ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 22ರಂದು ನಡೆಯಲಿರುವ ಟಿ.ಇ.ಟಿ (ಟೀಚರ್ ಎಲಿಜಿಬಿಲಿಟಿ ಟೆಸ್ಟ್) ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಟಿ.ಇ.ಟಿ ಪರೀಕ್ಷೆ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2697 ಹಾಗೂ ಎರಡನೇ ಅಧಿವೇಶನದಲ್ಲಿ 4628 ಒಟ್ಟು 7325 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 23 ಕೇಂದ್ರಗಳಿಗೆ ಕೇಂದ್ರ ಸ್ಥಾನಿಕ ಜಾಗೃತ ದಳ ಹಾಗೂ 16 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.


ಪರೀಕ್ಷೆ ಸಂದರ್ಭದಲ್ಲಿ ಅವ್ಯವಹಾರಕ್ಕೆ ಅವಕಾಶ ನೀಡಬಾರದು. ಮಾರ್ಗಸೂಚಿ ಪ್ರಕಾರ ವೃತ್ತಿಪರವಾಗಿ ಪರೀಕ್ಷೆ ನಡೆಸಬೇಕು. ಪ್ರಶ್ನೆ ಪತ್ರಿಕೆ ಸ್ವೀಕೃತಿ, ಖಜಾನೆಯಲ್ಲಿ ಠೇವಣಿ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು. 144 ಸೆಕ್ಷನ್ ಘೋಷಿಸುವುದರಿಂದ ಪರೀಕ್ಷಾ ವ್ಯಾಪ್ತಿಯ ಒಳಗೆ ಅಭ್ಯರ್ಥಿಗಳು ಮತ್ತು ಪರೀಕ್ಷೆಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಯಾರನ್ನೂ ಬಿಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟಪಡಿಸಿದರು.


ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ಅಭ್ಯರ್ಥಿಗಳ ಥರ್ಮಲ್ ಸ್ಕ್ರೀನಿಂಗ್, ಕೊಠಡಿಯ ಸ್ಯಾನಿಟೈಸೇಶನ್ ಮಾಡಬೇಕು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಕೋವಿಡ್ ಪೀಡಿತರಿಗೆ ಅಥವಾ ರೋಗ ಲಕ್ಷಣ ಇರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಮುಖ್ಯ ದ್ವಾರದಲ್ಲಿ ಆರೋಗ್ಯ ತಪಾಸಣಾ ಕೌಂಟರ್ ತೆರೆಯಬೇಕು ಎಂದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















