ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್-19 ಎರಡನೆಯ ಅಲೆಯು ಮಾರಣಾಂತಿಕವಾಗಿದ್ದು, ವೈದ್ಯಕೀಯ ಜಗತ್ತಿಗೆ ಸವಾಲಾಗುತ್ತಿದೆ. ಕೊರೋನಾ ನಿಯಂತ್ರಿಸಲು ಲಸಿಕೆಯೊಂದೇ ರಾಮಬಾಣವಾಗಿದ್ದು, ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಅಭಿಯಾನದಲ್ಲಿ ಜೆಡಿಎಸ್ ಮುಖಂಡ ಎಮ್. ಶ್ರೀಕಾಂತ್ ಪಾಲ್ಗೊಂಡು ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೊದಲ ಹಂತದ ಲಸಿಕೆಯನ್ನು ಹಾಕಿಸಿಕೊಂಡಿದ್ದೇನೆ. ಲಸಿಕೆ ತೆಗೆದುಕೊಳ್ಳುವುದಕ್ಕೆ ಯಾವುದೇ ಭಯ ಬೇಡ. ಅಂಜಿಕೆಯಿಲ್ಲದೆ ಲಸಿಕೆಯನ್ನು ಪಡೆಯಿರಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post