ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೊರೋನಾ 2ನೇ ಅಲೆಯ ಲಾಕ್ಡೌನ್ ಸಂದರ್ಭದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕರ್ಯದರ್ಶಿ ಕೆ. ರಂಗನಾಥ್ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.
ಹಸಿದವರಿಗೆ ಅನ್ನ, ಅವಶ್ಯಕತೆ ಇರುವವರಿಗೆ ಐಸೋಲೇಷನ್ ಕಿಟ್, ರೇಷನ್ ಕಿಟ್ ಅಂಬುಲೆನ್ಸ್ ಸೇವೆ ರಕ್ತದ ಅವಶ್ಯಕತೆ ಇರುವವರಿಗೆ ರಕ್ತದಾನ ಇನ್ನೂ ಹತ್ತು ಹಲವು ನೊಂದ ಜನರ ಧ್ವನಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಕರೆಯಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ನ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರ ಆದೇಶದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ನಾಯಕರು ಹಾಗೂ ಮುಖಂಡರುಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದು, ಇದನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಪ್ರತಿಯೊಬ್ಬ ಕಾರ್ಯಕರ್ತರಿಗೂ ಅಭಿನಂದನಾಪೂರ್ವಕ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.
ಮೊದಲನೆದಾಗಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಾಗೂ 55 ದಿನಗಳ ಕಾಲ ಲಾಕ್ಡೌನ್ ಸಂದರ್ಭದಲ್ಲಿ ಹಸಿದವರಿಗೆ ಅನ್ನ ಎಂಬ ಕಾರ್ಯಕ್ರಮದಡಿ ಆಹಾರದ ಅವಶ್ಯಕತೆ ಇರುವವರಿಗೆ ದೂರದ ಊರುಗಳಿಂದ ಬಂದಂತಹ ವಲಸೆ ಕಾರ್ಮಿಕರಿಗೆ ನಗರದ ಹಲವು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಬಂಧಿಗಳಿಗೆ ಹಾಗೂ ನಗರದ ಹಲವು ಭಾಗಗಳಲ್ಲಿ ಇರುವಂತಹ ನಿರಾಶ್ರಿತರಿಗೆ ಆಹಾರದ ಪೊಟ್ಟಣಗಳನ್ನು ಹಾಗೂ ನೀರಿನ ಬಾಟಲ್ಗಳನ್ನು ವಿತರಿಸುವ ಕಾರ್ಯ ಮಾಡಲಾಗಿದೆ ಎಂದು ಹೇಳಿದರು.
ಏಪ್ರಿಲ್ 24 ರಿಂದ ಜೂನ್ 20ರವರೆಗೆ ಒಟ್ಟು 57 ದಿನಗಳ ಕಾಲ ಹಸಿದವರಿಗೆ ಅನ್ನ ಕಾರ್ಯಕ್ರಮಕ್ರಮವನ್ನು ಜಿಲ್ಲಾದ್ಯಂತ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಉತ್ಸಾಹಕರಾಗಿ ನಡೆಸಿದ್ದು, ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ಹಾಗೂ ಇನ್ನುಳಿದಂತೆ ತಾಲ್ಲೂಕು ಮಟ್ಟದಲ್ಲಿ 15 ಸಾವಿರ ಒಟ್ಟು ಜಿಲ್ಲಾದ್ಯಂತ 30 ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರವನ್ನು ನೀಡುವಂತಹ ಕಾರ್ಯ ಮಾಡಲಾಗಿದೆ ಎಂದರು.
ಐಸೋಲೇಶನ್ ಕಿಟ್ನ್ನು ಜಿಲ್ಲಾದ್ಯಂತ 5ಸಾವಿರಕ್ಕೂ ಅಧಿಕ ನಮ್ಮ ರಾಜ್ಯ ಯುವ ಕಾಂಗ್ರೆಸ್ನ ಅಧ್ಯಕ್ಷ ರಕ್ಷಾರಾಮಯ್ಯನವರ ಸಹಕಾರದೊಂದಿಗೆ ವಿತರಿಸಿದ್ದು, ರಾಜ್ಯ ಯುವ ಕಾಂಗ್ರೆಸ್ನ ನಾಯಕ ಮಹ್ಮದ್ ನಲ್ಪಾಡ್ರವರ ಸಹಕಾರೊಂದಿಗೆ ಆಂಬುಲೆನ್ಸ್ ಸೇವೆ ನೀಡಿ ಸಾವಿರಾರು ರೋಗಿಗಳಿಗೆ ನೆರವು ನೀಡಲಾಗಿದೆ ಎಂದು ವಿವರಿಸಿದರು.
ಜಿಲ್ಲಾದ್ಯಂತ 4 ಸಾವಿರಕ್ಕೂ ಅಧಿಕ ರೇಷನ್ ಕಿಟ್ಗಳನ್ನು ವಿಶೇಷವಾಗಿ ಶಿವಮೊಗ್ಗ ನಗರದಲ್ಲಿ 85ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ನೀಡುವುದರೊಂದಿಗೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಹಾಗೂ ನೊಂದವರ ಪರವಾಗಿ ಸಹಾಯಹಸ್ತ ಚಾಚುವ ಕಾರ್ಯವನ್ನು ಮಾಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ನ ಎಲ್ಲಾ ಕಾರ್ಯಕರ್ತರು ವಾರ್ಡ್ ಮತ್ತು ಪ್ರತೀ ಗ್ರಾಮಪಂಚಾಯತ್ ಮಟ್ಟದಲ್ಲೂ ಮಾಡುತ್ತಾ ಬಂದಿದ್ದು ಇಂತಹ ಕಾರ್ಯಕ್ಕೆ ನಮ್ಮ ಪಕ್ಷದ ಹಿರಿಯ ನಾಯಕರುಗಳು ಕಾರ್ಯಕರ್ತರ ಸಹಕಾರ ಹಾಗೂ ಪೋಲೀಸ್ ಇಲಾಖೆ, ಪತ್ರಕರ್ತರು ಹಾಗೂ ಹಲವು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ಲಾಘನೆ ವ್ಯಕ್ತಪಡಿಸಿದ್ದು, ಅವರೆಲ್ಲರಿಗೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಗೋಷ್ಠಿಯಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ನ ಎಸ್. ಕುಮರೇಶ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಈ.ಟಿ. ನಿತಿನ್ ರಾವ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್. ಕಿರಣ್, ಟಿವಿ ರಂಜಿತ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ವೆಂಕಟೇಶ್ ಕಲ್ಲೂರ್, ಅರುಣ್ ನವಲೆ, ರಾಹುಲ್ ಸೀಗೆಹಟ್ಟಿ, ಇರ್ಫಾನ್ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post