ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಆಸ್ತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆಯ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಪುತ್ರನಿಗೆ ಒಂದನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ 6 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದ ಕುರಿತು ತನಿಖೆ ನಡೆಸಿದ ನಗರ ಠಾಣೆಯ ಪೊಲೀಸ್ ನಿರೀಕ್ಷಕ ನಹೀಂ ಅಹಮದ್ ಆರೋಪಿ ಹರ್ಷ ವಿರುದ್ದ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವಿವರವಾದ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಒಂದನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾಗಿದ್ದ ಕಾರಣ ಕಲಂ. 235(2) ಸಿಆರ್ಪಿಸಿ ರೀತ್ಯ ಆರೋಪಿ ಹರ್ಷನಿಗೆ ಕಲಂ. 307 ಐ.ಪಿ.ಸಿ. ಅಡಿಯಲ್ಲಿ ೬ ವರ್ಷಗಳ ಸಾದಾ ಶಿಕ್ಷೆ ಹಾಗೂ 30,000ರೂ ವಿಧಿಸಿ ಆದೇಶ ಹೊರಡಿಸಿದ್ದಾರೆ.

ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post