ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಏಕಾಏಕಿ ಎಲ್ಲಾ ಅಂಗಡಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿರುವ ಕ್ರಮವನ್ನು ಆಮ್ಆದ್ಮಿ ಪಕ್ಷ ಖಂಡಿಸಿದೆ.
ಈ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ರಾಜ್ಯದ ರಾಜಸ್ವ ತೆರಿಗೆ ಸಂಗ್ರಹಣೆಯಲ್ಲಿ ಅಗ್ರ ಪಾಲನ್ನು ಹೊಂದಿರುವ ವರ್ತಕರ ಸಂಘಗಳೊಂದಿಗೆ ಚರ್ಚಿಸಿ ಇದರ ಪರಿಣಾಮಗಳ ಬಗ್ಗೆ ಆಲೋಚಿಸದೆ ಏಕಾಏಕಿ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ಈಗಾಗಲೇ ರಾಜ್ಯದ ವರ್ತಕರು ಕಳೆದ ವರ್ಷದ ಕೊರೋನಾ ಮಹಾಮಾರಿಯ ಪರಿಣಾಮವಾಗಿ ದೀರ್ಘಕಾಲಿಕ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ರೀತಿಯ ಅವೈಜ್ಞಾನಿಕ ಆದೇಶಗಳ ಮೂಲಕ ಮತ್ತಷ್ಟು ತೊಂದರೆಗೊಳಗಾಗುತ್ತಿದ್ದಾರೆ ಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಪರಿಣಾಮಗಳನ್ನು ಕೂಲಂಕುಷವಾಗಿ ಪರಿಶೀಲಿಸದೆ, ಏಕಾಏಕಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿರುವುದು ತೀರಾ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ರಾಜ್ಯದ ಎಲ್ಲಾ ವರ್ತಕರ ಸಂಘಗಳೊಂದಿಗೆ ಚರ್ಚಿಸಿ ತನ್ನ ಆದೇಶವನ್ನು ಮರುಪರಿಶೀಲಿಸಬೇಕೆಂದು ಆಮ್ ಆದ್ಮಿ ಪಕ್ಷವು ಆಗ್ರಹಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post