ಕಲ್ಪ ಮೀಡಿಯಾ ಹೌಸ್
ಮಂಗಳೂರು: ಜಪ್ಪು ಮಹಾಕಾಳಿಪಡ್ಪು ಬಳಿ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲು ಢಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೀಡಿ ಕಾರ್ಮಿಕರಾಗಿದ್ದ ವಸಂತಿ (50) ಮತ್ತು ಪ್ರೇಮಾ (48) ಮೃತಪಟ್ಟ ದುರ್ದೈವಿಗಳಾಗಿದ್ದು, ಇವರಿಬ್ಬರು ದಿನನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬ್ರ್ಯಾಂಚ್ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು. ಅದರಂತೆ ಇಂದು ಬೆಳಗ್ಗೆಯೂ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಹಳಿ ದಾಟುತ್ತಿದ್ದ ವೇಳೆ ರೈಲು ಬರುತ್ತಿದ್ದು, ಮಹಿಳೆಯರ ಗಮನಕ್ಕೆ ಬಂದಿರಲಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















