ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 2019ನೇ ಸಾಲಿನ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಅಕ್ಟೋಬರ್ 3ರಂದು ಸಂಜೆ 5 ಗಂಟೆಗೆ ನಗರದ ಕಂಟ್ರಿಕ್ಲಬ್ ಆವರಣದಲ್ಲಿ ಆಯೋಜನೆಗೊಳ್ಳಲಿರುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸಾಕ್ಷಿ ಪ್ರಜ್ಞೆಯಂತೆ ಬದುಕಿದ ಪಾಟೀಲ ಪುಟ್ಟಪ್ಪನವರ ಸವಿ ನೆನಪಿನಲ್ಲಿ ಕೊಡಮಾಡುವ ಪಾಟೀಲ್ ಪುಟ್ಟಪ್ಪ ದತ್ತಿ ಪ್ರಶಸ್ತಿ’ಗೆ ಭಾಜನರಾದ ಹಿರಿಯ ಮಾಧ್ಯಮ ತಜ್ಞ ಎಸ್. ಕೆ. ಶೇಷಚಂದ್ರಿಕ (ಶೇಷಣ್ಣ)ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.


ಪ್ರಶಸ್ತಿ ಪುರಸ್ಕೃತರಿಗೆ ಕಲ್ಪ ಮೀಡಿಯ ಹೌಸ್ ಹಾರ್ದಿಕ ಅಭಿನಂದನೆಗಳನ್ನುಅರ್ಪಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















