Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಒಂದು ಕೋಟಿ ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿ: ಶಾಸಕ ಸಂಗಮೇಶ್ವರ್

June 8, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ 35 ವಾರ್ಡ್‌ಗಳಲ್ಲಿ ಸುಮಾರು 1 ಕೋ. ರೂ. ವೆಚ್ಚದಲ್ಲಿ 25 ಸಾವಿರ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.

ಅವರು ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಕೋವಿಡ್-19 ಕಾರ್ಯ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಸಭೆ 35 ವಾರ್ಡ್‌ಗಳಲ್ಲಿ ಕೋವಿಡ್-15 ಸೆಮಿ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಅರ್ಹ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದ್ದು, ನಗರಸಭೆ ವಿಶೇಷ ಅನುದಾನದಲ್ಲಿ (ಸಿಎಸ್‌ಆರ್) ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದು ಸುಮಾರು 1 ಕೋ. ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗುತ್ತಿದೆ. ನಗರಸಭೆ ಇತಿಹಾಸದಲ್ಲಿಯೇ ಇದೊಂದು ಮೊದಲ ಪ್ರಯತ್ನವಾಗಿದೆ ಎಂದರು.

ಈಗಾಗಲೇ ಸರ್ಕಾರ ಬಡವರಿಗೆ ಉಚಿತ ಅಕ್ಕಿ ವಿತರಿಸಿದ್ದು, ಅಕ್ಕಿಯನ್ನು ಬಿಟ್ಟು ಇತರೆ ದಿನಸಿ ಸಾಮಗ್ರಿಗಳನ್ನು ನೀಡಲಾಗುವುದು. ಎಲ್ಲಾ ಪ್ರಕ್ರಿಯೆಗಳು ಮುಗಿಯಲು ಸುಮಾರು 10 ದಿನಗಳು ಬೇಕಾಗುತ್ತದೆ. ಒಂದು ವೇಳೆ ಲಾಕ್‌ಡೌನ್ ಇಲ್ಲದಿದ್ದರೂ ಸಹ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ನಿಗದಿಪಡಿಸಲಾದ ಮಾನದಂಡಗಳ ಆಧಾರದ ಮೇಲೆ ಆಯಾ ವಾರ್ಡ್‌ಗಳ ಸದಸ್ಯರು ಹಾಗು ಮುಖಂಡರು ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ಬಡವರನ್ನು ಗುರುತಿಸಿ ದಿನಸಿ ಸಾಮಗ್ರಿಗಳನ್ನು ವಿತರಿಸಲಿದೆ ಎಂದರು.

35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಲಸಿಕಾ ಕೇಂದ್ರ :
ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ 1, 2 ರಿಂದ 3 ಹಾಗು 3 ರಿಂದ 4 ವಾರ್ಡ್‌ಗಳನ್ನು ಒಳಗೊಂಡಂತೆ ತಲಾ ಒಂದೊಂದು ಒಟ್ಟು 12 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು. ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಕೇವಲ 1 ಸಾವಿರ ಲಸಿಕೆ ಮಾತ್ರ ಬರುತ್ತಿದೆ. ಆದರೆ ಶಿವಮೊಗ್ಗಕ್ಕೆ ಹೆಚ್ಚಿನ ಲಸಿಕೆ ನೀಡಲಾಗುತ್ತಿದೆ. ಈ ರೀತಿಯ ತಾರತಮ್ಯ ಸರಿಯಲ್ಲ. ಭದ್ರಾವತಿಗೂ ಹೆಚ್ಚಿನ ಲಸಿಕೆ ನೀಡಬೇಕೆಂದು ಆಗ್ರಹಿಸಿದರು.

ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಬೇಕು. ಸಾಮಾಜಿಕ ಅಂತರ, ಕಡ್ಡಾಯವಾಗಿ ಸ್ಯಾನಿಟೈಜರ್ ಮತ್ತು ಮಾಸ್ಕ್ ಬಳಸಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಬರದೆ ಸಹಕರಿಸಬೇಕು. ಅಲ್ಲದೆ ಕೊರೋನಾ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಹ ಇನ್ನೂ ಹೆಚ್ಚಿನ ಶ್ರಮ ವಹಿಸಬೇಕಾಗಿದೆ ಎಂದರು.

ಸೋಂಕಿಗೆ ಒಳಗಾಗಿ ತುರ್ತು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದವರು ಪುನಃ ಜೀವಂತವಾಗಿ ಹಿಂದಿರುಗುತ್ತಿಲ್ಲ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳು ಇವೆಯೋ, ಇಲ್ಲವೋ ಒಂದು ಗೊತ್ತಾಗುತ್ತಿಲ್ಲ. ಇಂದಿಗೂ ಆಕ್ಸಿಜನ್, ವೆಂಟಿಲೇಟರ್ ಕೊರತೆ ಕಂಡು ಬರುತ್ತಿದ್ದು, ಯಾರಾದರೂ ಸತ್ತರೆ ಮಾತ್ರ ಹೊಸಬರಿಗೆ ವ್ಯವಸ್ಥೆ ಕಲ್ಪಿಸುವಂತಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಪತ್ರಕರ್ತರು, ಮಾಧ್ಯಮಗಳಿಗೆ ಎಲ್ಲವೂ ಸರಿಯಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತಕ್ಷಣ ಆಸ್ಪತ್ರೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸಬೇಕೆಂದು ಒತ್ತಾಯಿಸಿದರು.

ಲಸಿಕಾ ಕೇಂದ್ರಗಳಿಗೆ ಸಂಬಂಧಿಸಿದಂತೆ ನಗರಸಭಾ ಸದಸ್ಯರು, ಮುಖಂಡರುಗಳಿಂದ ಹಲವು ಸಲಹೆ ಸೂಚನೆಗಳು ವ್ಯಕ್ತವಾದವು. ತಾಲೂಕು ಆರೋಗ್ಯಾಧಿಕಾರಿಗಳು ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವುದಾಗಿ ಭರವಸೆ ನೀಡಿದರು.

ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಕೆ ಸುದೀಪ್‌ಕುಮಾರ್, ಬಿ.ಟಿ ನಾಗರಾಜ್, ವಿ. ಕದಿರೇಶ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಚನ್ನಪ್ಪ, ಮುಖಂಡರಾದ ಎಸ್.ಎಸ್ ಭೈರಪ್ಪ, ವಸಂತಕುಮಾರ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCOVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownMalnad NewsMLA BK SangameshwarNews in KannadaNews KannadaShimogaShivamoggaShivamogga Newsಉಕ್ಕಿನನಗರಿಕೋವಿಡ್-19ಭದ್ರಾವತಿಮಲೆನಾಡು_ಸುದ್ಧಿಲಾಕ್‍ಡೌನ್ಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Previous Post

ಲಸಿಕೆ ಹಾಕಿಸಿಕೊಂಡು ಕೊರೋನಾ ನಿಯಂತ್ರಿಸಲು ಸಹಕರಿಸಿ: ಶಾಸಕ ಸಂಗಮೇಶ್ವರ್ ಮನವಿ

Next Post

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!