No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅ.8ರಂದು ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕಾರ್ಯಕ್ರಮ ಉದ್ಘಾಟನೆ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2021
in ಶಿವಮೊಗ್ಗ
0
ನಾಳೆ ಪತ್ರಿಕಾ ದಿನಾಚರಣೆ: ಆಯುಷ್ ಕಿಟ್, ಮಾಸ್ಕ್, ಗುರುತಿನ ಚೀಟಿ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಅ.8ರ ಶುಕ್ರವಾರ ಸಂಜೆ 5:30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಕಂಟ್ರಿಕ್ಲಬ್ ಆವರಣದಲ್ಲಿ ಆಯೋಜಿಸಲಾಗಿತ್ತಾದರೂ, ಮಳೆಯ ಅನಿಶ್ಚಿತತೆಯ ಕಾರಣದಿಂದ ಕುವೆಂಪು ರಂಗಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದರು.


ಇದುವರೆಗೂ ಈ ಎಲ್ಲ ಪ್ರಶಸ್ತಿಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಸಮ್ಮೇಳನಗಳಲ್ಲಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳನ್ನು ಇನ್ನಷ್ಟು ಘನತೆಯಿಂದ ವಿತರಿಸಬೇಕೆಂಬ ಉದ್ದೇಶದಿಂದ ಪ್ರತ್ಯೇಕವಾಗಿ ನಡೆಸಲು ತೀರ್ಮಾನಿಸಿದ ಪರಿಣಾಮ ಮೊದಲ ಬಾರಿಗೆ ಮಲೆನಾಡಿನ ಹೆಬ್ಬಾಗಿಲು, ಪತ್ರಿಕೋದ್ಯಮಕ್ಕೆ ತನ್ನದೇ ಆದ ಪ್ರತಿಭೆಗಳನ್ನು ಕೊಡಮಾಡಿರುವ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗೆಯಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸರೆಯಾಗಿ ನಿಂತ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ‘ಸಿಹಿಮೊಗೆ ಮಾಧ್ಯಮ’ ಹೆಸರಿನ ವಿಶೇಷ ಸ್ಮರಣ ಸಂಚಿಕೆಯನ್ನು ಸಂಸದ ಬಿ.ವೈ ರಾಘವೇಂದ್ರ ಬಿಡುಗಡೆ ಮಾಡಲಿದ್ದಾರೆ. ಶಿವಮೊಗ್ಗೆಯ ಪತ್ರಿಕಾ ಛಾಯಾಗ್ರಾಹಕರ ಸಹಭಾಗಿತ್ವದಲ್ಲಿ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯನುಡಿಗಳನ್ನಾಡಲಿದ್ದಾರೆ ಎಂದರು.

ಮುಖ್ಯಅತಿಥಿಗಳಾಗಿ, ಶಾಸಕ ಬಿ.ಕೆ.ಸಂಗಮೇಶ್ವರ, ಕೆ.ಬಿ. ಅಶೋಕ ನಾಯ್ಕ, ಕುಮಾರ್ ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್, ಮಹಾಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಎಸ್. ಯಡಗೆರೆ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ. ವಿ. ಮಲ್ಲಿಕಾರ್ಜುನಯ್ಯ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ವಿಭಾಗದ ಸಂಚಾಲಕ ಹೆಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಟೆಲೆಕ್ಸ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಹಿಂದೂಸ್ಥಾನಿ ಗಾಯಕ ಉಸ್ತಾದ್ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನಗಾಯನ ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ, ನಗರ ಕಾರ್ಯದರ್ಶಿ ವಿ. ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರು:
ಡಿವಿಜಿ ಪ್ರಶಸ್ತಿ: ರವಿ ಹೆಗಡೆ, ಸಂಪಾದಕರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್, ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ ಹನೀಫ್, ಪ್ರಜಾವಾಣಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್.ಎನ್.ಅಶೋಕಕುಮಾರ್, ಸಂಪಾದಕರು, ಗೊಮ್ಮಟವಾಣಿ, ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು, ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು, ಪಿ.ಆರ್. ರಾಮಯ್ಯಪ್ರಶಸ್ತಿ: ಯು.ಎಸ್. ಶೆಣೈ, ಸಂಪಾದಕರು, ಕುಂದಪ್ರಭ, ಗರುಡನಗಿರಿ ನಾಗರಾಜ್ ಪ್ರಶಸ್ತಿ ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ ಮಂದಾರ, ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ : ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು, ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ.ರೇಖಾ, ಸಂಪಾದಕರು, ಹೊಸಪೇಟೆ ಟೈಮ್ಸ್, ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ, ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ, ಪ್ರಜಾವಾಣಿ, ಹುಬ್ಬಳ್ಳಿ, ಎಂ. ನಾಗೇಂದ್ರರಾವ್ ಪ್ರಶಸ್ತಿ : ಎನ್. ಡಿ. ಶಾಂತಕುಮಾರ್ ವಿಜಯವಾಣಿ, ಶಿವಮೊಗ್ಗ, ಮಿಂಚು ಶ್ರೀನಿವಾಸ್ ಪ್ರಶಸ್ತಿ: ರಾಮಸ್ವಾಮಿ ಹುಲಕೋಡು, ವಿಜಯ ಕರ್ನಾಟಕ, ಎಸ್.ಹೆಚ್. ರಂಗಸ್ವಾಮಿ ಪ್ರಶಸ್ತಿ : ಪಿ.ಸುನೀಲ್‌ಕುಮಾರ್ ಸಂಪಾದಕರು ‘ಸಿಟಿ ಹೈಲೈಟ್ಸ್’ ಬೆಂಗಳೂರು, ಸಂಘದ ವಿಶೇಷ ಪ್ರಶಸ್ತಿಗಳು: ಪ್ರಹ್ಲಾದಗುಡಿ, ವರದಿಗಾರರು, ಕನ್ನಡ ಪ್ರಭ, ರಾಯಚೂರು, ಮುನಿವೆಂಕಟೇಗೌಡ, ಹಿರಿಯ ಪತ್ರಕರ್ತರು ಕೋಲಾರ, ಎಂ.ಕೆ. ರಾಘವೇಂದ್ರ ಮೇಗರವಳ್ಳಿ. ‘ವಿಜಯಕರ್ನಾಟಕ’ ತೀರ್ಥಹಳ್ಳಿ, ಪ್ರಕಾಶ್ ರಾಮಜೋಗಿಹಳ್ಳಿ, ವಾರ್ತಾಭಾರತಿ, ಬೆಂಗಳೂರು.
ಸಂವಾದ:
ಇದೇ ಸಂದರ್ಭದಲ್ಲಿ ಪತ್ರಿಕಾ ಭವನದಲ್ಲಿ ಬೆಳಿಗ್ಗೆ ೧೧ಗಂಟೆಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಯಲಿದ್ದು, ಹಿರಿಯ ಪತ್ರಕರ್ತ ನಾ. ರ. ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್. ಚಂದ್ರಕಾಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ರವಿ ಹೆಗಡೆ, ಬಿ. ಎಂ. ಹನೀ-, ರಶ್ಮಿ, ಎನ್. ಡಿ. ಶಾಂತಕುಮಾರ್‌ರವರು ವಿಷಯ ಮಂಡನೆ ಮಾಡಲಿದ್ದಾರೆ. ಸಂಘದ ಗ್ರಾಮಾಂತರ ಉಪಾಧ್ಯಕ್ಷರಾದ ಮೋಹನ ಶೆಟ್ಟಿ ಮುನ್ನೂರುರವರು ಸಂವಾದವನ್ನು ನಿರ್ವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaKannada NewsKannada News LiveKannada News OnlineKannada News WebsiteKannada WebsiteKarnataka Working Journalists AssociationLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿರಾಜ್ಯಕಾರ್ಯನಿರತ ಪತ್ರಕರ್ತರ ಸಂಘಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅ.8ರಂದು ವಿ. ಮನೋಹರ್‌ ಅವರಿಂದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ…

Next Post

ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL