Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ: ಸಚಿವ ಯೋಗೇಶ್ವರ

July 6, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಮಟ್ಟದ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಸಚಿವ ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.

ಗಣಿಗಾರಿಕೆ, ಕೈಗಾರಿಕೆ, ನಿರ್ಮಾಣ ಕ್ಷೇತ್ರ ಹಾಗೂ ಔಷಧಿ ಉತ್ಪಾದನಾ ಕಂಪನಿಗಳು ಸೇರಿದಂತೆ ವಿವಿಧ ರೀತಿಯ ಕೈಗಾರಿಕೆಗಳಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ಮಟ್ಟದ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ ನೀಡಬೇಕೆಂದು ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಎ ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ಕೇಂದ್ರ ಸರ್ಕಾರದ ಅಧಿಕಾರದ ವ್ಯಾಪ್ತಿಗೆ ಬರುತ್ತವೆ. ಬಿ ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ನಾವು ಹೊಸದಾಗಿ ಸ್ಥಾಪಿಸುವ ಉದ್ಯಮಿಗಳಿಗೆ ಕೇವಲ ಪರಿಸರ ವಿಮೋಚನಾ ಪತ್ರ (Environment Clearance) ನೀಡಿ ಅನುಮತಿ ನೀಡುತ್ತೇವೆ. ನಾವು ಅನುಮತಿ ನೀಡಿದ ನಂತರ ಕೈಗಾರಿಕೆಗಳು ಪರಿಸರ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸುವ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ನಮಗೆ ಅದರ ಮೇಲೆ ನಿಯಂತ್ರಣ ಸಹ ಇಲ್ಲ. ಹೀಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಧ್ಯೆ ಪ್ರವೇಶಿಸಿ ಹಲವಾರು ಚಟುವಟಿಕೆಗಳನ್ನು ನಿಲ್ಲಿಸಿದೆ. ಇನ್ನು ಮುಂದೆ ಬಿ ವರ್ಗದ ಚಟುವಟಿಕೆಗಳ ಮೇಲೆ ನಿಯಂತ್ರಣವಿಡಲು ಹಾಗೂ ಪರಿಶೀಲನೆ ಮಾಡಲು ಪ್ರಸ್ತಾವನೆ ಕಳುಹಿಸಿ ಎಂದು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಪರಿಸರ ಮಾಲಿನ್ಯ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷರಾದ ಸಾಸ್ವತಿ ಮಿಶ್ರಾ ಅವರಿಗೆ ಸೂಚಿಸಿದರು.

ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆ.ಐ.ಡಿ.ಬಿ.) ಪ್ರದೇಶದಲ್ಲಿ ಸಹ ಕೈಗಾರಿಕೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸುತ್ತಿಲ್ಲ ಅಪಾರವಾದ ವಾಯು ಹಾಗೂ ಜಲಮಾಲಿನ್ಯವಾಗುತ್ತಿದ್ದು, ಪರಿಸರಕ್ಕೆ ತುಂಬಾ ಧಕ್ಕೆ ಉಂಟಾಗುತ್ತಿದೆ. ಕೆರೆ, ನದಿ ಹಾಗೂ ಸಮುದ್ರದಲ್ಲೂ ವಿಷಕಾರಕ ಅಂಶಗಳು ಸೇರುತ್ತಿದ್ದು, ಜಲಮೂಲಗಳು ಕಲುಷಿತಗೊಳ್ಳುತ್ತಿವೆ. ಕೆ.ಐ.ಡಿ.ಬಿ. ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದ್ದರೂ ಸಹ ಪರಿಸರ ಸಂರಕ್ಷಣಾ ನಿಯಮಗಳನ್ನು ಪಾಲಿಸಲೇಬೇಕು. ಇಲ್ಲವಾದಲ್ಲಿ, ಪರಿಸರ ಮಾಲಿನ್ಯಕ್ಕೆ ಸರ್ಕಾರಿ ಸಂಸ್ಥೆ ಹೊಣೆಯಾದರೆ ಇತರೆ ಕೈಗಾರಿಕೆಗಳನ್ನು ನಾವು ನಿಯಂತ್ರಿಸುವುದು ಹೇಗೆ ಎಂದು ಸಮಿತಿ ಹಾಗೂ ಪ್ರಾಧಿಕಾರದ ಸದಸ್ಯರುಗಳನ್ನು ಪ್ರಶ್ನಿಸಿದರು. ಬಿ-1 ಮತ್ತು ಬಿ-2 ವರ್ಗದ ಕೈಗಾರಿಕೆಗಳು ಯಾವುದೇ ರೀತಿಯಲ್ಲೂ ಪರಿಸರ ಮಾಲಿನ್ಯ ಮಾಡದಂತೆ ಅವುಗಳ ಮೇಲೆ ನಮ್ಮ ಹತೋಟಿ ಇರಬೇಕು ಹಾಗೂ ಅವರು ನಮ್ಮ ನಿಯಂತ್ರಣದಲ್ಲಿರುವಂತೆ ಸಮರ್ಪಕವಾದ ಆದೇಶ ಹೊರಡಿಸಲು ಪ್ರಸ್ತಾವನೆ ಕಳುಹಿಸಿ ಎಂದು ಸಚಿವರು ಸೂಚಿಸಿದರು.

ಪ್ರಸಕ್ತ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಹಾಗೂ ತಜ್ಞರ ಸಮಿತಿ ಮುಂದೆ ಗಣಿಗಾರಿಕೆಗೆ ಸಂಬಂಧಿಸಿದ 78 ಕಡತಗಳು ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ 34 ಹಾಗೂ ಕೈಗಾರಿಕೆಗಳಿಗೆ ಸಂಬಂಧಿಸಿದ 2 ಕಡತಗಳು ಬಾಕಿ ಇದ್ದು, ಈ ತಿಂಗಳು 23 ಹಾಗೂ 24ರಂದು ಸಭೆ ಏರ್ಪಡಿಸಿದ್ದು, ಕಡತಗಳನ್ನು ಇತ್ಯರ್ಥ ಪಡಿಸುವುದಾಗಿ ಸದಸ್ಯರುಗಳು ತಿಳಿಸಿದರು.

ಹಲವಾರು ಶಾಸಕರು ಹಾಗೂ ಸಚಿವರುಗಳು ತಮ್ಮ ಕಡತಗಳು ವಿಲೇವಾರಿ ಆಗುತ್ತಿಲ್ಲವೆಂದು ನನ್ನ ಮೇಲೆ ಒತ್ತಡವೇರುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಕಡತಗಳನ್ನು ವಿಲೇವಾರಿ ಮಾಡಿ ಎಂದು ಸದಸ್ಯರುಗಳಿಗೆ ಸಚಿವರು ತಾಕೀತು ಮಾಡಿದರು.

ಗಣಿಗಾರಿಕೆ, ನಿರ್ಮಾಣ ಕ್ಷೇತ್ರ ಹಾಗೂ ಉದ್ಯಮಿಗಳು ಸಮಾಲೋಚಕರ ಮೂಲಕ ಪರಿಸರ ಮಾಲಿನ್ಯ ಮೌಲ್ಯ ಮಾಪನ ಪ್ರಾಧಿಕಾರ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಅರ್ಜಿಗಳನ್ನು ಸಲ್ಲಿಸುತ್ತಾರೆ. ಪ್ರಾಧಿಕಾರ ಹಾಗೂ ಸಮಿತಿಯ ಕೆಲವು ಸದಸ್ಯರು ಸಮಾಲೋಚಕರಾಗಿದ್ದಾರೆ ಎಂಬ ದೂರುಗಳು ಸಹ ಬಂದಿವೆ. ನಮ್ಮ ಸದಸ್ಯರುಗಳು ಸಮಾಲೋಚಕರಾಗಿ ಕಾರ್ಯನಿರ್ವಹಿಸುವಂತೆ ಇಲ್ಲ ಎಂದು ಇದೇ ವೇಳೆ ಸಚಿವರು ಎಚ್ಚರಿಕೆ ನೀಡಿದರು.

ಔಷಧಿ ಉತ್ಪಾದನಾ ಕಾರ್ಖಾನೆಗಳಲ್ಲಿ ಅತೀ ಹೆಚ್ಚಿನ ರಾಸಾಯನಿಕಗಳನ್ನು ಬಳಸುತ್ತಾರೆ. ಅದರಿಂದ, ಪರಿಸರದ ಮೇಲೆ ಭಾರಿ ದುಷ್ಪರಿಣಾಮವಾಗುತ್ತಿದೆ. ಇದನ್ನು ನಿಯಂತ್ರಿಸಬೇಕೆಂದು ಕೆಲವು ಸದಸ್ಯರು ಸಚಿವರಿಗೆ ಸಲಹೆ ನೀಡಿದರು.

ಇನ್ನು ಮುಂದೆ ತಾವೇ ಖುದ್ದಾಗಿ ಕೈಗಾರಿಕೆ ಪ್ರದೇಶಗಳಿಗೆ, ಗಣಿಗಾರಿಕೆ ಪ್ರದೇಶಗಳಿಗೆ, ಔಷಧಿ ಉತ್ಪಾದನೆ ಹಾಗೂ ಇತರ ಉತ್ಪಾದನಾ ಕ್ಷೇತ್ರದ ವಲಯಗಳಿಗೆ ಭೇಟಿ ನೀಡಿ ಪರಿಸರ ಮಾಲಿನ್ಯದ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವ ಯೋಗೇಶ್ವರ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister YogishwarNews in KannadaNews KannadaState Newsಬೆಂಗಳೂರುಸಚಿವ ಸಿ.ಪಿ.ಯೋಗೇಶ್ವರ
Previous Post

ಮುಂಬರುವ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿದ್ದರಾಮಯ್ಯ

Next Post

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Representation Image

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!