No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಮೋದಿ ಮೋದಿ ಮೋದಿ ಮೋಡಿ..

ನಮ್ಮ ಹೆಮ್ಮೆಯ ಪ್ರಧಾನಿಯವರ ಬಗೆಗಿನ ಕೆಲವು ವಿಶೇಷ ಅಂಶಗಳು

kalpa News by kalpa News
March 17, 2022
in ಸಚಿನ್ ಪಾರ್ಶ್ವನಾಥ್
0
ನಮೋ ಬಗ್ಗೆ ಹೇಳಲು ರಾಶಿ ರಾಶಿ ಇದೆ.
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಇಂದು ಮೋದಿಜಿಯವರ ಜನುಮ ದಿನ. ಹೀರಾ ಬೆನ್ ತಾಯಿಗೆ ಶರಣು ತಾಯಿ. ನೀವು ಭಾರತಕ್ಕೆ ಬೆಳಕನ್ನು ನೀಡಿದಿರಿ. ದಾಮೋದರದಾಸ್ ಮೂಲಚಂದ್ ಮೋದಿ ಮತ್ತು ಹೀರಾ ಬೆನ್ ಅವರ ಆರು ಮಕ್ಕಳಲ್ಲಿ ಮೂರನೆಯವರು ನರೇಂದ್ರ ಮೋದಿ.

ನಮೋ ಬಗ್ಗೆ ಹೇಳಲು ರಾಶಿ ರಾಶಿ ಇದೆ. ಆದರೆ ಅವರೊಂದು ತೆರೆದಿಟ್ಟ ಅಪರೂಪದ ಪುಸ್ತಕ. ಅವರ ಬಗ್ಗೆ ಎಲ್ಲರಿಗೂ ಗೊತ್ತು. ಹಾಗಾಗಿ ಗೊತ್ತಿಲ್ಲದೆ ಇರುವುದನ್ನು ತಿಳಿಸೋಣ ಎಂಬುದು ಪುಟ್ಟ ಆಸೆ. ಭಾರತದ ಹೃದಯವಾಗಿ ನಿಂತು ಎಡೆ ಬಿಡದೇ ಒಂದು ದಿನದ ರಜೆಯನ್ನೂ ಪಡೆಯದೆ ಸೇವೆ ಸಲ್ಲಿಸಿದವರು ಅವರು. 2014 ರಂದು ಸಂಸತ್ತಿಗೆ ತಲೆ ಬಾಗಿ ನಮಸ್ಕರಿಸಿ ಅಡಿಯಿಟ್ಟ ಕ್ಷಣದಿಂದ ಈ ಗಳಿಗೆಯ ತನಕವೂ ಅವರು ದೇಶಕ್ಕಾಗಿ ದುಡಿಯುತ್ತಲೇ ಇದ್ದಾರೆ.
ದೇವರು ಆ ಕಲಾವಿದನ ಕೈಯಲ್ಲಿ ಏನು ಕೊಟ್ಟಿದ್ದಾನೋ ಗೊತ್ತಿಲ್ಲ, ಮೋದಿಜಿಯ ಮೋಡಿಗೆ ಸಿಲುಕಿದ ವರುಷಗಳು ಇವು. ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ಗಡಿಗಳ ಮೀರಿ ಯಾವ ಹಂತದ ತನಕ ತಲುಪಬಲ್ಲ ಎಂಬುದಕ್ಕೆ ಅವರು ಸಾಕ್ಷಿ. ಮತ್ತು ಅದೇ ಪ್ರಜಾಪ್ರಭುತ್ವದ ಚೆಲುವು. ಜನರು ನೆನಪು ಮಾಡಿಕೊಳ್ಳುತ್ತಾರೆ ಅಂದರೆ ಭಾರತವನ್ನು ನೆನಪು ಮಾಡಿಕೊಳ್ಳಲಿ; ಮೋದಿಯನ್ನಲ್ಲ ಎಂದ ವಿಶಾಲ ಹೃದಯಿ ಅವರು. ಸರಿ ಸುಮಾರು ಒಂದೂವರೆ ದಶಕ ಮುಖ್ಯಮಂತ್ರಿ, ಏಳು ಎಂಟು ವರ್ಷಗಳಿಂದ ಪ್ರಧಾನಮಂತ್ರಿ ಹುದ್ದೆಯಲ್ಲಿ ಆಡಳಿತ ನಡೆಸಿದರೂ ಅವರ ಹೆಸರಿನ ಒಂದು ಮನೆಯನ್ನೂ ಕಟ್ಟದ ಪ್ರಧಾನ ಸೇವಕ. ಇತ್ತೀಚೆಗೆ ಕ್ರಿಕೆಟ್ ಮಂಡಳಿ ಒಂದು ಅವರ ಹೆಸರಿನ ಕ್ರೀಡಾಂಗಣ ನಿರ್ಮಿಸಿದೆ ಅಂತ ದೊಡ್ಡ ಸುದ್ದಿ ಆಗಿತ್ತು. ವಿಷಯ ಏನೆಂದರೆ ಗುಜರಾತ್ ಕ್ರಿಕೆಟ್ ಸಂಸ್ಥೆ ಒಂದು ಖಾಸಗಿ ಸಂಸ್ಥೆ. ತನ್ನ ಸುಪರ್ದಿಯ ಒಂದು ಅಂಗಣದ ದುರಸ್ತಿ ಕಾರ್ಯ ನಡೆಸಿ, ಅದರ ಒಂದು ಭಾಗಕ್ಕೆ ಅವರ ಹೆಸರು ಇಟ್ಟಿದ್ದು ಬಿಟ್ಟರೆ, ಯಾವುದೇ ಸರ್ಕಾರಿ ಕಟ್ಟಡ ಅಥವಾ ಯೋಜನೆಗೆ ಅವರ ಅಥವಾ ಅವರ ಕುಟುಂಬದವರ ಹೆಸರು ಇಟ್ಟಿರುವ ಉದಾಹರಣೆ ಅವರ ರಾಜಕೀಯ ಜೀವನದಲ್ಲೇ ಇಲ್ಲ.

ನರೇಂದ್ರ ಮೋದಿಯವರು,

  • ಅವರು ಅಧಿಕಾರ ವಹಿಸಿಕೊಂಡಾಗ ಅವರ ತಾಯಿ ಜೀವಂತವಾಗಿದ್ದ ಭಾರತದ ಮೊದಲ ಪ್ರಧಾನಿ
  • ಅವರು ಸತತ ಮೂರು ಬಾರಿ ಗುಜರಾತ್ ಸಿಎಂ ಹುದ್ದೆಯಲ್ಲಿದ್ದರು
  • ಮೊದಲ ಬಾರಿಗೆ ಶಾಸಕರಾಗಿ ಅವರು ಗುಜರಾತಿನ ಸಿಎಂ ಆದರು ಮತ್ತು ಮೊದಲ ಬಾರಿಗೆ ಸಂಸದರಾಗಿ ಭಾರತದ ಪ್ರಧಾನಿಯಾದರು
  • ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಎರಡನೇ ಅವಧಿಗೆ ಆಯ್ಕೆಯಾದ ಮೊದಲ ಬಿಜೆಪಿ ನಾಯಕ

ದೇಶದ ಸೈನಿಕರ ಶವಗಳನ್ನು ಕತ್ತರಿಸಿ ಕಳಿಸಿದಾಗ ಹೋಗಿ ಅಮೇರಿಕಾದ, ವಿಶ್ವಸಂಸ್ಥೆಯ ಬಾಗಿಲು ತಟ್ಟಿ ಬಂದ ಪ್ರಧಾನಿಯು ನಮ್ಮಲ್ಲಿದ್ದರು. ಜಿಡಿಪಿ ಶೇಕಡಾ 5ಕ್ಕೆ ಇಳಿದಾಗ ಹಣಕಾಸು ಸಚಿವರಾಗಿ, ವಿಶ್ವ ಮಟ್ಟದಲ್ಲಿ ಹಣಕಾಸು ತಜ್ಞರೇ ಆಗಿದ್ದ ಪ್ರಧಾನಮಂತ್ರಿ ಮತ್ತು ಅವರ ಸಚಿವಾಲಯ ಐದು ಪರ್ಸೆಂಟ್ ಎಂಬುದು ಒಳ್ಳೆಯ ಸ್ಥಿತಿ ಎಂದಿದ್ದರು. ಅದು ಬಿಡಿ, ಅದ್ಯಾವ ಗಳಿಗೆಯಲ್ಲಿ ತತ್ವಜ್ಞಾನಿ ನಾಸ್ಟ್ರೋಡಮಸ್ ಆ ಮಾತುಗಳನ್ನು ಹೇಳಿದರೋ ಗೊತ್ತಿಲ್ಲ, ಅವರ ಮಾತುಗಳು ಅಕ್ಷರಶಃ ಸತ್ಯವಾದವು “ಇಪ್ಪತ್ತೊಂದನೆಯ ಶತಮಾನದಲ್ಲಿ ಭಾರತವನ್ನು ಪರ್ಯಾಯ ದ್ವೀಪದಂತಹ ಪ್ರದೇಶದಿಂದ ಬಂದ ರಾಜ ಆಗುತ್ತಾನೆ. ಆಗ ಭಾರತ ವಿಶ್ವ ಮಟ್ಟದಲ್ಲಿ ಕಂಗೊಳಿಸಲಿದೆ” ಎಂದಿದ್ದರು. ಆ ಮಾತುಗಳಿಗೆ ಮನಸ್ಸು ಕೊಟ್ಟರೇನೋ ಎಂಬಂತೆ ಪ್ಯಾರೇ ದೇಶವಾಸಿಗಳು ತಮ್ಮ ದೇಶವನ್ನು ಒಂದಲ್ಲ ಎರಡು ಬಾರಿ ಕೊಟ್ಟರು. ಆ ಕ್ಷಣದಿಂದ ಹಿಡಿದು ಇಲ್ಲಿಯ ತನಕ ಆ ರಾಜ ಭಾರತ ತಲೆ ತಗ್ಗಿಸಲು ಅವಕಾಶ ನೀಡಲೇ ಇಲ್ಲ. ಪಾಕಿಸ್ತಾನವು ಇಲ್ಲ ನಮಗೆ ಭಾರತದ ದಾಳಿಯ ಭಯ ಇದೆ ಎಂಬಲ್ಲಿಂದ ಹಿಡಿದು, ಹಳ್ಳಿಯ ಅಜ್ಜಿ ತನ್ನ ಕುರಿ, ಕರು ಮಾರಿ ಶೌಚಾಲಯ ಕಟ್ಟುವ ತನಕ, ವಿಶ್ವ ಸ್ನೇಹಿತರ ದಿನದಂದು ಇಸ್ರೇಲ್ ದೇಶವು ಭಾರತ ನನ್ನ ಜೀವದ ಗೆಳೆಯ ಎನ್ನುವಲ್ಲಿಂದ ಹಿಡಿದು, ಶ್ರೀಲಂಕಾ, ಬಾಂಗ್ಲಾ, ಅಮೇರಿಕ ಅಲ್ಲದೆ ಅರಬ್ ದೇಶಗಳು ಸಹ ಕಾಶ್ಮೀರ ಭಾರತದ ಅಂತರಿಕ ವಿಷಯ ಎನ್ನುವ ತನಕ ಎಲ್ಲವನ್ನೂ ಮೋದಿಯವರೇ ಮಾಡಿದ್ದು ಎನ್ನಲು ಹೆಮ್ಮೆಯಾಗುತ್ತದೆ. ಯಾವ ಕ್ಷಣದಲ್ಲಿ ರಾಜನಾಥ್ ಸಿಂಗ್ ತಡ ಮಾಡದೆ ನಮೋರವರಿಗೆ ದೆಹಲಿಯ ಗದ್ದುಗೆಯನ್ನು ನೀಡಿದರೋ ಅವರು ನಿಜಕ್ಕೂ ದೊಡ್ಡ ಉಪಕಾರ ಮಾಡಿದರು ಎನ್ನಬಹುದು.

ಅದು 2014 ರ ಸೆಪ್ಟೆಂಬರ್ ತಿಂಗಳು. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ನಲ್ಲಿ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಮಾತನಾಡಿದ್ದು ಎಂಬುದು ಒಂದು ವಿಶೇಷ. “ಇಂದು ಅಹಮದಾಬಾದಿನಿಂದ ಒಂದು ಕಿಲೋ ಮೀಟರ್ ದೂರ ಆಟೋದಲ್ಲಿ ತೆರಳಲು ಹತ್ತು ರೂಪಾಯಿ ಬೇಕು. ಆದರೆ ನಾವು ಭಾರತೀಯರು 65615 ಮಿಲಿಯನ್ ಕಿಲೋ ಮೀಟರ್ ಮಂಗಳನ ಯಾತ್ರೆ ಮಾಡಿದೆವು. ಅದು ಸ್ವದೇಶಿ ನಿರ್ಮಿತ ಸಾಮಗ್ರಿಗಳನ್ನು ಬಳಸಿ. ವಿಶೇಷ ಏನು ಗೊತ್ತಾ ಅದು ಕೇವಲ ಏಳು ರೂಪಾಯಿ ಪ್ರತಿ ಕಿ.ಮೀ.ಗೆ. ಅದು ಭಾರತೀಯರ ತಾಕತ್ತು. ಮೊದಲ ಪ್ರಯತ್ನದಲ್ಲೇ ಮಂಗಳ ತಲುಪಿದ ಮೊದಲಿಗರು ನಾವು, ಅದು ಹಾಲಿವುಡ್‌ನ ಒಂದು ಚಿತ್ರದ ಬಜೆಟ್ಟಿಗಿಂತ ಕಡಿಮೆ ವೆಚ್ಚದಲ್ಲಿ.” ಹೀಗೆ ನಮ್ಮ ಪ್ರಧಾನಿಯೊಬ್ಬರು ವಿದೇಶಕ್ಕೆ ಹೋಗಿ ನಮ್ಮ ದೇಶವನ್ನು ಹೊಗಳಿದ್ದು ಉಂಟೆ? ನೆರೆದ ಅನಿವಾಸಿ ಭಾರತೀಯರಲ್ಲಿ ರೋಮಾಂಚನವಾದ ಅನುಭವ. ಮಂಗಳಯಾನದ ಸಂದರ್ಭಕ್ಕೆ ಮೋದಿಜಿಯವರನ್ನು ಕರೆಯುವಾಗ ಇಸ್ರೋ ವಿಜ್ಞಾನಿಗಳು, ಇದು ತಮ್ಮ ಮೊದಲ ಪ್ರಯತ್ನ. ನಿಮ್ಮನ್ನು ಕರೆಯಬೇಕೋ ಬೇಡವೋ ತಿಳಿಯುತ್ತಿಲ್ಲ ಎಂದಿದ್ದರು. ಆದರೆ ಮೋದಿಜಿಯವರು ತಾನು ಬರುತ್ತೇನೆ. ಗೆಲುವಿನ ಶ್ರೇಯ ಎಲ್ಲರಿಗೂ ಸಲ್ಲಲಿ. ಆದರೆ ಸೋತರೆ ಅದರ ಜವಾಬ್ದಾರಿಯನ್ನು ತಾ ಹೊರುತ್ತೇನೆ ಎಂದು ಹೇಳಿದಾಗ ಇಡೀ ಇಸ್ರೋ ಕರತಾಡನದಲ್ಲಿ ಮುಳುಗಿ ಹೋಗಿತ್ತು.
ಇಸ್ರೋ ಅಧ್ಯಕ್ಷ ಕೆ ಸಿವನ್, “ಪ್ರಧಾನಿ ನಮಗೆ ಸ್ಫೂರ್ತಿ ಮತ್ತು ಅಭಯದ ಚಿಲುಮೆ. ಅವರ ಮಾತುಗಳು ನಮ್ಮಲ್ಲಿ ಹೊಸ ಉತ್ಸಾಹ ತುಂಬುತ್ತವೆ. ಅದರಲ್ಲೂ ಅವರ ಭಾಷಣದಲ್ಲಿ ಗಮನಿಸಿದ ಅಂಶವೆಂದರೆ ‘ವಿಜ್ಞಾನವನ್ನು ಎಂದಿಗೂ ಫಲಿತಾಂಶಗಳಿಂದ ನೋಡಬಾರದು, ಅದನ್ನು ಪ್ರಯೋಗಗಳಿಂದಷ್ಟೇ ನೋಡಬೇಕು. ಅವು ನಮ್ಮನ್ನು ಫಲಿತಾಂಶದ ಕಡೆಗೆ ಒಯ್ಯುತ್ತವೆ’ ಎನ್ನುವುದು.”

ಮೊದಲ ಬಾರಿಗೆ ಚೀನೀ ವೈರಸ್ ಬಂದಾಗ ಕರ್ನಾಟಕದಷ್ಟು ಜನಸಂಖ್ಯೆ ಹೊಂದಿದ್ದ ಇಟಲಿ ಅಂತಹ ದೇಶಗಳೇ ನಡುಗಿಹೋದವು. ಆದರೆ ಭಾರತ 140 ಕೋಟಿಯಷ್ಟು ಜನಸಂಖ್ಯೆಯುಳ್ಳ ದೇಶ, ಕಿಂಚಿತ್ ಅಲುಗದೆ ಅಂತೆಯೇ ಇದೆ. ಅದರ ಹಿಂದೆ ಮೋದಿಜಿಯವರ ದೂರದೃಷ್ಟಿ ಮತ್ತು ಕಾಳಜಿ ಇದ್ದೇ ಇದೆ. ನಾವೇ ವಿಜ್ಞಾನ ಎನ್ನುತ್ತಿದ್ದ ಎಷ್ಟೋ ದೇಶಗಳು, ಅದರ ಮುಖ್ಯಸ್ಥರು ಕೈ ಚೆಲ್ಲಿ ಸಾರ್ವಜನಿಕವಾಗಿ ಆಗಲ್ಲ ಎನ್ನುತಿದ್ದಾಗ ಭಾರತದ ಪ್ರಧಾನಿ ಔಷಧಗಳ ರಫ್ತಿಗೆ ತಯ್ಯಾರಿ ನಡೆಸುತ್ತಿದ್ದರು. ಇಂತಹ ವೇಗ ಹಿಂದೆಂದೂ ಕಂಡಿರಲಿಲ್ಲ.

ಒಮ್ಮೊಮ್ಮೆ ಅನಿಸುತ್ತದೆ ಮೋದಿಯವರು ಯಾಕಾದರೂ ಇಷ್ಟು ತಡವಾಗಿ ಪ್ರಧಾನಿ ಆದರೋ ಎಂದು. ವಿದೇಶ ಪರದೇಶಗಳನ್ನು ಬುಟ್ಟಿ ತುಂಬಿ ತಂದ, ಕರ್ಮಾಚಾರಿಯ ಪಾದ ತೊಳೆದ, ಕೆಂಪು ಕೋಟೆಯ ಮೇಲಿಂದ ಶೌಚಾಲಯ ಕಟ್ಟಲು ಕರೆ ಕೊಟ್ಟ, ಬಗಲ ವೈರಿಯ ಬುಡದಲ್ಲಿ ಭಯ ಹುಟ್ಟಿಸಿ ವೀರ ಯೋಧನ ಹೋದಂತೆಯೇ ಕರೆ ತಂದ, ಕಾಶ್ಮೀರದ ಬಾಗಿಲನ್ನು ತೆರೆದ ನಾಯಕನನ್ನು ಬರಿ ಗುಜರಾತ್ ದೊಡ್ಡ ಪಾಲು ಇಟ್ಟುಕೊಂಡಿತ್ತಲ್ಲ ಎಂದು ಅಸೂಸೆಯೂ ಆಗುತ್ತದೆ. ವಿಜ್ಞಾನ ಎಂದರೆ ಸೈನ್ಸ್ ಎಂದರ್ಥವಲ್ಲ. ಅದು ವಿಶೇಷವಾದ ಜ್ಞಾನ. ಪುರಾಣಗಳ ಕಾಲದಿಂದಲೂ ಭಾರತೀಯರು ಗಣಿತ, ವೈದ್ಯಕೀಯ, ಸಾಹಿತ್ಯ, ಬಾಹ್ಯಾಕಾಶ, ವೈಮಾನಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ವಿಶೇಷವಾದ ಸಿದ್ಧಿ ಪಡೆದಿದ್ದಾರೆ. ಅದಕ್ಕೊಂದು ಆಲಿಂಗಿಸುವ ಶಕ್ತಿ ಬೇಕಿತ್ತು. ಆ ಶಕ್ತಿ ಸರಿ ಸುಮಾರು ಏಳೆಂಟು ವರ್ಷಗಳಿಂದ ಭಾರತವನ್ನು ಕಾಯುತ್ತಿದೆ.

ಮತ್ತೆ ಬಂದಿದೆ ಕೋರೋನ,
ಬನ್ನಿ ಉಳಿಸೋಣ ಭಾರತವನ್ನ,
ಅಂದೂ ಗೆದ್ದಿದೆವು, ಇಂದು ಗೆಲ್ಲುವೆವು,
ಯಾಕೆಂದರೆ ನಂಬಿರುವುದು ಚೌಕಿದಾರನನ್ನ..

ಹುಟ್ಟು ಹಬ್ಬದ ಹಾರ್ದಿಕ ಶುಭಾಷಯಗಳು ನರೇಂದ್ರ ಮೋದಿಜೀ. ನನ್ನ ಆಯಸ್ಸು ನಿಮಗೆ ಇರಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaPM ModiPrime Minister of IndiaSachin Parshwanathನರೇಂದ್ರ ಮೋದಿಪ್ರಧಾನಮಂತ್ರಿಪ್ರಧಾನಿ ನರೇಂದ್ರ ಮೋದಿಮಂಗಳಯಾನಸಚಿನ್ ಪಾರ್ಶ್ವನಾಥ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಫ್‌ಪಿಓಗಳ ಅಭಿವೃದ್ಧಿ ಮತ್ತು ಬಲವರ್ಧನೆಗೆ ಪ್ರಯತ್ನ: ಸಚಿವ ಬಿ.ಸಿ. ಪಾಟೀಲ್

Next Post

ಗಮನಿಸಿ! ಸೆ.19ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಸೆ.19ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL