ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಉಷಾ ನರ್ಸಿಂಗ್ ಹೋಂ ನಿಂದ ಮುಖ್ಯ ರೈಲ್ವೇ ನಿಲ್ದಾಣಕ್ಕೆ ಹೋಗುವ ನೂರಡಿ ರಸ್ತೆಯಲ್ಲಿ ಬ್ಲಡ್ ಬ್ಯಾಂಕ್ ಸಮೀಪ ರಸ್ತೆಗಡ್ಡವಾಗಿ ಪೈಪ್ ಲೈನ್ ಕಾಮಗಾರಿ ನಡೆದಿದ್ದು, ಗುಂಡಿಯನ್ನು ಅರೆಬರೆಯಾಗಿ ಮುಚ್ಚಿರುತ್ತಾರೆ. ಮಳೆಯ ಕಾರಣ ಕೆಸರು ಗುಂಡಿಯಾದ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸೇರಿದಂತೆ ಯಾವುದೇ ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರಸ್ತೆ ಸಂಪರ್ಕ ಕಡಿತದ ಬಗ್ಗೆ ಯಾವುದೇ ಸೂಚನಾ ಫಲಕ ಹಾಕದಿರುವುದರಿಂದ ರೈಲ್ವೇ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ರಸ್ತೆ ದುರಸ್ತಿ ಮಾಡಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.
ವರದಿ: ತ್ಯಾಗರಾಜ ಮಿತ್ಯಾಂತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post