No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ತುಂಬಿದ ಭದ್ರೆಗೆ ಸಂಸದ ರಾಘವೇಂದ್ರ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಬಾಗಿಣ ಅರ್ಪಣೆ

ಶಿವಮೊಗ್ಗ ಜಿಲ್ಲೆ ಕೃಷಿ ಕ್ಲಸ್ಟರ್ ಆಗಿ ಹೊರಹೊಮ್ಮಬೇಕು: ಸಂಸದರ ಆಶಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2021
in ಭದ್ರಾವತಿ
0
ತುಂಬಿದ ಭದ್ರೆಗೆ ಸಂಸದ ರಾಘವೇಂದ್ರ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಬಾಗಿಣ ಅರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬಿಆರ್’ಪಿ(ಭದ್ರಾವತಿ): ವಾಡಿಕೆಗಿಂತಲೂ ಮೊದಲೇ ತುಂಬವ ಹಂತಕ್ಕೆ ನೀರು ಸಂಗ್ರಹವಾಗಿರುವ ಭದ್ರಾ ಜಲಾಶಯಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇಂದು ಬಾಗಿಣ ಅರ್ಪಿಸಿದರು.

ಆನಂತರ ಮಾತನಾಡಿದ ಅವರು, ವಾಡಿಕೆಗಿಂತಲೂ ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಬಹುತೇಕ ಅಣೆಕಟ್ಟೆಗಳು ತುಂಬಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ಜಿಲ್ಲೆ ರೈತರ ಮೊಗದಲ್ಲಿ ಸಂತಸ ಮೂಡಿರುವುದು ನಮಗೂ ಸಹ ಸಂತೋಷಕರ ವಿಚಾರವಾಗಿದೆ ಎಂದರು.

ಚನ್ನಪಟ್ಟಣವನ್ನು ಮರದ ಗೊಂಬೆ ತಯಾರಿಕೆಗೆ, ಬೆಂಗಳೂರನ್ನು ಸಾಫ್ಟ್‍ವೇರ್ ಕ್ಲಸ್ಟರ್ ಹೀಗೆ ವಿವಿಧ ಜಿಲ್ಲೆಗಳನ್ನು ಕ್ಲಸ್ಟರ್ ಆಗಿ ಗುರುತಿಸಲಾಗಿದ್ದು, ಶಿವಮೊಗ್ಗ ಜಿಲೆಯನ್ನು ಕೃಷಿ ಕ್ಲಸ್ಟರ್ ಎಂದು ಹೆಮ್ಮೆಯಿಂದ ಹೇಳಬೇಕು ಆ ರೀತಿಯಲ್ಲಿ ಕೆಲಸಗಳು ಆಗಬೇಕು ಹಾಗೂ ರೈತರು ಸ್ವಾಭಿಮಾನದಿಂದ ಬದುಕಲು ಅನುವಾಗುವಂತೆ ಕೆಲಸ ಮಾಡಿ ದೇವರು ಕೊಟ್ಟ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ 1940 ರಲ್ಲಿ 48 ಕೋಟಿ ವೆಚ್ಚದಲ್ಲಿ ಇಂತಹ ಒಂದು ಬೃಹತ್ ಜಲಾಶಯವನ್ನು ನಿರ್ಮಿಸಲಾಗಿದ್ದು ಪ್ರಸ್ತುತ ಸುಮಾರು 2 ಲಕ್ಷ ಎಕರೆಗೆ ನೀರುಣಿಸುವ ಪುಣ್ಯದ ಕೆಲಸ ಈ ಜಲಾಶಯದಿಂದ ಆಗುತ್ತಿದೆ. ರಾಜ್ಯದ ದೊಡ್ಡ ಜಲಾಶಯಗಳ ಪೈಕಿ ಭದ್ರಾ ಕೂಡ ಒಂದಾಗಿದ್ದು ಇಂತಹ ಜಲಾಶಯ ಹೊಂದಿರುವ ಜಿಲ್ಲೆಯ ರೈತರಿಗೆ ನೀರಿನ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಚ್ಚರಿಕೆಯಿಂದ ಸಂಬಂಧಿಸಿದವರೆಲ್ಲ ಕೆಲಸ ಮಾಡಬೇಕು ಎಂದರು.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರ, ಚಿತ್ರದುರ್ಗ, ಹಾವೇರಿ ಗದಗ್, ವಿಜಯನಗರ ಸೇರಿ 8 ಜಿಲ್ಲೆಗಳಿಗೆ ಈ ಜಲಾಶಯದಿಂದ ನೀರಾವರಿ ಕಲ್ಪಿಸಿರುವುದು ಹೆಮ್ಮೆಯ ವಿಚಾರ. ಪ್ರಕೃತಿ ವಿರುದ್ದ ಮನಷ್ಯನ ದರ್ಪ ಮತ್ತು ವಿನಾಶಕಾರಿ ಪ್ರವೃತ್ತಿಗೆ ಪ್ರಕೃತಿ ಸಾಕಷ್ಟು ಬಾರಿ ಸುನಾಮಿ ,ಇತರೆ ಪ್ರಾಕೃತಿಕ ವಿಕೋಪಗಳ ಮೂಲಕ ಸೇಡನ್ನು ತೀರಿಸಿಕೊಳ್ಳುತ್ತಿದೆ. ಪ್ರಸ್ತುತ ಕೋವಿಡ್ ಕೂಡ ಪ್ರಕೃತಿಯ ಉತ್ತರವೇ ಆಗಿದ್ದು, ನಾವೆಲ್ಲ ಸಾಕಷ್ಟು ಎಚ್ಚರಿಕೆಯಿಂದ ಪ್ರಕೃತಿ ಜೊತೆ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿ ಕಳೆದ 2 ವರ್ಷಗಳಲ್ಲಿ ಬೃಹತ್ ನೀರಾವರಿ ಇಲಾಖೆಯಿಂದ ಜಿಲ್ಲೆಗೆ ಸುಮಾರು 3 ಸಾವಿರ ಕೋಟಿಗೂ ಹೆಚ್ಚು ಅನುದಾನ ತಂದು ಅನೇಕ ಅಭಿವೃದ್ದಿ ಕೆಲಸ ಕೈಗೊಳ್ಳಲಾಗಿದೆ. ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ 350 ಕೋಟಿ ಅನುದಾನದಲ್ಲಿ ಹೊಸಹಳ್ಳಿ ಏತನೀರಾವರಿ, ಸೊರಬ ತಾಲ್ಲೂಕಿನ ಮೂಗೂರು, ಮೂಡಿ ಏತ ನೀರಾವರಿ, ಶಿಕಾರಿಪುರ ತಾಲ್ಲೂಕಿನ ಉಡುಗಣಿ ತಾಳಗುಂದ ಹೊಸೂರು ಹೋಬಳಿ, ಬೈಂದೂರು ಕ್ಷೇತ್ರದ ಸಿದ್ದಾಪುರ ನೀರಾವರಿ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಹಲವು ಕ್ಷೇತ್ರಗಳಲ್ಲಿ ಸುಮಾರು 200 ಕೋಟಿ ವೆಚ್ಚ ರೈತ ಸಮುದಾಯ ಭವನಗಳ ನಿರ್ಮಾಣ, ರಸ್ತೆ ಕಾಮಗಾರಿ, ಅಚ್ಚುಕಟ್ಟು ಪ್ರದೇಶದ ಕೆರೆಗಳಲ್ಲಿ ಹೂಳು ತೆಗೆಯುವುದು, ಚಾನಲ್ ಗಳ ದುರಸ್ತಿ ಸೇರಿದಂತೆ ಅನೇಕ ಕೆಲಸ ಆಗುತ್ತಿವೆ. ಬಯಲುಸೀಮೆ ಭಾಗದಲ್ಲಿ 20 ಟಿಎಂಸಿ ನೀರು ನೀಡುವ ಉದ್ದೇಶದಿಂದ ಭದ್ರಾ ಮೇಲ್ಚಂಡೆ ಯೋಜನೆಯಡಿ ಚಿತ್ರದುರ್ಗ,ಹೊಸದುರ್ಗ ,ಹಿರಿಯೂರು ಭಾಗದಲ್ಲಿ ಮೊದಲನೇ ಹಂತದ ಕೆಲಸ ಆಗಿದೆ.

75 ಟಿಂಎಂಸಿ ನೀರಿನ ಸಾಮಥ್ರ್ಯ ಹೊಂದಿರುವ ಭದ್ರಾ ಜಲಾಶಯ ರಾಜ್ಯದಲ್ಲಿ ಇರುವ ಬೃಹತ್ ಜಲಾಶಯಗಳಲ್ಲಿ ಒಂದಾಗಿದ್ದು, ಇಲ್ಲಿ ಗುಣಮಟ್ಟದದ ಕಾಮಗಾರಿಗಳು ಆಗಬೇಕು. ಅಧಿಕಾರಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕಳಪೆ ಕಾಮಗಾರಿ ಬಗ್ಗೆ ಕೆಲ ಸಂಘಟನೆಗಳು ಪ್ರಶ್ನಿಸಿದ್ದು, ಅದನ್ನು ತಿದ್ದಿಕೊಂಡು ಅಗತ್ಯವಿರುವ ಸಣ್ಣ ಪುಟ್ಟ ರಿಪೇರಿಗಳನ್ನು ಸಹ ಅತಿ ಎಚ್ಚರಿಕೆಯಿಂದ ಮಾಡಬೇಕು ಎಂದ ಅವರು ಕೋವಿಡ್ ಸಂಕಷ್ಟದಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಸಾಧ್ಯವಾಗಲಿಲ್ಲ. ಆರ್ಥಿಕ ಸವಾಲಿನ ನಡುವೆಯೂ ಸಮಪರ್ಕಕವಾಗಿ ಎಲ್ಲ ಜಲಾಶಯಗಳ ನೀರನ್ನು ಉಪಯೋಗಿಸಿಕೊಂಡು ರೈತರಿಗೆ ಅನುಕೂಲ ಮಾಡಿಕೊಡಬೇಕೆಂದರು.

ಈಗಾಗಲೇ ಕೋವಿಡ್ 3ನೇ ಅಲೆ ಆತಂಕ ಎದುರಾಗಿದೆ. ರಾತ್ರಿ ಕಫ್ರ್ಯೂ ಜಾರಿಯಾಗಿದೆ. ಕೋವಿಡ್‍ನಿಂದ ಮುಕ್ತರಾದಂತಹ ನಮ್ಮ ಈ ನಡವಳಿಕೆ ಬೇಡ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದ್ದಂತಹ ಅನುದಾನ ಉಪಯೋಗಿಸಿಕೊಂಡು ಕಾಡಾ ಅಧ್ಯಕ್ಷರು ಅತ್ಯುತ್ತಮವಾಗಿ ರೈತ ಪರ ಕೆಲಸ ಮಾಡುತ್ತಿದ್ದಾರೆ. ಕಳೆದ ವಾರ ಪ್ರಾಧಿಕಾರದ ಸಭೆ ನಡೆಸಿ ಭದ್ರಾ ಯೋಜನೆಗೆ ಮೊದಲನೇ ಹಂತದಲ್ಲಿ ರೂ. 50 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸಚಿವ ಸಂಪುಟದ ಖಾತೆ ಹಂಚಿಕೆ ಆದ ಮೇಲೆ ಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನ ತಂದು ಅಭಿವೃದ್ದಿ ಕೆಲಸ ಮಾಡುವ ಭರವಸೆ ವ್ಯಕ್ತಪಡಿಸಿದರು.

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ಯೋಜನೆಯ ಕೊನೆ ಭಾಗದ ರೈತರಿಗೆ ನೀರು ಕೊಡಬೇಕೆಂದು ನನ್ನ ಹಠವಾಗಿದ್ದು ಈ ನಿಟ್ಟಿನಲ್ಲಿ ಕಾರ್ಯಗತಳಾಗಿದ್ದೇನೆ. ರೈತರು ಮತ್ತು ಅಧಿಕಾರಿಗಳ ನಡುವಿನ ಕಂದಕದಿಂದ ಇದು ಸಾಧ್ಯವಾಗುತ್ತಿರಲಿಲ್ಲ. ರೈತರು ಮತ್ತು ಅಧಿಕಾರಿಗಳನ್ನು ಸೇರಿಸುವ ಕೆಲಸ ಮಾಡುತ್ತಿದ್ದೇನೆ. ಭದ್ರಾ ಮೇಲ್ದಂಡೆಗೆ ನೀರು ಕೊಡುವ ಬಗ್ಗೆ ವಿರೋಧವಿಲ್ಲ. ಆದರೆ ನಮ್ಮ ಜಲಾಶಯದ ಪರಿಸ್ಥಿತಿ ಬಗ್ಗೆ ನಾನು ಸಂಸದರಿಗೆ ಹೇಳಲೇಬೇಕು. 15 ಟಿಎಂಸಿ ಭದ್ರಾದಿಂದ 16 ಟಿಎಂಸಿ ತುಂಗಾದಿಂದ ನೀರೆತ್ತಬೇಕೆಂದು ಡಿಪಿಆರ್ ಆಗಿದೆ. ಆದರೆ 29 ಟಿಎಂಸಿ ನೀರನ್ನೂ ತುಂಗಾದಿಂದಲೇ ಲಿಫ್ಟ್ ಮಾಡಿದರೆ ಅನುಕೂಲ ಆಗುತ್ತದೆ. ನಾಲ್ಕು ಮೋಟಾರ್ ಶುರು ಮಾಡಿದರೆ ನಮ್ಮ ರೈತರಿಗೆ ತೊಂದರೆ ಆಗಲಿದೆ. ಆದ ಕಾರಣ ಡಿಪಿಆರ್ ನಲ್ಲಿ 29 ಟಿಎಂಸಿ ನೀರನ್ನು ತುಂಗಾದಿಂದಲೇ ಲಿಫ್ಟ್ ಮಾಡುವಂತೆ ಬದಲಾವಣೆ ಮಾಡಬೇಕೆಂದು ಆಗ್ರಹಿಸಿದರು.

1980 ರಿಂದಲೇ ರೈತ ಚಳವಳಿಯಲ್ಲಿ ಪಾಲ್ಗೊಂಡ ನಾನು ಕುಟುಂಬ, ಮಕ್ಕಳೊಂದಿಗೆ ಕಾಲ ಕಳೆದದ್ದಕ್ಕಿಂತ ಹೆಚ್ಚಾಗಿ ರೈತರೊಂದಿಗೆ ಕಳೆದಿದ್ದೇನೆ. ಯಡಿಯೂರಪ್ಪನವರು ನನಗೆ ಮಾದರಿಯಾಗಿದ್ದು ಈ ಜವಾಬ್ದಾರಿ ನೀಡಿದ್ದಾರೆ. ನಾನು ಪ್ರಾಮಾಣಿಕೆಯಿಂದ ಈ ಜವಾಬ್ದಾರಿ ನಿರ್ವಹಿಸುತ್ತೇನೆ ಹಾಗೂ ಎಂದಿಗೂ ರೈತರಿಗೆ ತೊಂದರೆ ಆಗದಂತೆ ಕೆಲಸ ಮಾಡುತ್ತೇನೆ ಎಂದರು.

ಮಲೆನಾಡು ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪದ್ಮನಾಭ ಭಟ್ ಮಾತನಾಡಿ, ನಮ್ಮ ಸಂಸ್ಕøತಿಯಲ್ಲಿ ನೀರಿಗೆ ತಾಯಿ ಸ್ಥಾನ ನೀಡಿದ್ದು, ಬಾಗಿನ ಅರ್ಪಿಸುವ ಮೂಲಕ ತಾಯಿಯನ್ನು ಭಕ್ತಿಪೂರ್ವಕವಾಗಿ ನಮಿಸುವ ಕೆಲಸ ಇಂದು ಆಗಿದೆ. ಸಾಮಾನ್ಯವಾಗಿ ಆಗಸ್ಟ್ ಕೊನೆಯಲ್ಲಿ ಭದ್ರಾ ಜಲಾಶಯ ತುಂಬುತಿತ್ತು. ಈ ವರ್ಷ ಮಾಹೆಯ ಆರಂಭದಲ್ಲೇ ಜಲಾಶಯ ತುಂಬಿದ್ದು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ರೈತ ಸಂಘದ ಹಿನ್ನೆಲೆಯಿಂದ ಬಂದಿರುವ ಭದ್ರ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ದತ್ತಾತ್ರಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಭದ್ರ ಕಾಡಾ ಸದಸ್ಯರಾದ ಷಡಕ್ಷರಪ್ಪ ನಾಗಸಮುದ್ರ, ಕೆಎಸ್.ರುದ್ರಮೂರ್ತಿ, ಹರಿಹರದ ರಾಜಪ್ಪ, ಹೊನ್ನಾಳಿಯ ಹನುಮಂತಪ್ಪ, ಶಿಕಾರಿಪುರದ ಮಂಜುನಾಥ್, ತರೀಕೆರೆಯ ವಿನಾಯಕ್, ರಾಜ್ಯ ರೈತಮುಖಂಡರು, ಜನಪ್ರತಿನಿಧಿಗಳು, ಕಾಡ ಆಡಳಿತಾಧಿಕಾರಿ ಪ್ರಸಾದ್, ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಅಭಿಯಂತರ ಶಿವಾನಂದ ಬಣಕಾರ್, ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರ ಚಂದ್ರಹಾಸ್ , ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಬಾಗಿಣ ಅರ್ಪಣೆಗೂ ಮುನ್ನ ಅಣೆಕಟ್ಟೆ ಬಳಿಯಲ್ಲಿರುವ ಈಶ್ವರ ದೇವಾಲಯದಲ್ಲಿ ಸಂಸದರು ಹಾಗೂ ಪ್ರಮುಖರು ಪೂಜೆ ಸಲ್ಲಿಸಿ, ಆನಂತರ ಭದ್ರಾ ನದಿಗೆ ಪೂಜೆ ಸಲ್ಲಿಸಿದರು.

ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ 186 ಅಡಿಗಳ ಸಾಮರ್ಥ್ಯದ ಭದ್ರಾ ಜಲಾಶಯದಲ್ಲಿ ಈಗಾಗಲೇ 184 ಅಡಿಗಳಷ್ಟು ನೀರು ಸಂಗ್ರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhadra DamBhadravathiCADAKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಉಕ್ಕಿನನಗರಿಬಿಆರ್’ಪಿ(ಭದ್ರಾವತಿ):ಭದ್ರಾ ಅಚ್ಚುಕಟ್ಟು ಪ್ರಾಧಿಕಾರಭದ್ರಾ ಜಲಾಶಯಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ಖಾತೆ ಹಂಚಿಕೆ: ಸಚಿವ ಈಶ್ವರಪ್ಪ ಹರ್ಷ

Next Post

ಕೋವಿಡ್-19 ಹಿನ್ನೆಲೆ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಾರಾಂತ್ಯ ಪ್ರವೇಶ ನಿರ್ಬಂಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಕೋವಿಡ್-19 ಹಿನ್ನೆಲೆ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಾರಾಂತ್ಯ ಪ್ರವೇಶ ನಿರ್ಬಂಧ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL