Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಂಡೆ ನಾ ನರಸಿಂಹನ..!

ಕನಕರ ನರಸಿಂಹ ದರ್ಶನ

May 25, 2021
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಕನಕದಾಸರು…ಮಹತ್ವದ ಕವಿಗಳು. ದಾಸ ಸಮೂಹದಲ್ಲೇ ಅತೀವ, ಅದ್ಭುತ ಕಲ್ಪನಾಶಕ್ತಿಯುಳ್ಳ ಪ್ರತಿಭೆ. ಅವರ ಪ್ರತಿಮೆ, ರೂಪಕಗಳು ದಾಸ ಸಾಹಿತ್ಯ ಸಹೃದಯರನ್ನ ಸೋಜಿಗದ ಸಾಗರದಲ್ಲಿ ಮುಳುಗಿಸಿಬಿಡುತ್ತದೆ. ವಿವಿಧ ಕೃತಿಗಳ ಒಳಹೊಕ್ಕು ಅವರನ್ನು ಅರ್ಥಮಾಡಿಕೊಳ್ಳುವ ಸಾಹಸ ಇನ್ನೂ ಪೂರ್ಣವಾಗಿಲ್ಲವೇನೊ ಅಂತ ಅನಿಸುತ್ತದೆ. ಅವರ ಮುಂಡಿಗೆಗಳನ್ನು ಓದಿದಾಗ ಇದು ನಮಗೆ ವೇದ್ಯವಾಗುತ್ತದೆ. ವಿದ್ವಾಂಸರೂ ಕೂಡ ಒಂದುಕ್ಷಣ ಮನಮಂಥನ ಮಾಡಿಕೊಳ್ಳುವಂತಿದೆ… ಪೂರ್ಣ ಅವುಗಳ ಬಗ್ಗೆ ವಿಶೇಷ ಅಧ್ಯಯನವೇ ಬೇಕೇನೊ… ಏಕೆಂದರೆ ಅವರ ಗೂಢಾರ್ಥಗಳು ಒಬ್ಬೊಬ್ಬರಿಗೆ ಒಂದೊಂದು ಅರ್ಥ ನೀಡುತ್ತವೆ.

ಬಹಳ ಸಹೃದಯರ ಅಂತಃಕರಣ ಕಲಕಿ, ಆಂತರ್ಯ ಮೀಟಿದ ಮುಂಡಿಗೆಗಳಲ್ಲಿ ಮರವ ನುಂಗು ಪಕ್ಷಿ ಮನೆಯೊಳಗೆ ಬಂದಿದೆ. ಇದರ ಕುರುಹ ಪೇಳಿ ಕುಳಿತಿರುವ ಜನರು! ಒಂದಾಗಿದೆ. ಅತ್ಯಂತ ಆಸಕ್ತಿಪೂರ್ವಕ ಓದಿಸಿಕೊಳ್ಳುತ್ತದೆ. ಇದನ್ನು ಆಮೂಲಾಗ್ರ ಜೀರ್ಣಿಸಿಕೊಳ್ಳುವಲ್ಲಿ ಬೇಕಾದದ್ದು ಅತೀ ಬುದ್ಧಿವಂತಿಕೆಯಲ್ಲ. ಸಾಮಾನ್ಯ ಜ್ಞಾನ ಎಂಬುದನ್ನು ಮುಂಡಿಗೆಗಳನ್ನು ಬಿಡಿಸಿದ ಜಾಣ/ಜಾಣೆಯರು ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾರೆ. ಅಲೌಕಿಕ ಸಂಗತಿಗಳ ಮೂಲಕ ಲೌಕಿಕ ಸಾಮಗ್ರಿಯನ್ನು ಆಧರಿಸಿ ನಮ್ಮನ್ನು ಆಧ್ಯಾತ್ಮದ ಸುಳಿಯಲ್ಲಿ ಸಿಕ್ಕಿಸಿಬಿಡುತ್ತಾರೆ. ಸಮಾಧಾನದ ಚಿತ್ತದಿಂದ ಗ್ರಹಿಸಿದಾಗ ಮುಂಡಿಗೆಗಳ ಅಂತರಂಗ ಹೂವಿನ ಪಕಳೆಗಳಂತೆ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ನೋಡಲಿಕ್ಕೆ ಬೆರಗು, ಬೆಡಗು ತುಂಬಿದ ಸಾಲುಗಳು.

ಒಂಟಿಕೊಂಬಿನ ಪಕ್ಷಿ, ಒಡಲೊಳಗೆ ಕರುಳಿಲ್ಲ. ಗಂಟಲು ಮೂರುಂಟು ಮೂಗು ಇಲ್ಲ. ಕುಂಟು ಮನುಜನ ತೆರದಿ ಕುಳಿತಿಹುದು ಮನೆಯೊಳಗೆ ಎಂಟು ಹತ್ತರ ಭಕ್ಷ್ಯ ಭಕ್ಷಿಸುವುದು. ಕೊಂಚ ಅದರೊಳಗೇ ಸಾಗಿದರೇ ಬೀಸುವ ಕಲ್ಲಿನ ಪ್ರತಿಮೆ ಇದನ್ನೆಲ್ಲ ಒಳಗೊಂಡಿದೆ ಎಂಬ ಅರ್ಥ ಹೊಳೆದಾಗ ನಮಗೆ ನಾವೇ ಚೋದ್ಯದೊಳಗೇ ಮುಳುಗಿಬಿಡುತ್ತೇವೆ.

ಬೀಸುವ ಕಲ್ಲಿನ ಗೂಟ, ಒಂಟಿಕೊಂಬು. ಎರಡೂ ವೃತ್ತಾಕಾರದ ಕಲ್ಲಿನ ನಡುವೆ ಏನಿಲ್ಲ. (ಕರುಳಿಲ್ಲ). ನಡುವೆ ಕೇಂದ್ರ ಬಿಂದುವಿನಲ್ಲಿ ಕಾಳು ಹಾಕಲು ಪುಟಾಣಿ ಗುಣಿ. ಅದಕ್ಕೆ ಮೂರು ರಂಧ್ರಗಳು( ಗಂಟಲು). ಹೀಗೆ ಬೀಸುವ ಕಲ್ಲಿನ ಚಿತ್ರ ನಮ್ಮ ಚಿತ್ತದಲ್ಲಿ ಕೆತ್ತಿಕೊಳ್ಳುತ್ತಾ ಸಾಗುತ್ತದೆ. ಇದು ಜನಪ್ರಿಯವಾದ ಅವರ ಮುಂಡಿಗೆಯ ಒಂದು ಝಲಕ್ ಅಷ್ಟೇ.
ಅವರ ಕೃತಿ ರಚನೆಯ ಮೂಸೆಯಲ್ಲಿ ಅನೇಕ ಅದ್ಭುತ ಚಮತ್ಕಾರಗಳನ್ನು ಓದಿ ಅನುಭವಿಸಬಹುದು. ಈಗ ನರಸಿಂಹಾವತಾರದ ಒಂದು ಪ್ರಸಂಗ. ಪ್ರಹ್ಲಾದ ತನ್ನ ತಂದೆಗೆ ಕಂಬದಲ್ಲೂ ಇದ್ದಾನೆ ಹರಿ! ಎಂದ ತಕ್ಷಣ ಅದಕ್ಕೆ ಗದೆಯನ್ನು ಘಟ್ಟಿಸಿದಾಗ ಉಂಟಾದ ದೃಶ್ಯವನ್ನು ಕನಕದಾಸರ ಹಾಡಿನಲ್ಲೇ ಕಾಣಬೇಕು.

ಘುಡುಘುಡಿಸಿ ಕಂಬದಲಿ ದಢದಢ ಸಿಡಿಲು ಸಿಡಿಯೆ ಕಿಡಿಕಿಡಿಸೆ ಇದ್ದಕ್ಕಿದ್ದಂತೆ.
ಅರಮನೆಯ ಕಂಬ ಬಿರಿಯುವ, ಹೋಳಾಗುವ ಕ್ರಿಯೆ ಧ್ವನಿಪೂರ್ಣವಾಗಿ ಪದಗಳಲ್ಲೇ ತುಂಬಿದ್ದಾರೆ. ಕಂಬದೊಳಗೆ ಮುಂಚೆ ಉದ್ಭವಿಸಿದ ಸದ್ದು ಘುಡುಘುಡು’ ಎದೆ ನಡುಗುವ ರೀತಿ ಕೇಳಿಸಿತಂತೆ. ಆ ಕಂಬ ಒಡೆದ ಪರಿ ಹೇಗಿತ್ತೆಂದರೆ “ದಢದಢ” ಸಿಡಿಲು ಬಡಿಯುವುದಲ್ಲ ಸಿಡಿಯಿತು ಎನ್ನುತ್ತಾರೆ. ಅಷ್ಟಕ್ಕೇ ನಿಲ್ಲಿಸುವುದಿಲ್ಲ. ಅಲ್ಲಿಂದ ಬೆಂಕಿಯ ಕಿಡಿಗಳು ಹೊತ್ತಿಕೊಂಡವಂತೆ. ಮುಂದೇನಾಯಿತು ಎಂದರೆ ನುಡಿಯಡಗಲೊಡನೆ ಮುಡಿವಿಡಿದು ಅಂದರೆ ನೇರ ಹಿರಣ್ಯಕಶಿಪುವಿನ ಗಂಟಲೊಣಗಿತು. ಅವನ “ಮುಡಿವಿಡಿದು”
ಘಡಘಡನೆ ನಡುಗಿತು ಇಡೀ ಅರಮನೆ. ಘುಡುಘುಡಿಸಿ ಕಂಬದಿಂದ ನೆಲಕ್ಕೆ ಪಾದವಿಟ್ಟಿದ್ದೇ ತಡ ಇಡೀ ವಾತಾವರಣ ಒಂದು ಕ್ಷಣ ಮಂಕಾಯಿತು. ಇಂಥ ಸಂದರ್ಭದಲ್ಲೇ ನರಸಿಂಹನಾಗಿ ಕಂಡ ಶ್ರೀಹರಿ. ಹಿರಣ್ಶಕಶಿಪುವನ್ನ ತನ್ನ ತೊಡೆಯ ಮೇಲೆ ಕೆಡವಿಕೊಂಡ ಆ ಭೀಕರ ಸನ್ನಿವೇಶ ಈ ಸಾಲುಗಳಲ್ಲಿ ಮೂಡುತ್ತಾ ಹೋಗಿದೆ.

ಮುಂದಿನ ಚಿತ್ರ ಕಟ್ಟಿಕೊಡುವ ಕನಕರ ಕಾವ್ಯಶಕ್ತಿ ಇನ್ನೊಂದು ಮಜಲು ತಲುಪುತ್ತದೆ. ಹಿರಣ್ಯಕಶಿಪುವಿನ ಸಂಹಾರದ ಚಿತ್ರಣ ಅಷ್ಟೇ ರೌದ್ರವಾಗಿದೆ. ಉರದೊಳಪ್ಪಳಿಸಿ ಅರಿಬಸಿರ ಸರಸರನೆ ಸೀಳಿ ಎಂಬಲ್ಲಿ ಹಿರಣ್ಯಕಶಿಪುವಿನ ಎದೆ ಸೀಳಿ, ಕರುಳ ಬಗೆದ. ಅದು ಹೇಗಿತ್ತು. ಪರಿಪರಿಯಲಿ ಚರ್ಮ ಎಳೆದೆಳೆದು ನರಗಳನ್ನ ನೂಲಿನೆಳೆಗಳಂತೆ ಸೆಳೆದನಂತೆ. ಜೊತೆಗೆ ರಕ್ತತೊಯ್ದು ಕರುಳನ್ನ ಕೊರಳಿಗೆ ಹಾರಹಾಕಿಕೊಂಡ ಪ್ರಹ್ಲಾದನ ಆರಾಧ್ಯ ದೈವ. ಕೈಗಳಿಂದ ನೆತ್ತರು ದಳದಳ ಇಳಿಯುತ್ತಿದ್ದ ಶ್ರೀಹರಿಯನ್ನ ಕನಕರು ನಮಗೆ ತೋರಿಸುತ್ತಾರೆ. ಇಡೀ ವಿವರಣೆ ಸಹೃದಯನಲ್ಲಿ ಸಂಹಾರ ಕ್ರಿಯೆಯ ಭಿಭತ್ಸ ಚಿತ್ರ ಮೂಡುತ್ತದೆ.

ಮುಂದಿನ ಪಂಕ್ತಿಗಳಲ್ಲಿ ಕನಕರು ಆಗಷ್ಟೇ ಕಟ್ಟಿಕೊಟ್ಟಿದ್ದ ರೌದ್ರ ದೃಶ್ಯಕ್ಕೆ ತದ್ವಿರುದ್ಧವಾಗಿ ಚಮತ್ಕಾರಿಕೆಯೆಂಬಂತೆ ಶಾಂತ ಸ್ಥಿತಿಗೆ ನಮ್ಮನ್ನೊಯ್ಯುವರು. ಪ್ರಜಾಪೀಡಕ ಅರಸನ ಅಂತ್ಯದಿಂದ ಪುರಜನರೆಲ್ಲ ಸಮಾಧಾನಪಟ್ಟರು. ದೇವಾನುದೇವತೆಗಳೆಲ್ಲ ಹೂಮಳೆಗೈದರು. ಸಂಗಡ ವಿವಿಧ ವಾದ್ಯಗಳ ನಾದ ಮುಗಿಲುಮುಟ್ಟಿತ್ತು. ಒಟ್ಟು ಸಂಭ್ರಮದ ಸನ್ನಿವೇಶ ಓದುಗನೂ ಮಿಂಚಿನಂತೆ ನಿಟ್ಟುಸಿರು ಚೆಲ್ಲುವಂತಾಗುತ್ತದೆ. ಮುಗ್ಧ ಶಿಶು ಪ್ರಹ್ಲಾದ ಶ್ರೀಹರಿಯನ್ನ ಮನಸಾರೆ ಸ್ತುತಿ ಮಾಡಿದ. ಆ ಶ್ರೀಹರಿಯೇ ಕಾಗಿನೆಲೆ ಆದಿಕೇಶವನಾಗಿ ಕನಕರ ಮೆಚ್ಚಿನ ಅಂಕಿತವಾಗಿ ಲಾಸ್ಯವಾಡಿದ್ದಾನೆ.

ಅದೇ ಚಿತ್ರ ರಚನೆಯ ಪಲ್ಲವಿಯಲ್ಲಿ ಕಡೆಯುತ್ತಾರೆ.
“ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ,
ರಿಪುಗಂಡ ಉದ್ದಂಡ ನರಸಿಂಹನ ಕಂಡೆನಯ್ಯ”
ಇಡೀ ರಚನೆಯಲ್ಲಿ ಅಸಾಮಾನ್ಯ ರೂಪದಲ್ಲಿ ಕಾಣಿಸಿಕೊಂಡ, ದುಷ್ಟಶಿಕ್ಷಕ ನರಸಿಂಹಾವತಾರವನ್ನು ತಾವೇ ಅದೀಗ ಕಂಡಂತೆ ಬೆರಗಾಗುತ್ತಾರೆ.

ದೈವಗಣದಲ್ಲಿ ಪ್ರಚಂಡನಾಗಿ ತೋರಿದ್ದಾನೆ ಶ್ರೀಹರಿ. ದಾಸರಿಗೆ ವಿಷ್ಣುಪಾರಮ್ಯವನ್ನು ಎಷ್ಟು ಹೋಲಿಕೆ ಮಾಡಿದರೂ ತೃಪ್ತಿಯಿಲ್ಲ. ಶಬ್ದಜಾಲದಲ್ಲೇ ಅಕ್ಷರಗಳ ನಾಟ್ಯ. ಅರ್ಥವನ್ನು ಸಮರ್ಥವಾಗಿ ಹೊಮ್ಮಿಸುವ ಹೆಮ್ಮೆಯ ಕವಿ ಕನಕದಾಸರು. ನರಸಿಂಹ ಅವತಾರ ಆಗಿಹೋದ ಪೌರಾಣಿಕ ಸಂಗತಿ. ಆದರೆ ಅವರ ಈ ಕೃತಿ ಮನನ ಮಾಡಬೇಕು. ಮತ್ತೆ ಮತ್ತೆ ನಮ್ಮ ಮನಃಪಟಲದಲ್ಲೇ ನರಸಿಂಹಮೂಡುತ್ತಾನೆ. ಲೌಕಿಕದ ಜಡತೆಯನ್ನು ಸೀಳಿಕೊಂಡೇ ಧುತ್ತನೆ ದರ್ಶನ ನೀಡುವಂತೆ ಮಾಡುತ್ತಾರೆ ಕನಕದಾಸರು.
ಅಕ್ಷರಗಳಲ್ಲಿ ಅತಿಶಯರೂಪಿನ ಪರಮಾತ್ಮನನ್ನು ಕಾವ್ಯಶಕ್ತಿ ಮೂಲಕ ಸಾಕ್ಷಾತ್ಕರಿಸಿದ ಕನಕ ಪ್ರತಿಭೆಗೆ ಸಾವಿರದ ಶರಣು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr SudheendraKannada NewsKannada News loveKannada News OnlineKannada News WebsiteKannada WebsiteLatest News KannadaNews in KannadaNews KannadaSri Kanakadasaruಕನಕದಾಸರು
Previous Post

ಆದಿ ಗುರು ಶ್ರೀ ಶಂಕರಾಚಾರ್ಯರಿಂದ ವಿರಚಿಸಲ್ಪಟ್ಟ ಶ್ರೀ ಲಕ್ಷ್ಮೀ ನೃಸಿಂಹ ಕರಾವಲಂಬ ಸ್ತೋತ್ರಂ

Next Post

ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್‍ಸ್ ಪತ್ರಕರ್ತರಿಗೇ ಕೊರೋನ ಲಸಿಕೆ ಇಲ್ಲ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್‍ಸ್ ಪತ್ರಕರ್ತರಿಗೇ ಕೊರೋನ ಲಸಿಕೆ ಇಲ್ಲ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!