No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಳಿದು ಅಗಲಿದ್ದ ಕೆರೆಗೆ ಪುನರ್ಜನ್ಮವಿತ್ತ ಶಿವಮೊಗ್ಗದ ನಮ್ಮ ಪರಿಸರಾಸಕ್ತರ ತಂಡ

ಶಿವಮೊಗ್ಗಕ್ಕೆ ಮುಕುಟ ಮಣಿಯಾಗಲಿರುವ ಪುಷ್ಕರಣಿ, ಎಲ್ಲಿ ನಿರ್ಮಾಣವಾಗುತ್ತಿದೆ? ವಿಶೇಷತೆಯೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2021
in Special Articles, ಶಿವಮೊಗ್ಗ
0
ಅಳಿದು ಅಗಲಿದ್ದ ಕೆರೆಗೆ ಪುನರ್ಜನ್ಮವಿತ್ತ ಶಿವಮೊಗ್ಗದ ನಮ್ಮ ಪರಿಸರಾಸಕ್ತರ ತಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮನುಕುಲದ ಜೀವನಾಡಿಯೇ ಅಂತರ್ಜಲ. ಕಾಡೆಂದರೆ ನೀರು, ನೀರೆಂದರೆ ಹಸಿರು, ಹಸಿರೆಂದರೆ ಅನ್ನ, ಅನ್ನವೆಂದರೆ ಪ್ರಾಣ. ಇದು ಜೀವನ ಚಕ್ರ. ಎಲ್ಲಾ ಕಾಲಕ್ಕೂ ನೀರು ಮಾನವನ ಜೀವಾಮೃತ. ಇಂತಹ ಜೀವಸಿಂಧುವಿನ ಬಗೆಗೆ ಅತೀವ ಕಾಳಜಿ ಹೊಂದಿದ್ದ ನಮ್ಮ ಪರಿಸರಾಸಕ್ತ ತಂಡ ಈಗಾಗಲೇ ಶಿವಮೊಗ್ಗೆಯಲ್ಲಿ ಇರುವ ಕೆರೆ ಅಭಿವೃದ್ಧಿಯ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದು, ಶಿವಮೊಗ್ಗೆಯ ವಾಜಪೇಯಿ ಬಡಾವಣೆಯ ಒಣ ಭೂಮಿಯನ್ನು ಸೂಡಾದವರು ಪಾರ್ಕ್ ನಿರ್ಮಾಣಕ್ಕೆಂದು ಮೀಸಲಿಟ್ಟ ಜಾಗವನ್ನು ಈಗ ಸಂಪದ್ಭರಿತ ಪುಷ್ಕರಿಣಿಯಾಗಿ ಪರಿವರ್ತನೆ ಮಾಡಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಈಗಾಗಲೇ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಈ ತಂಡದಲ್ಲಿ ಶಿಕ್ಷಣ ತಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ, ಪ್ರೊ.ಎ.ಎಸ್. ಚಂದ್ರಶೇಖರ್, ಪರಿಸರ ಪ್ರೇಮಿ ಬಾಲಕೃಷ್ಣ ನಾಯ್ಡು, ಉದ್ಯಮಿಗಳಾದ ಪ್ರಕಾಶ್ ಪ್ರಭು, ಭಾಸ್ಕರ್ ಕಾಮತ್, ಜೋಡಿಯಾಕ್ ಪ್ರಕಾಶ್, ವಿಡಿಯೋಗ್ರಾಫರ್ ಮೋಹನ್, ಭಾಸ್ಕರ್ ಕಾಮತ್, ಕಾಟನ್ ಜಗದೀಶ್, ಪರೋಪಕಾರಂ ಶ್ರೀಧರ್‌ರವರು ಸಮಾನ ಮನಸ್ಕರ ತಂಡ ಕಟ್ಟಿ ಜೊತೆಗೂಡಿ ಕಾರ್ಯನಿರತರಾಗಿದ್ದಾರೆ.
ಶಿವಮೊಗ್ಗೆಯ ವಾಜಪೇಯಿ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸೂಡಾದ ಅಧೀನದಲ್ಲಿರುವ ಸುಮಾರು 6 ಎಕರೆ ವಿಸ್ತೀರ್ಣದಲ್ಲಿರುವ ಈ ಜಾಗದಲ್ಲಿ 2 ಎಕರೆಯಲ್ಲಿ ಈ ಪುಷ್ಕರಣಿ ನಿರ್ಮಾಣಗೊಳ್ಳುತ್ತಿದೆ. ಕಾಮಗಾರಿ ಬಹುತೇಕ ಅಂತಿಮ ಹಂತವನ್ನು ತಲುಪಿದೆ. ಇದು 300 ಮೀಟರ್ ಉದ್ದ, 250 ಮೀಟರ್ ಅಗಲ, 8 ಅಡಿ ಆಳವಿದ್ದು 2 ಕೋಟಿ ಲೀಟರ್ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.


ಪಶ್ಚಿಮ ಘಟ್ಟದಲ್ಲಿ ಪ್ರಮುಖವಾಗಿ ಬೆಳೆಯುತ್ತಿರುವ ಹಲವು ರೀತಿಯ ಮರಗಳು, 1000ಕ್ಕೂ ಹೆಚ್ಚಿನ ಗಿಡಗಳು, ಈಗಾಗಲೇ ಅಳಿವಿನ ಅಂಚಿನಲ್ಲಿರುವ ಸಸ್ಯ ಪ್ರಭೇಧಗಳನ್ನು ಉಳಿದ 4 ಎಕರೆ ಜಮೀನಿನಲ್ಲಿ ಬೆಳೆಸುವ ಉದ್ದೇಶವಿದೆ. ಸುತ್ತಲೂ ವಾಕಿಂಗ್ ಪಾಥ್ ನಿರ್ಮಾಣ; ಕಲ್ಯಾಣಿಯ ಮಧ್ಯಭಾಗದಲ್ಲಿರುವ ಮಣ್ಣಿನ ಪ್ರದೇಶದಲ್ಲಿ ಒಂದು ಬೃಹತ್ ಆಲದ ಮರ ಹಾಗೂ ಹೊಳೆಲಕ್ಕಿಗಿಡಗಳನ್ನು ನೆಟ್ಟು, ಮಾನವರ ಸಂಪರ್ಕವಿಲ್ಲದ ರೀತಿಯಲ್ಲಿ ಹಣ್ಣು-ನೀರನ್ನು ಬಳಸಿಕೊಂಡು ಪಕ್ಷಿಗಳಿಗೆ ತಂಗುದಾಣವಾಗಿಯೂ ನಿರ್ಮಾಣವಾಗಬೇಕೆಂಬ ಚಿಂತನೆ ಸಾಕಾರಗೊಳ್ಳುತ್ತಿದೆ.
ಸರ್ಕಾರದ ಯಾವುದೇ ನೆರವನ್ನು ಪಡೆಯದೆ, ಇದಕ್ಕಾಗಿ ಶ್ರೀ ಡಿ.ಎಸ್. ಅರುಣ್‌ ಅವರ ನೇತೃತ್ವದಲ್ಲಿ ವಿವಿಧ ಪೆಟ್ರೋಲ್ ಬಂಕ್ ಮಾಲೀಕರು 700 ಲೀಟರ್ ಡೀಸೆಲನ್ನು ಉಚಿತವಾಗಿ ನೀಡಿದ್ದಾರೆ. ಬಸವಕೇಂದ್ರದ ಶ್ರೀಶ್ರೀ ಬಸವಮರುಳಸಿದ್ಧ ಮಹಾಸ್ವಾಮಿಗಳ, ವಾಣಿಜ್ಯೋದ್ಯಮಿಗಳು, ಮಠಾಧೀಶರು, ಎಲ್ಲಾ ಸ್ಥರದ ವ್ಯಕ್ತಿಗಳು, ಸಾಮಾಜಿಕ ಕಳಕಳಿಯುಳ್ಳ ಆಸಕ್ತರು ತಮ್ಮ ಉದಾರ ದೇಣಿಗೆಯನ್ನು ನೀಡುತ್ತಿದ್ದಾರೆ. ಇದರೊಂದಿಗೆ ಜಿಲ್ಲೆಯ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪನವರು, ಸೂಡಾದ ಅಧ್ಯಕ್ಷರಾದ ಎಸ್, ಎಸ್, ಜ್ಯೋತಿ ಪ್ರಕಾಶ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡರು ಮಾಚೇನಹಳ್ಳಿ ಕೈಗಾರಿಕೋದ್ಯಮಿಗಳು ಸೇರಿದಂತೆ ಹಲವರು ಕೈಜೋಡಿಸಿದ್ದಾರೆ.

ಈ ತಂಡ ಕೇವಲ ಇದೊಂದೇ ಕೆರೆಗೆ ಸೀಮಿತವಾಗದೆ ಸುತ್ತಮುತ್ತಲಿನ ಇನ್ನುಳಿದ ಕೆರೆಗಳ ಅಭಿವೃದ್ಧಿ, ಗಿಡ ನೆಡುವುದು ಹಾಗೂ ಇತರೆ ಪರಿಸರಪರ ಕೆಲಸಗಳಿಗೂ ಇನ್ನಿಲ್ಲದಂತೆ ಮುಂಚೂಣಿಯಲ್ಲಿ ಶ್ರಮಿಸುತ್ತಿದೆ. ಇವರ ಈ ಕೆಲಸವನ್ನು ಕೇವಲ ನೋಡುತ್ತಾ, ಬೆನ್ನು ತಟ್ಟಿ, ನಾಲ್ಕು ಹೊಗಳಿಕೆಯ ಮಾತನಾಡುವ ಬದಲು ಪರಿಸರ ಜಾಗೃತಿಯನ್ನು ನಮ್ಮಲ್ಲೂ ಬೆಳೆಸಿಕೊಂಡು ಸಹಭಾಗಿಗಳಾಗಿ ಇನ್ನಷ್ಟು ಜಲಮೂಲಗಳನ್ನು ಉಳಿಸೋಣ, ಮರಗಿಡಗಳನ್ನು ನೆಟ್ಟು ಸಂರಕ್ಷಿಸೋಣ. ದಿನಕ್ಕೆ ಜವಾಬ್ದಾರಿಯುತರಾಗಿ ಕನಿಷ್ಟ 10 ಗಿಡವನ್ನಾದರೂ ಬೆಳೆಸಿ ನೀರು ಹಾಕೋಣ. ಬಿಡುವು ಮಾಡಿಕೊಂಡು ಹೋಗಿ ವೀಕ್ಷಿಸಿ ನಿಮ್ಮ ಮಕ್ಕಳಿಗೂ ಇದು ಪ್ರೇರಣೆಯಾಗಲಿ. ಮುಂದಿನ ಯೋಚನೆ ಯೋಜನೆಗಳಿಗೆ ಭಾಗಿಯಾಗಲು ಸಂಪರ್ಕಿಸಿ ಬಾಲಕೃಷ್ಣ ನಾಯ್ಡು (94482-56122).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLakeLatest News KannadaLocal NewsMalnad NewsPushkaraniSahana ChethanShimogaShivamoggaಕೆರೆಜಿಲ್ಲಾ ಪಂಚಾಯತ್ಜೀವನಾಡಿಪಶ್ಚಿಮ ಘಟ್ಟಪುಷ್ಕರಣಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share199Tweet123Send
Previous Post

30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ; ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

Next Post

ಕೋವಿಡ್‌ ನಿಯಂತ್ರಣಕ್ಕೆ ವಿಮಾನದ ಮೂಲಕ ಸೋಂಕು ಸಿಂಪಡಣೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್‌ ನಿಯಂತ್ರಣಕ್ಕೆ ವಿಮಾನದ ಮೂಲಕ ಸೋಂಕು ಸಿಂಪಡಣೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಚಾಲನೆ

ಕೋವಿಡ್‌ ನಿಯಂತ್ರಣಕ್ಕೆ ವಿಮಾನದ ಮೂಲಕ ಸೋಂಕು ಸಿಂಪಡಣೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಹುದ್ದೆಗಳು: ಲಿಂಕ್ಡ್‌ ಇನ್

April 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL