No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2021
in ರಾಷ್ಟ್ರೀಯ
0
ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್ ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುಚರ್ಚಿತವಾಗಿರುವ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರವೊಂದಕ್ಕೆ ಬರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ 2020-21ನೇ ಸಾಲಿಗೆ 1 ರಿಂದ 9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಹಾಗೂ ಶೈಕ್ಷಣಿಕ ಅವಧಿ ನಿಗದಿಪಡಿಸುವ ಕುರಿತು ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಸ್ಥೆಗಳು, ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

45 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, ಅದರಲ್ಲಿ ಖಾಸಗಿ ಶಾಲೆಗಳ ಪ್ರತಿನಿಧಿಗಳು, ಪೋಷಕರು, ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳು ಪರೀಕ್ಷೆ ನಡೆಸುವ ಕುರಿತು ಪ್ರತಿಯೊಬ್ಬರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಬಹುಪಾಲು ಪ್ರತಿನಿಧಿಗಳು ಯಾವುದಾದರೂ ಮಾದರಿಯ ಮೌಲ್ಯಮಾಪನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದೆಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ ಸಭೆಯಲ್ಲಿ ಹಾಜರಿದ್ದ ಹಿರಿಯ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಪರೀಕ್ಷೆ ಕುರಿತಂತೆ ಇರುವ ನಿಯಮಗಳನ್ನು ವಿವರಿಸಿ, ಸದರಿ ಸಂದರ್ಭದಲ್ಲಿ ಈ ಕಾನೂನಿನಡಿ ಯಾವ ರೀತಿಯ ಉಪಕ್ರಮಗಳನ್ನು ಕೈಗೊಳ್ಳಬಹುದೆಂದು ವಿಷದವಾಗಿ ಸಾದರಪಡಿಸಿದ್ದಾರೆ. ಈ ಎಲ್ಲ ಅಭಿಪ್ರಾಯಗಳನ್ನೂ ಗಣನೆಗೆ ತೆಗೆದುಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವ ಕ್ರಮಗಳನ್ನು ಕೈಗೊಳ್ಳಬಹುದೆಂಬ ಶೀಘ್ರದಲ್ಲಿ ನಿರ್ದೇಶನಗಳನ್ನು ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಪ್ರಸ್ತುತ ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿಗಳವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಕುರಿತಂತೆ ವ್ಯಾಪಕ ಚರ್ಚೆ ಶುರುವಾಗಿದೆ. ಕಳೆದ ಬಾರಿ ನಾವು ಸೋಂಕಿನ ಹಿನ್ನೆಲೆಯಲ್ಲಿ ಈ ತರಗತಿಗಳಿಗೆ ಪರೀಕ್ಷೆ ನಡೆಸಿರಲಿಲ್ಲ. 10 ಮತ್ತು 12ನೇ ತರಗತಿಗಳಿಗೆ ಮಾತ್ರವೇ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೆವು. ಆ ಅನುಭವದ ಆಧಾರದಲ್ಲಿ ಈ ಬಾರಿಯೂ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆ ನಡೆಸಲಿದ್ದು ಈಗಾಗಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟಸಿಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಇಂದು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸಂಘಟನೆಗಳ ಪ್ರತಿನಿಧಿಗಳು 1 ರಿಂದ 9ನೇ ತರಗತಿಗಳಿಗೆ ಸರ್ಕಾರ ನಿಗದಿಪಡಿಸಿದ್ದ ಪಠ್ಯಭಾಗವನ್ನು ಈಗಾಗಲೇ ಮುಗಿಸಿದ್ದು, ಪುನರಾವರ್ತನೆ ಸಹ ಮಾಡಲಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಭೌತಿಕವಾಗಿ ಇಲ್ಲವೇ ಆನ್ ಲೈನ್ ಮೂಲಕ ಪಾಠಗಳನ್ನು ಆಲಿಸಿದ್ದಾರೆ. ಯಾವುದಾದರೂ ರೀತಿಯಲ್ಲಿ ಕಲಿಕೆಯ ಮೌಲ್ಯಾಂಕನವನ್ನು ನಡೆಸುವುದು ಸೂಕ್ತ. ಪರೀಕ್ಷೆ ನಡೆಸದೇ ಹೋದರೆ ಯಾವ ವಿದ್ಯಾರ್ಥಿ ಯಾವ ವಿಷಯದಲ್ಲಿ ಹಿಂದುಳಿದಿದ್ದಾನೆ, ಅವನನ್ನು ಮುಂದಿನ ತರಗತಿಗೆ ಯಾವ ರೀತಿಯಲ್ಲಿ ಸಜ್ಜುಗೊಳಿಸಬೇಕು ಎಂದು ಮೌಲ್ಯಾಂಕನವಿಲ್ಲದೇ ಅಳೆಯಲಾಗದು. ಮೌಲ್ಯಾಂಕನ ನಡೆಸದೇ ಮುಂದಿನ ತರಗತಿಗೆ ತೇರ್ಗಡೆ ಎಂದು ಒಮ್ಮೆ ಘೋಷಿಸಿದ್ದೇ ಆದರೆ ಮಕ್ಕಳು ಓದುವುದರತ್ತ ಆಸಕ್ತಿ ಕಳೆದುಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದಾದರೂ ರೀತಿಯಲ್ಲಿ ನಾವು ಮೌಲ್ಯಮಾಪನ ನಿರ್ವಹಿಸಿಯೇ ಮಕ್ಕಳ ಫಲಿತಾಂಶ ನೀಡಬೇಕೆಂದು ಪ್ರತಿನಿಧಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದರು.

ಶಿಕ್ಷಣ ಹಕ್ಕು ಕಾಯ್ದೆಯ ಆವಕಾಶಗಳಡಿ ಯಾವ ತರಗತಿಗಳಿಗೆ ಮೌಲ್ಯಾಂಕನ ನಡೆಸಬೇಕು ಎಂಬುದೂ ಸೇರಿದಂತೆ ಪ್ರಸ್ತುತ ಸಂದರ್ಭದಲ್ಲಿ ಯಾವ ಉಪಕ್ರಮಗಳನ್ನು ಕೈಗೊಳ್ಳಬಹುದು, ನಮ್ಮ ಭಾವನೆಗಳು ಏನೇ ಇದ್ದರೂ ಈ ವಿಷಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾಯ್ದೆಗಳನ್ನು ಪ್ರತಿಯೊಬ್ಬ ಶೈಕ್ಷಣಿಕ ಪಾಲುದಾರರು ಅನುಸರಿಸಲೇಬೇಕಾಗಿರುವ ಕುರಿತು ವಿ.ಪಿ. ನಿರಂಜನಾರಾಧ್ಯ ಸವಿವರವಾಗಿ ವಿವರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ಸಾಲಿನ ಪ್ರಾರಂಭದಲ್ಲಿ ಸೇತುಬಂಧ ಕಾರ್ಯಕ್ರಮವನ್ನು ಇನ್ನಷ್ಟು ವೇಗವರ್ಧಕಗೊಳಿಸುವ ಮಾದರಿಯಲ್ಲಿ ನಡೆಸಲು ಸಹ ಆಲೋಚಿಸಲಾಗುತ್ತಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.

ಯಾವುದೇ ಶಾಲೆಗಳೇ ಆಗಲಿ ಅನುತ್ತೀರ್ಣ ಮಾಡುವುದಕ್ಕೆಂದೇ ಪರೀಕ್ಷೆಗಳನ್ನು ಬಳಸಿಕೊಳ್ಳುವಂತಿಲ್ಲ. ಆದರೆ ಈ ಸಾಲಿನಲ್ಲಿ ಒಂದರಿಂದ ಐದು ಮತ್ತು ಆರರಿಂದ ಒಂಭತ್ತನೇ ತರಗತಿಗಳ ವಿದ್ಯಾರ್ಥಿಗಳ ಕಲಿಕಾನುಭವ ಸಮಾನವಾಗಿಲ್ಲವಾದ್ದರಿಂದ ಸಿಸಿಇ ಅಡಿಯಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಕಲಿಕೆಯನ್ನು ಅವಲೋಕಿಸಿ ದಾಖಲಿಸುವ ಜವಾಬ್ದಾರಿ ಹೊಂದಿದ್ದಾರೆ. ಹಾಗಾಗಿ ಯಾವುದೇ ಶಾಲೆಗಳು ಸಾರಾಂಶ ಮೌಲ್ಯಮಾಪನ (ಸಮ್ಮೇಟೀವ್ ಅಸೆಸ್ಮೆಂಟ್) ಮಾಡುವಲ್ಲಿ ಕ್ರಮ ಕೈಗೊಳ್ಳಬೇಕಿದೆ. ಮುಂದಿನ ತರಗತಿಗಳಿಗೆ ತೇರ್ಗಡೆ ಹೊಂದುವಲ್ಲಿ ರಚನಾತ್ಮಕ ಮೌಲ್ಯಮಾಪನ (ಫಾರ್ಮೇಟಿವ ಅಸೆಸ್ಮೆಂಟ್) ಪರಿಗಣಿಸಿಯೂ ತೀರ್ಮಾನ ಕೈಗೊಳ್ಳಬಹುದು ಎಂಬ ಅಭಿಪ್ರಾಯಗಳೂ ಇವೆ. ಈ ಎಲ್ಲ ಅವಕಾಶಗಳನ್ನು ಅವಲೋಕಿಸಿ ಸೂಕ್ತ ನಿರ್ಧಾರವೊಂದನ್ನು ಅತಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈಗಾಗಲೇ ಪಾಠ ಪ್ರವಚನ ನಡೆದಿರುವುದರಿಂದ ಮಕ್ಕಳಿಗೆ ಪರೀಕ್ಷೆ ನಡೆಸಬೇಕು, ಪರೀಕ್ಷೆ ನಡೆಸದೇ ಹೋದರೆ ಓದದಿದ್ದರೂ ಪಾಸಾಗಬಹುದೆಂಬ ಭಾವನೆ ಮೂಡುತ್ತದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿಯವರು ಸಹ ತಮಗೆ ಪತ್ರ ಬರೆದಿದ್ದಾರೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಖಾಸಗಿ ಶಾಲಾ ಸಂಸ್ಥೆಗಳಾದ ರೂಪ್ಸಾ, ಕ್ಯಾಮ್ಸ್, ಪೋಷಕರ ಸಂಘಟನೆಗಳು, ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯ್ಕ, ಸಾಶಿಇ ಆಯಕ್ತ ವಿ. ಅನ್ಬು ಕುಮಾರ್, ಹಿರಿಯ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Annual ValuationBENGALURUCorona PositiveCorona VirusCovid19Kannada News WebsiteLatest News KannadaMinisterSuresh kumarಎಸ್. ಸುರೇಶ್ ಕುಮಾರ್ಕೋವಿಡ್19ಬೆಂಗಳೂರುವಾರ್ಷಿಕ ಮೌಲ್ಯಾಂಕನ
Share197Tweet123Send
Previous Post

ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಬಾಬು ಜಗಜೀವನರಾಮ್ ಜನ್ಮದಿನ ಆಚರಣೆ

Next Post

ಮೈಸೂರು: ಮನೆಮನದಲ್ಲಿ ಶ್ರೀ ಶಂಕರಾಚಾರ್ಯರ ಉಪನ್ಯಾಸಕ್ಕೆ ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು: ಮನೆಮನದಲ್ಲಿ ಶ್ರೀ ಶಂಕರಾಚಾರ್ಯರ ಉಪನ್ಯಾಸಕ್ಕೆ ವ್ಯಾಪಕ ಪ್ರಶಂಸೆ

ಮೈಸೂರು: ಮನೆಮನದಲ್ಲಿ ಶ್ರೀ ಶಂಕರಾಚಾರ್ಯರ ಉಪನ್ಯಾಸಕ್ಕೆ ವ್ಯಾಪಕ ಪ್ರಶಂಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

March 30, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL