ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೇವೆ ಮತ್ತು ಸಮರ್ಪಣೆ ಎಂಬ ಹೆಸರಿನಲ್ಲಿ ಯಾವುದೇ ದುಂದು ವೆಚ್ಚ ಮಾಡದೇ ಇಂದು ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನಮ್ಮ ಸರ್ಕಾರ ಮಾಡಿದ ವಿವಿಧ ಯೋಜನೆಯನ್ನು ನಮ್ಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು ನಮ್ಮ ಗುರಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣ ವತಿಯಿಂದ ನಡೆದ ಇನ್ಫೋಗ್ರಾಫಿಕ್ ಮತ್ತು ಜಿಲ್ಲೆಯ ಪಲಾನುಭವಿಗಳ ವಿಡಿಯೋ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮೋದಿಜೀ ಯವರ ಯೋಜನೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಯಶಸ್ವಿಯಾಗಿ ಪ್ರಚಾರ ಮಾಡೋಣ ಎಂದು ತಿಳಿಸಿದರು.
ವಿಶ್ವ ನಾಯಕ ನರೇಂದ್ರ ಮೋದಿಜೀ ಮತ್ತು ನಮ್ಮ ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ದೇಶದೆಲ್ಲೆಡೆ ದಾಪುಗಾಲು ಇಟ್ಟು ಸಾಗುತ್ತಿದೆ. ತಾವು ಮೊದಲ ಬಾರಿಗೆ ಸಂಸದರಾಗಿದ್ದ ಸಂದರ್ಭದಲ್ಲಿ ಒಂದು ಕೊರಗಿತ್ತು. ಆಗ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಆದರೆ ನಮ್ಮ ಪಕ್ಷದ ನೇತೃತ್ವದಲ್ಲಿ ನಮ್ಮ ನಾಯಕರು ಪ್ರಧಾನಿ ಆಗಬೇಕು ಎಂಬ ಆಸೆ ಇತ್ತು. ಇಂದು ಅದು ನೆರವೇರಿದೆ. ವಿಶ್ವದ ಯಾವುದೇ ದೇಶಕ್ಕೆ ಹೋದರು ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ ಎಂದರೆ ಅದು ಅವರು ಪಡೆದ ಜನಮನ್ನಣೆಗೆ ಸಾಕ್ಷಿ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ಹಿರಿಯರಾದ ಭಾನುಪ್ರಕಾಶ್, ಮೋಹನಪ್ಪ ಬಂಡಾರಿ, ಸುನೀತಾ ಅಣ್ಣಪ್ಪ, ಸಿದ್ಧರಾಮಣ್ಣ, ಜಿಲ್ಲಾ ಸಾಮಾಜಿಕ ತಾಣದ ಮುಖ್ಯಸ್ಥ ಶರತ್ ಕಲ್ಯಾಣಿ, ದಿನೇಶ್ ಆಚಾರ್ಯ ಮತ್ತು ಪಕ್ಷದ ಕಾರ್ಯಕರ್ತರು ಮತ್ತಿತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post