂಭಿಸಿದ್ದರು. ಕೆಲವೇ ವರ್ಷಗಳಲ್ಲಿ ಸ್ವತಃ ಅವರೇ ಒಂದು ಹೊಸ ಶಾಲೆಯನ್ನು ಪ್ರಾರಂಭಿಸಿ, ವಿನೂತನ ಕಲಿಕಾ ವಿಧಾನಗಳನ್ನು ಪ್ರಯೋಗಿಸಿ ಯಶಸ್ವಿಯಾದರು. ಇಂತಹ ದಿಟ್ಟನಡೆಯೇ ಸ್ವಾಮಿ ವಿವೇಕಾನಂದರು ಇವರನ್ನು ಭಾರತೀಯ ಸ್ತ್ರೀಯರ ಶಿಕ್ಷಣವೆಂಬ ಮಹಾನ್ ಕಾರ್ಯಕ್ಕೆ ಆಯ್ಕೆ ಮಾಡಲು ಪ್ರಮುಖ ಕಾರಣವಾಯಿತೆನ್ನಬಹುದು. ಭಾರತದ ಮಹಿಳೆಯರು ಬಹುತೇಕ ಸಂಖ್ಯೆಯಲ್ಲಿ ಸಾಕ್ಷರತೆಯನ್ನೇ ಹೊಂದಿಲ್ಲದ ಆ ಕಾಲದಲ್ಲೂ ಅವರನ್ನು ಅಜ್ಞಾನಿಗಳು ಎಂದು ಕರೆಯಲು ಖಡಾಖಂಡಿತವಾಗಿ ನಿರಾಕರಿಸಿದ್ದರು ನಿವೇದಿತಾ. ಅವರು ಅಜ್ಞಾನಿಗಳೇ ಆಗಿದ್ದರೆ, ಈ ನೆಲದ ಸಂಸ್ಕೃತಿಯ ಮಹಾನ್ ಗ್ರಂಥಗಳಾದ ರಾಮಾಯಣ, ಮಹಾಭಾರತ ಹಾಗೂ ಪುರಾಣಗಳನ್ನು ಹೇಗೆ ಅಷ್ಟು ಸುಲಲಿತವಾಗಿ ತಮ್ಮ ಮುಂದಿನ ಪೀಳಿಗೆಗೆ ಭೋದಿಸುತ್ತಾ ಬಂದಿದ್ದಾರೆ? ಯೂರೋಪಿಯನ್ ಕಾದಂಬರಿಗಳ ಸಾಹಿತ್ಯವನ್ನು ಬಲ್ಲವರು ಜ್ಞಾನಿಗಳು ಎಂದಾದರೆ, ಅಕ್ಷರ ಬಾರದಿದ್ದರೂ ಅಗಾಧ ಸಾಹಿತ್ಯ ರಾಶಿಯನ್ನು ಅರಿತಿರುವ ಭಾರತೀಯ ಮಹಿಳೆಯರೂ ಕೂಡ ಜ್ಞಾನಿಗಳೇ ಆಗಿದ್ದಾರೆ.


ಭಾರತೀಯ ಜೀವನವನ್ನು ತಿಳಿದಿರುವವರಿಗೆ ಮನೆಯಿಂದಲೇ ಹೇಗೆ ಮಹಿಳೆಯರಿಗೆ ಘನತೆ, ಸೌಮ್ಯತೆ, ಸ್ವಚ್ಛತೆ, ಧಾರ್ಮಿಕತೆಗಳ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಾರೆ ಎಂಬುದು ಅರಿವಿಗೆ ಬಂದಿರುತ್ತದೆ. ಅವರಿಗೆಲ್ಲಾ ತಮ್ಮ ಹೆಸರಿನ ಸಹಿ ಹಾಕಲು ಸಾಧ್ಯವಾಗದಿದ್ದರೂ, ನಿಜವಾದ ಅರ್ಥದಲ್ಲಿ ಅನಂತವಾಗಿ ಉತ್ತಮ ಶಿಕ್ಷಣವನ್ನು ಹೊಂದಿರಬಹುದು ಎಂದು ಸತ್ಯಾಂಶವನ್ನು ನುಡಿದಿದ್ದರು. ಇಂದಿಗೂ ಕೂಡ ನಮ್ಮ ದೇಶದ ಮೇಲೆ ಸ್ತ್ರೀಯರ ಸಮಾನತೆ, ಸ್ತ್ರೀಯರ ಹಕ್ಕು ಎಂಬೆಲ್ಲಾ ಪ್ರಶ್ನಾರೋಪಗಳನ್ನು ಸೃಷ್ಟಿಸಿ ಹೋರಾಟ ಮಾಡುತ್ತಾರೆ. ಪಾಶ್ಚಿಮಾತ್ಯ ದೇಶಗಳ ಪ್ರಭಾವಕ್ಕೊಳಗಾಗಿರುವ ಈ ಹೋರಾಟಗಾರರು ನಮ್ಮ ದೇಶಕ್ಕಿಂತ ಅನ್ಯದೇಶಗಳಲ್ಲೇ ಸ್ತ್ರೀ ಶೋಷಣೆ ಹೆಚ್ಚಿದದ್ದು ಹಾಗೂ ಹೆಚ್ಚಾಗಿರುವುದು ಎಂಬ ಕಟು ಸತ್ಯವನ್ನು ಮಾತ್ರ ಉಚ್ಚರಿಸುವುದಿಲ್ಲ. ಅಂತಹವರು ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಅಜ್ಞಾನಿಗಳು ಎಂದೇ ಹೇಳಬೇಕು. ಏಕೆಂದರೆ, ಅಂತಹ ಸ್ತ್ರೀ ಸಮಾನತೆಯ ಅರ್ಥವಿಹೀನ ಪ್ರಶ್ನೆಗಳಿಗೆ ನಮ್ಮ ಸಂಸ್ಕೃತಿಯಲ್ಲಿ ಅವಕಾಶವೇ ಇಲ್ಲ. ಸ್ತ್ರೀಯರನ್ನು ಮಾತೃ ಸ್ವರೂಪದಲ್ಲಿ ಗೌರವಿಸುವ ಶ್ರೇಷ್ಠ ನಾಡು ಇದು. ಮಾತೆಯ ಸ್ಥಾನವೇ ಸರ್ವೋಚ್ಛವಾದುದೆಂದು ನಮ್ಮ ಶಾಸ್ತ್ರಗಳು ಭೋದಿಸಿವೆ. ಹಾಗೆಂದ ಮೇಲೆ ಈ ಪ್ರಶ್ನೆಗಳಿಗೆ ಯಾವ ಅರ್ಥವಿದೆ?
ತಮ್ಮ ಶಾಲೆಯ ವಿದ್ಯಾರ್ಥಿನಿಯರಿಗೆ ಇತಿಹಾಸ, ಭೂಗೋಳ, ವಿಜ್ಞಾನ, ಚಿತ್ರಕಲೆ ವಿಷಯಗಳ ಜೊತೆಗೆ ನಮ್ಮ ಸಂಸ್ಕೃತಿ- ಪರಂಪರೆಯ ವಿಷಯಗಳು ಹಾಗೂ ಉದ್ಯೋಗ ಕೌಶಲದ ಬಗೆಗಿನ ವಿಷಯಗಳನ್ನು ಬೋಧಿಸಲಾಗುತ್ತಿತ್ತು. ’ವಂದೇ ಮಾತರಂ’ ಗೀತೆಯನ್ನು ಬ್ರಿಟಿಷ್ ಸರ್ಕಾರ ನಿಷೇಧಗೊಳಿಸಿದ್ದಂತಹ ಕಾಲದಲ್ಲೂ, ಇದರಿಂದ ಬಹುತೇಕ ಶಾಲೆಗಳಲ್ಲಿ ಈ ಗೀತೆ ಪ್ರಾರ್ಥನೆಯ ಸಾಲಿನಲ್ಲಿ ಸ್ಥಗಿತಗೊಂಡಿದ್ದಂತಹ ಕಾಲದಲ್ಲೂ ನಿವೇದಿತಾರ ಶಾಲೆಯ ಪ್ರಾರ್ಥನೆಯಲ್ಲಿ ಈ ಗೀತೆ ಕಡ್ಡಾಯವಾಗಿತ್ತು ಎಂದರೆ ಅವರ ದೇಶಭಕ್ತಿ ಯಾವ ಸ್ತರದಲ್ಲಿತ್ತು ಎಂಬುದನ್ನು ಕಲ್ಪಿಸಿಕೊಳ್ಳಿ. ನಿವೇದಿತಾ ಅವರು ತಮ್ಮ ವಿದ್ಯಾರ್ಥಿನಿಯರ ಬಗೆಗೆ ಅತೀವ ಕಾಳಜಿ ವಹಿಸುತ್ತಿದದ್ದು ಅವರ ಜೀವನದ ನೈಜ ಘಟನೆಗಳ ಸಾಕ್ಷ್ಯದಲ್ಲೇ ದಾಖಲಾಗಿದೆ. ಅವರು ತಮ್ಮ ವಿದ್ಯಾರ್ಥಿನಿಯರನ್ನು ಎಷ್ಟು ಪ್ರೀತಿಸುತ್ತಿದ್ದರೆಂದರೆ, ಅವರನ್ನು ತಮ್ಮ ಪುಟ್ಟ ಪುಟ್ಟ ದೇವತೆಗಳೆಂದೇ ಸಂಭೋದಿಸುತ್ತಿದ್ದರು. ಅವರು ಸ್ತ್ರೀ ಶಿಕ್ಷಣದ ಪರಮೋದರ್ಶದ ಬಗ್ಗೆ ವ್ಯಾಖ್ಯಾನಿಸಿದ್ದು ಹೇಗೆ ಗೊತ್ತೆ? ಎಂದು ಒಬ್ಬ ಸ್ತ್ರೀ ಸತಿ, ಸೀತೆ, ಸಾವಿತ್ರಿಯಂತಹ ಪಾವಿತ್ರ್ಯತಾ ಮೂರ್ತಿಗಳ ಆದರ್ಶವನ್ನು ಅರ್ಥೈಸಿಕೊಂಡು ಆ ಹರಿತದ ಮಾರ್ಗದಲ್ಲೆ ಮುನ್ನಡೆಯಲು ಆರಂಭಿಸುವರೊ ಅಂದು ಅವರ ಶಿಕ್ಷಣ ಪೂರ್ಣವಾಗುವುದೆಂದು.

ಯಾವುದೋ ದೇಶದಲ್ಲಿ ಹುಟ್ಟಿ ಬೆಳೆದರೂ ತಮ್ಮ ಶ್ರೀ ಗುರುದೇವನ ತಾಯ್ನಾಡಿನ ಸೇವೆಗೆಂದು ಭಾರತಕ್ಕೆ ಆಗಮಿಸಿದ, ಸ್ತ್ರೀ ಶಿಕ್ಷಣದ ಪ್ರಾಮುಖ್ಯತೆಯನ್ನು ಅರ್ಥೈಸಿದ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆಯನ್ನು ಎತ್ತಿಹಿಡಿದ, ವಿಜ್ಞಾನ-ಚಿತ್ರಕಲೆ-ಸಾಹಿತ್ಯದಂತಹ ಕ್ಷೇತ್ರಗಳಲ್ಲಿ ಭಾರತೀಯತೆಯನ್ನು ಪುನರುತ್ಥಾನಗೊಳಿಸಿದ, ಕ್ಷಾಮ-ಪ್ರವಾಹದಂತಹ ಸಂಕಷ್ಟ ಪರಿಸ್ಥಿತಿಗಳಲ್ಲಿ ನಿಸ್ವಾರ್ಥ ಸೇವೆಯ ಪರಾಕಾಷ್ಠೆಯನ್ನು ಮೆರೆದ ನಮ್ಮ ಭಾರತದ ಹೆಮ್ಮೆಯ ಪುತ್ರಿ ನಿವೇದಿತಾರಿಗೆ ನಾವು ಅವರಿಗೆ ಯೋಗ್ಯವಾದ ರೀತಿಯಲ್ಲಿ ದೊರೆಯಬೇಕಾದ ಸಮರ್ಪಕ ಸ್ಥಾನಮಾನವನ್ನು ನೀಡಿಲ್ಲವೆಂಬುದು ಅತ್ಯಂತ ದುಃಖಕರ ಸಂಗತಿ. ಇಂದಿನಿಂದಾದರೂ ಅವರ ಮಹೋನ್ನತ ಬದುಕಿನ ಬಗೆಗೆ ತಿಳಿದುಕೊಳ್ಳಲು ಆರಂಭಿಸಿ ಮತ್ತಷ್ಟು ಮಗದಷ್ಟು ಶ್ರೇಷ್ಠ ಸ್ಥಾನವನ್ನು ನಮ್ಮ ಹೃದಯಗಳಲ್ಲಿ, ಸಮಾಜದಲ್ಲಿ ನೀಡೋಣ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: IrelandRamakrishnaSodari NiveditaSodari Nivedita PratishtanaSwami Vivekanandaಐರ್ಲೆಂಡ್ನಿವೇದಿತಾಭಾರತರಾಮಕೃಷ್ಣವಿವೇಕಾನಂದಶ್ರೀ ಗುರುದೇವಸೋದರಿ ನಿವೇದಿತಾಸ್ವಾಮಿ ವಿವೇಕಾನಂದ
Share209Tweet123Send
Previous Post

ಕಾರಾಗೃಹಕ್ಕೆ ಭೇಟಿ ನೀಡಿ ಅಭಿವೃದ್ಧಿ ವೀಕ್ಷಿಸಿದ ಡಿ.ಎಸ್. ಅರುಣ್

Next Post

ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

ಮೂಲಭೂತ ಸೌಕರ್ಯಕ್ಕಾಗಿ ಶಿವಮೊಗ್ಗದ 8ನೆಯ ವಾರ್ಡ್ ನಾಗರಿಕರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL