No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ಯಾಂಡಲ್’ವುಡ್ ಹಿರಿಯ ನಟ ಶಿವರಾಂ ವಿಧಿವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 4, 2021
in ಬೆಂಗಳೂರು ನಗರ
0
ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ತಮ್ಮ ನಿವಾಸದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ವೇಳೆ ಕುಸಿದು ಬಿದ್ದು, ಪ್ರಜ್ಞಾಹೀನರಾಗಿದ್ದರು. ಆನಂತರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ದರೂ, ನಿನ್ನೆ ರಾತ್ರಿಯಿಂದ ಕೋಮಾ ಸ್ಥಿತಿಯಲ್ಲಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

1938ರಲ್ಲಿ ಜನಿಸಿದ ಎಸ್. ಶಿವರಾಮ್ (ಜನನ 1938) ಅವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳಿಂದ ಪೋಷಕನಟನಾಗಿ, ಹಾಸ್ಯನಟನಾಗಿ ನಟಿಸಿ ಉತ್ತಮ ನಟನೆಂದು ಪ್ರಸಿದ್ಧರಾಗಿದ್ದರು. ಇವರು ಕೇವಲ ನಟನೇ ಅಲ್ಲದೆ ನಿರ್ದೇಶಕನಾಗಿ, ನಿರ್ಮಾಪಕನಾಗಿ ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ.

ತನ್ನ ಸಹೋದರ ಎಸ್. ರಾಮನಾಥನ್ ಅವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು. ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ. ಇವರು ನಟನಾಗಿ ಹಲವಾರು ದಿಗ್ಗಜರೊಂದಿಗೆ ಅದರಲ್ಲೂ ಮುಖ್ಯವಾಗಿ ಪುಟ್ಟಣ್ಣ ಕಣಗಾಲ್ರಂಥವರೊಂದಿಗೆ ಕೆಲಸ ಮಾಡಿದ್ದಾರೆ. ಇವರನ್ನು ಕನ್ನಡ ಚಿತ್ರರಂಗದಲ್ಲಿ ಶಿವರಾಮಣ್ಣ ಎಂದೇ ಪ್ರೀತಿಯಿಂದ ಕರೆಯಲಾಗುತ್ತದೆ.

ಶಿವರಾಮ ಅವರು ಮದ್ರಾಸ್ ಪ್ರಾಂತದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿನ ಚೂಡಸಂದ್ರ ಹಳ್ಳಿಯಲ್ಲಿ ಒಂದು ಮಧ್ಯಮ ವರ್ಗ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ, ತಮ್ಮ ಸೋದರನ ಜೊತೆಗೆ ನಗರದ ಬೆಂಗಳೂರಿಗೆ ತೆರಳಿದರು. ಗುಬ್ಬಿ ವೀರಣ್ಣ ಅವರ ನಾಟಕ ಪ್ರದರ್ಶನಗಳ ಪ್ರಭಾವಕ್ಕೆ ಒಳಗಾಗಿ, ಶಿವರಾಮರು ಚಿತ್ರ ತಯಾರಿಕೆ ಮತ್ತು ನಟನೆಯತ್ತ ಆಸಕ್ತಿ ತಳೆದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.

1958ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಕು. ರಾ. ಸೀತಾರಾಮಶಾಸ್ತ್ರಿ ಯವರಂತಹ ವಿವಿಧ ನಿರ್ದೇಶಕರಿಗೆ ಸಹಾಯಕರಾಗಿ ಕೆಲಸ ಮಾಡಲು ಆರಂಭಿಸಿದರು. ಅವರು ಅನುಭವಿ ಛಾಯಾಗ್ರಾಹಕ ಬೊಮನ್ ಡಿ ಇರಾನಿ ಅವರಿಗೆ ಕ್ಯಾಮರಾ ಸಹಾಯಕರಾಗಿಯೂ ಕೆಲಸ ಮಾಡಿದರು. ಶಿವರಾಮ ಮೊದಲ ಬಾರಿ ಬೆಳ್ಳಿ ಪರದೆಯ ಮೇಲೆ 1965ರಲ್ಲಿ ಕು. ರಾ. ಸೀತಾರಾಮಶಾಸ್ತ್ರಿ ಅವರ ನಿರ್ದೇಶನದ ಮತ್ತು ಸಹನಿರ್ಮಾಣದ ಬೆರೆತ ಜೀವ ಚಿತ್ರದಲ್ಲಿ ನಟನಾಗಿ ಕಾಣಿಸಿಕೊಂಡರು.

ಅಲ್ಲದೇ, ಕೆಎಸ್’ಎಲ್ ಸ್ವಾಮಿ, ಗೀತಪ್ರಿಯ, ಸಿಂಗೀತಂ ಶ್ರೀನಿವಾಸರಾವ್ ಮತ್ತು ಪುಟ್ಟಣ್ಣ ಕಣಗಾಲ್ ರಂತಹ ಹಲವಾರು ಪ್ರಮುಖ ನಿರ್ದೇಶಕರಿಗೆ ಸಹಾಯಕರಾಗಿದ್ದರು.

1958 ರಿಂದ 1965 ರವರೆಗೆ ಸಹಾಯಕ ನಿರ್ದೇಶಕರಾಗಿ ದುಡಿದ ನಂತರ, ಅವರಿಗೆ ಕಲ್ಯಾಣ್ ಕುಮಾರ್ ನಟಿಸಿದ ಕು.ರಾ. ಸೀತಾರಾಮಶಾಸ್ತ್ರಿ ಅವರ ಬೆರೆತ ಜೀವ ಚಿತ್ರದಲ್ಲಿ ಪೋಷಕ ಪಾತ್ರದ ಮೂಲಕ ನಟನೆಗೆ ಬ್ರೇಕ್ ಸಿಕ್ಕಿತು. ಆಗಿನಿಂದ ಅವರು 2000 ದ ದಶಕದವರೆಗೆ ಹೆಚ್ಚೂ ಕಡಿಮೆ ಎಲ್ಲಾ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಿದರು. ಚರಿತ್ರ ನಟರಾಗಿ ಅವರ ಅವಿಸ್ಮರಣೀಯ ಅಭಿನಯ ದ ಚಿತ್ರಗಳಲ್ಲಿ ಶರಪಂಜರ, ನಾಗರಹಾವು, ಶುಭಮಂಗಳ ಸೇರಿವೆ. ಇವೆಲ್ಲವೂ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಚಿತ್ರಗಳು.

ಚಲಿಸುವ ಮೋಡಗಳು, ಶ್ರಾವಣ ಬಂತು, ಹಾಲು ಜೇನು, ಹೊಂಬಿಸಿಲು, ಹೊಸ ಬೆಳಕು, ಗುರು ಶಿಷ್ಯರು, ಸಿಂಹದಮರಿ ಸೈನ್ಯ, ಮಕ್ಕಳ ಸೈನ್ಯ ಇಂಥ ಅನೇಕ ಚಲನಚಿತ್ರಗಳಲ್ಲಿ ಅವರ ಹಾಸ್ಯ ಪಾತ್ರಗಳು ಜನರ ಮೆಚ್ಚುಗೆ ಪಡೆದವು. ಡ್ರೈವರ್ ಹನುಮಂತು (1980) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

2000 ರ ನಂತರ ವರ್ಷಗಳಲ್ಲಿ ಅವರು ಬರ ಮತ್ತು ತಾಯಿ ಸಾಹೇಬ ದಂತಹ ಸಮಾನಾಂತರ ಚಿತ್ರಗಳಲ್ಲೂ ಎಂದು ಆಪ್ತಮಿತ್ರ, ಹುಚ್ಚದಂತಹ ಪ್ರಮುಖ ಯಶಸ್ವಿ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು. ಅವರು ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಗೃಹಭಂಗ ಟೆಲಿವಿಷನ್ ಧಾರಾವಾಹಿಯಲ್ಲೂ ಮತ್ತು ರವಿಕಿರಣ್ ನಿರ್ದೇಶಿಸಿದ ಬದುಕು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

ತಮ್ಮ ಸಹೋದರ ಎಸ್. ರಾಮನಾಥನ್ ಜತೆಗೂಡಿ ರಾಶಿ ಬ್ರದರ್ಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ ಮತ್ತು ಗೆಜ್ಜೆಪೂಜೆ (1970), ಉಪಾಸನೆ(1974), ನಾನೊಬ್ಬ ಕಳ್ಳ (1979), ಡ್ರೈವರ್ ಹನುಮಂತು(೧೯೮೦) ಮತ್ತು ಬಹಳ ಚೆನ್ನಾಗಿದೆ (2001) ಗಳಂತಹ ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor ShivaramBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadasandalwoodState Newsನಟ ಶಿವರಾಂಬೆಂಗಳೂರುಸ್ಯಾಂಡಲ್’ವುಡ್
Share197Tweet123Send
Previous Post

ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯೇ ಶಿಕ್ಷಣದ ಸಾರ್ಥಕತೆ: ನಾಗರಾಜ ಅಭಿಪ್ರಾಯ

Next Post

ಪೂಜೆ ಮಾಡುತ್ತಾ ಸಾವಿಗೆ ಶರಣು: ನಟ ಶಿವರಾಂ ನಿಧನಕ್ಕೆ ಜಗ್ಗೇಶ್ ಕಂಬನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೂಜೆ ಮಾಡುತ್ತಾ ಸಾವಿಗೆ ಶರಣು: ನಟ ಶಿವರಾಂ ನಿಧನಕ್ಕೆ ಜಗ್ಗೇಶ್ ಕಂಬನಿ

ಪೂಜೆ ಮಾಡುತ್ತಾ ಸಾವಿಗೆ ಶರಣು: ನಟ ಶಿವರಾಂ ನಿಧನಕ್ಕೆ ಜಗ್ಗೇಶ್ ಕಂಬನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
ಜೆಎನ್ಎನ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಏ.6ರಿಂದ ಐದು ದಿನ ಎಐಸಿಟಿಇ ಬೂಟ್‌ ಕ್ಯಾಂಪ್‌

ಜೆಎನ್ಎನ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಏ.6ರಿಂದ ಐದು ದಿನ ಎಐಸಿಟಿಇ ಬೂಟ್‌ ಕ್ಯಾಂಪ್‌

April 4, 2026
ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ | ರಾಜ್ಯ ಸರ್ಕಾರದ ಕ್ರಮ ಖಂಡನೀಯ: ಜಿಲ್ಲಾಧ್ಯಕ್ಷ ಜಗದೀಶ್

ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ | ರಾಜ್ಯ ಸರ್ಕಾರದ ಕ್ರಮ ಖಂಡನೀಯ: ಜಿಲ್ಲಾಧ್ಯಕ್ಷ ಜಗದೀಶ್

April 4, 2026
ವ್ಹೀಲಿಂಗ್ ಮಾಡಿದವರ ಮೇಲೆ ಪ್ರಕರಣ ದಾಖಲು

ವ್ಹೀಲಿಂಗ್ ಮಾಡಿದವರ ಮೇಲೆ ಪ್ರಕರಣ ದಾಖಲು

April 4, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL