No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

`ಬೆಳಕಿನ ಬೆಡಗಿನ : ದೀಪಾವಳಿ’

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
Deepawali

Deepawali

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | |

ನಾವು ಭಾರತೀಯರು `ತಮಸೋಮಾ ಜ್ಯೋತಿರ್ಗಮಯ’ ಸಂಸ್ಕೃತಿಯ ಹರಿಕಾರರು. ಕತ್ತಲೆಯನ್ನು ಕೂಡ ಕೈ ಹಿಡಿದು ಬೆಳಕಿನತ್ತ ಕೊಂಡೊಯ್ಯುವ ಪ್ರಯತ್ನ ಮಾಡಿದ ದಿವ್ಯ-ಭವ್ಯ ಸಂಸ್ಕೃತಿ ನಮ್ಮದು.

ಸದ್ಯ ಕಾರ್ತೀಕ ಮಾಸದ ಆದಿ ಮತ್ತು ಆಶ್ವೀಜ ಮಾಸದ ಅಂತ್ಯೆವೆಂಬೀ `ಕೂಡಲ ಸಂಗಮ’ ದಲ್ಲಿದ್ದೇವೆ ನಾವೆಲ್ಲ ಇದೀಗ ಹಬ್ಬಗಳ `ರಾಜ’ವೆಂಬ `ಕೀರ್ತಿಕೀರೀಟ’ವನ್ನು ತನ್ನ ತಲೆಯ ಮೇಲಿಸಿಸಿಕೊಂಡಿರುವ ದೀಪಾವಳಿಯ `ಶ್ರೀ ಸಾನಿಧ್ಯದಲ್ಲಿದ್ದೇವೆ.


ದೀಪಾವಳಿ ಹಬ್ಬದ ಇನ್ನೊಂದು ವಿಶೇಷತೆ ಏನೆಂದರೆ ಇದು ಬರೀ ಹಿಂದೂಗಳಿಗೆ ಮಾತ್ರ ಸೀಮಿತವಾಗಿಲ್ಲ ಹಬ್ಬವಿದು `ಹಿಂದೂ ಮೀಸಲಾತಿ’ಯಿಂದ ಹೊರಬಂದು ಜೈನ ಧರ್ಮೀಯರು ಹಾಗೂ ಸಿಖ್ ಧರ್ಮೀಯರೊಂದಿಗೆ ತನ್ನನ್ನು ಗುರುತಿಸಿಕೊಂಡಿದೆ. ಇದು ಸಕಲ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀಯ ಜನ್ಮದಿನ ಅಂತೆಯೇ ಅವಳ ವಿವಾಹ ವಾರ್ಷಿಕೋತ್ಸವವೂ ಹೌದು. ಈ ಪರ್ವಕಾಲದಲ್ಲೇ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮಾ ಸಾರಥ್ಯದಲ್ಲಿ `ಲೋಕಕಂಟಕ’ನಾದ ನರಕಾಸುರನನ್ನು ಸಂಹರಿಸುತ್ತಾನೆ. ಮತ್ತೊಂದು ಕಥಾನಕದ ಪ್ರಕಾರ ನರಕಾಸುರನ ಭೂದೇವಿಯ ಮಗ. ನಾವು ಜನ್ಮಕೊಟ್ಟ ಮಕ್ಕಳು ಸಮಾಜಘಾತುಕರು, ಲೋಕಕಂಟಕರೂ ಮತ್ತು ಉಗ್ರಗಾಮಿಗಳಾಬಾರದು ಆದರೆ ಹೆತ್ತವರು ಅವರನ್ನು ಸಹಿಸಿಕೊಳ್ಳಬಾರದು. ಅವರನ್ನು ಕೊಚ್ಚಿಹಾಕಬೇಕು. ಮಮತೆಯ ನೆಪದಲ್ಲಿ ಸಮಾಜಘಾತುಕ ಶಕ್ತಿಗಳನ್ನು ಪೋಷಿಸಿಕೊಂಡಿರಬಾರದು ಎಂಬ ಸಂದೇಶವನ್ನು ಸತ್ಯಭಾಮೆಯ `ಮಾತೃ-ಜಗತ್ತಿಗೆ’ ರವಾನಿಸಿದ್ದಾಳೆ.


ವಿಷ್ಣು `ವಾಮನಾವತಾರ’ದಲ್ಲಿ ಒಂದು ಬಲಿಯ ತಲೆಯನ್ನು ತುಳಿದು ಅವನನ್ನು `ಕೀರ್ತಿಶೇಷನನ್ನಾಗಿ’ ಮಾಡಿ `ಬಲಿದಾನ’ `ಬಲಿಪಶು’ ಎಂಬ ಪದಗಳಿಗೆ `ಹಿನ್ನಲೆ’ಯಾದ ದಿನವಿದು. ರಾಮನು ಹದಿನಾಲ್ಕು ವರ್ಷಗಳ ವನವಾಸವನ್ನು ಪೊರೈಸಿಕೊಂಡು ರಾವಣನನ್ನು ಸಂಹರಿಸಿ `ಸೀತಾಸಮೇತ’ನಾಗಿ ದೀಪಾವಳಿಯ ಪರ್ವದಿನದಂದು ಅಯೋಧ್ಯೆಗೆ ಮರಳಿ ಬರುತ್ತಾನೆ.

ಆಚರಣೆಯ ಪೌರಾಣಿಕ ಹಿನ್ನೆಲೆ :
ಆಶ್ವಯುಜ ಮಾಸದ ಕೊನೆಯಲ್ಲಿ ಮತ್ತು ಕಾರ್ತೀಕ ಮಾಸದ ಆರಂಭದಲ್ಲಿ ಹೀಗೆ ಒಟ್ಟು ಐದು ದಿನಗಳ ಅವಧಿಯ ಹಬ್ಬವಾದ ದೀಪಾವಳಿಗೆ, ಶ್ರೀಕೃಷ್ಣನು ನರಕಾಸುರನನ್ನು ಸಂಹರಿಸಿದ ದಿನದ ಆಚರಣೆಗೆ ಚಾಲನೆ ಸಿಗುತ್ತದೆ. ಹಬ್ಬದ ಮೊದಲ ದಿನವನ್ನು `ಧನತ್ರಯೋದಶಿ’ ಎಂದೂ ಕರೆಯಲಾಗುತ್ತದೆ.


ಹಿಮರಾಜನ 16 ವರ್ಷದ ಮಗನು ತನ್ನ ಜಾತಕದ ಪ್ರಕಾರ ಮದುವೆಯಾದ ನಾಲ್ಕೇ ದಿನಗಳಲ್ಲಿ ಹಾವು ಕಡಿತದಿಂದ ಮೃತನಾಗುವನೆಂದು ಹೇಳಲಾಗಿತ್ತು. ಮದುವೆಯ ನಾಲ್ಕನೆಯ ರಾತ್ರಿಯಂದು ಆತನ ನವವಧುವು ಅಂತಃಪುರವನ್ನೆಲ್ಲ ದೀಪ ಹಚ್ಚಿ ಬೆಳಗಿದಳು. ತನ್ನ ಒಡವೆ, ಧನ ಸಂಪತ್ತನ್ನು ರಾಶಿ ಹಾಕಿ ಪೂಜಿಸಿ ಭಗವಂತನ ಸಂಕೀರ್ತನೆಯನ್ನು ಮಾಡುತ್ತಾ ನರ್ತಿಸತೊಡಗಿದಳು. ರಾತ್ರಿಯಲ್ಲಿ ಅಲ್ಲಿಗೆ ಸರ್ಪರೂಪದಲ್ಲಿ ಬಂದು ಯಮದೇವನಿಗೆ ದೀಪದ ಝಗಮಗಿಸುವ ಬೆಳಕಿನಲ್ಲಿ ಕಣ್ಣು ಕುಕ್ಕಿದಂತಾಯಿತು. ಸರ್ಪವು ಚಿನ್ನಾಭರಣಗಳ ರಾಶಿಯ ಮೇಲೆ ಹತ್ತಿ ಕುಳಿತು, ನವವಧುವಿನ ಮಧುರ ಗೀತೆಗಳನ್ನು ಆಲಿಸುತ್ತ ಮುಂಜಾನೆ ಹೊರಟು ಹೋಯಿತು. ಹೀಗೆ ಪತ್ನಿಯು ತನ್ನ ಪತಿಯಾದ ರಾಜಕುಮಾರನ ಜೀವನನ್ನು ಕಾಪಾಡಿದ ದಿನವೆಂಬ ಹಿನ್ನೆಲೆಯಲ್ಲಿ ಈ ದಿನವನ್ನು `ಯಮದೀಪದಾನ’ ದಿನವೆಂದು ಆಚರಿಸುತ್ತಾರೆ.

ಇನ್ನೊಂದು ಉಲ್ಲೇಖದ ಪ್ರಕಾರ ಕರೋಪನಿಷತ್ತಿನ ಬಾಲಕ ನಾಯಕ `ನಚಿಕೇತ’ನಿಗೆ ಆತ್ಮ ಸಾಕ್ಷಾತ್ಕಾರವಾದ ದಿನವೂ ಇದೇ.
ಲಕ್ಷ್ಮೀ ಪಂಚಾಯತನ ಪೂಜೆಯನ್ನು ಅಮಾವಾಸ್ಯೆಯ ದಿನ ನಡೆಸಲಾಗುತ್ತದೆ ಲಕ್ಷ್ಮೀ ಪಂಚಾಯತನ ಪೂಜೆ ಎಂದರೆ ವಿಷ್ಣು (ಆನಂದ ಅಧಿಪತಿ), ಕುಬೇರ (ಸಂಪತ್ತಿನ ಅಧಿಪತಿ) ಇಂದ್ರ (ಸಂತೃಪ್ತಿಯ ಅಧಿಪತಿ) ಗಜೇಂದ್ರ (ಸಂಪತ್ತಿನ ವಾಹನ) ಹಾಗ ಲಕ್ಷ್ಮೀದೇವಿ (ಸರ್ವಶಕ್ತಿ ಸಂಪತ್ತಿನ ಸ್ವರೂಪಿಣಿ) ಲಕ್ಷ್ಮೀ ಐಶ್ವರ್ಯದ ಅಧಿದೇವತೆ ಮಾತ್ರವಲ್ಲ. ನಮ್ಮ ಜೀವನ ಲೌಕಿಕ, ಪಾರಮಾಥಿಕ ಗುರಿ ಸಾಧನೆಗೂ ಈಕೆಯ ಕೃಪೆ ಅತ್ಯಗತ್ಯವಾಗಿದೆ.

ದೀಪಾವಳಿಯಂದೇ ಹಸ್ತಿನಾಪುರಕ್ಕೆ ಕುಂತಿಸಮೇತವಾಗಿ ಪಾಂಡವಪುತ್ರರು ಮತ್ತು ದ್ರೌಪದಿಯು 12 ವರ್ಷಗಳ ಕಾಲದ ವನವಾಸ ಮತ್ತು 1 ವರ್ಷದ ಅಜ್ಞಾತವಾಸವನ್ನು ಪೂರೈಸಿ ಬಂದ ದಿನ.

ಇಂದ್ರನ ಕೋಪಕ್ಕೆ ತುತ್ತಾಗಿ ಕಂಗೆಟ್ಟ ಗೋಕುಲದ ಗೋಪ-ಗೋಪಿಕೆಯರನ್ನು ಕೃಷ್ಣ `ಗೋವರ್ಧನ ಗಿರಿ’ಯನ್ನು ಎತ್ತಿ ಹಿಡಿದು ಶುಭದಿನ. ಭಾರತದ ಕೀರ್ತಿಯನ್ನು `ಐತಿಹಾಸಿಕ’ ಗೊಳಿಸಿದ ರಾಜಾವಿಕ್ರಮಾದಿತ್ಯನ ಪಟ್ಟಾಭಿಷೇಕದ ದಿನವದು. ಜೈನಧರ್ಮದ 24ನೇ ತೀರ್ಥಂಕರರಾದ ವರ್ಧಮಾನ ಮಹಾವೀರರು ಮಹಾ ನಿರ್ವಾಣಗೈದ ಪಾವನ ದಿನವದು. ದೀಪಾವಳಿಯ ಶುಭ ಘಳಿಗೆಯಲ್ಲೇ 1577ರಲ್ಲಿ ಸದ್ಯ ಅಮೃತ ಸರದಲ್ಲಿರುವ ಸುವರ್ಣ ಮಂದಿರ’ವನ್ನು ಕಟ್ಟುವುದಕ್ಕೆ `ಭೂಮಿ ಪೂಜೆ’ ಮಾಡಲಾಯಿತು. ಆರ್ಯ ಸಮಾಜದ ಸಂಸ್ಥಾಪಕರಾದ ಶ್ರೀ ದಯಾನಂದ ಸರಸ್ವತಿಯವರು `ದಿವ್ಯಜ್ಞಾನ’ವನ್ನು ಪಡೆಯುವ ಮೂಲಕ `ಮಹರ್ಷಿ ದಯಾನಂದ’ರಾದರು.

ನಮ್ಮ ಪ್ರಾಚೀನರು ಹಿಂದಿನ ಕಾಲದಲ್ಲಿ ಆರ್ಕೆಟಿಕ್ ಪ್ರದೇಶದಲ್ಲಿ ನೆಲೆ ನಿಂತಿದ್ದರಂತೆ. ಈ ಧೃವ ಪ್ರದೇಶದಲ್ಲಿ ವರ್ಷದ ಆರು ತಿಂಗಳ ಕಾಲ ಮಾತ್ರ ಬೆಳಕಿದ್ದು, ಇನ್ನುಳಿದ ಆರು ತಿಂಗಳು ಕಾಲ ಕತ್ತಲೆಯೇ ತುಂಬಿರುತ್ತದೆ.

ಸೂರ್‍ಯನು ಮೇಷ ಸಂಕ್ರಾಂತಿಯಂದು ಪ್ರಕಟವಾಗುತ್ತಾನೆ. ಹಾಗು ತುಲಾ ಸಂಕ್ರಾಂತಿಯಂದು ಮರೆಯಾಗುತ್ತಾನೆ. ಕಾರ್ತಿಕ ಚತುದರ್ಶಿಯಂದು ಆರಂಭವಾಗುವ ಅಯನವನ್ನು `ಕೌಮುದೀ’ಎಂದೂ ಕರೆಯುತ್ತಾರೆ. ಈ ಸಮಯದಲ್ಲಿ ಅಲ್ಲಿ ನಿತ್ಯವೂ ದೀಪವನ್ನು ಬೆಳಗುತ್ತಿದ್ದರೂ ಇದನ್ನು `ನಿತ್ಯಜ್ಯೋತಿ’ ಎಂದು ಪೂಜಿಸುತ್ತಿದ್ದರು. ಹೀಗೆ ದೀಪಾವಳಿ ಆಚರಣೆ ಜಾರಿಗೆ ಬಂತು ಎಂಬ ಪ್ರತೀತಿಯೂ ಇದೆ.

ಡಾ. ಗುರುರಾಜ ಪೋಶೆಟ್ಟಿಹಳ್ಳಿ (ಪ್ರಣವ) ಸಂಸ್ಕೃತಿ ಚಿಂತಕರು 9739369621 ಇ-ಮೇಲ್ : padmapranava@yahoo.com

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DeepavaliDr Gururaj PoshettihalliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri KrishnaSpecial Article about Deepavaliದೀಪಾವಳಿಶ್ರೀಕೃಷ್ಣ
Share197Tweet123Send
Previous Post

ಸಹ್ಯಾದ್ರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ದೀಪಾವಳಿ ಆಚರಣೆ

Next Post

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL