ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಮತ್ತೆ ಆರು ಜಿಲ್ಲೆಗಳಿಗೆ ಅನ್ಲಾಕ್ ಘೋಷಣೆ ಮಾಡಲಾಗಿದ್ದು, ಸಂಜೆ 5 ಗಂಟೆಯವರೆಗೂ ಎಲ್ಲಾ ರೀತಿಯ ವ್ಯಾಪಾರ ವ್ಯವಹಾರಗಳಿಗೆ ಅವಕಾಶ ಕಲ್ಪಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವ ಶಿವಮೊಗ್ಗ, ಉಡುಪಿ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೊರೋನ ಪಾಸಿಟಿವ್ ಕಡಿಮೆ ಆಗುತ್ತಿರುವುದರ ಹಿನ್ನಲೆಯಲ್ಲಿ ಈ 6 ಜಿಲ್ಲೆಗಳಲ್ಲಿ ಎಲ್ಲಾ ಚಟುವಟಿಕೆಗೆ ಜುಲೈ 5ರವರೆಗೆ ಅನುಕೂಲ ಮಾಡಿಕೊಟ್ಟಿದೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅನ್ ಲಾಕ್ ಓಪನ್ ಆಗಲಿವೆ. ಇದರಿಂದ ಜವಳಿ ಅಂಗಡಿ, ಚಪ್ಪಲಿ ಅಂಗಡಿ, ಎಲೆಕ್ಟ್ರಾನಿಕ್ಸ್ ಅಂಗಡಿ, ಜ್ಯವೆಲ್ಲರಿಗಳಿಗೂ ಬಿಗ್ ರಿಲೀಫ್ ಸಿಗಲಿದೆ. ಈ ಆದೇಶ ನಾಳೆಯಿಂದಲೇ ಜಾರಿಯಾಗಲಿದೆ. ಆದರೆ ಸೂಕ್ತ ಕೊರೋನ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post