Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಬೆಳಗಾವಿ ಅಧಿವೇಶನದಲ್ಲಿ ಸಮಸ್ಯೆಗಳಿಗೆ ದಿಟ್ಟ ಕ್ರಮ ತೆಗೆದುಕೊಳ್ಳುವಂತೆ ಎಎಪಿ ಆಗ್ರಹ

December 11, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅದಿವೇಶನದಲ್ಲಿ ರೈತರ ಅತ್ಯಂತ ಅಗತ್ಯವಾಗಿರುವ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು. ಹಾಗೂ ಬೆಳೆ ಹಾನಿ, ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿ, ಕಬ್ಬು ಬೆಳೆಗಾರರಿಗೆ ಬಾಕಿ ಸೇರಿದಂತೆ ಸಾರ್ವಜನಿಕರ ಹಲವು ಸಮಸ್ಯೆಗಳ ಕುರಿತು ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಆಗ್ರಹಿಸಿದೆ.

ಬೆಳೆ ಪರಿಹಾರ:

ಜಿಲ್ಲಾಡಳಿತಗಳ ಅಧಿಕೃತ ವರದಿ ಪ್ರಕಾರ, 2021ರಲ್ಲಿ ರಾಜ್ಯಾದ್ಯಂತ 7.89 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 6,207 ಕೋಟಿ ರೂಪಾಯಿ ಮೊತ್ತದ ಆಹಾರ ಬೆಳೆ, 1.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 1,348 ಕೋಟಿ ರೂಪಾಯಿ ಮೊತ್ತದ ತೋಟಗಾರಿಕೆ ಬೆಳೆ ಹಾಗೂ 74,530 ಹೆಕ್ಟೇರ್‌ ಪ್ರದೇಶದಲ್ಲಿ 1,401 ಕೋಟಿ ರೂಪಾಯಿ ಮೊತ್ತದ ವಾಣಿಜ್ಯ ಬೆಳೆ ಮಳೆಯಿಂದ ನಾಶವಾಗಿದೆ. ಸರ್ಕಾರದ ಅವೈಜ್ಞಾನಿಕ ಮಾನದಂಡಗಳಿಂದಾಗಿ ಅನೇಕ ಸಂತ್ರಸ್ತ ರೈತರು ಪರಿಹಾರದಿಂದ ವಂಚಿತರಾಗುತ್ತಿದ್ದಾರೆ. ಕೊಯ್ಲು ಮಾಡಿದ ನಂತರ ಮಳೆಯಿಂದ ಹಾನಿಗೊಂಡ ಬೆಳೆಯನ್ನು ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. 2015ರಲ್ಲಿ ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನಿಗದಿಯಾದ ಪರಿಹಾರ ಮೊತ್ತವನ್ನೇ ಈಗಲೂ ನೀಡಲಾಗುತ್ತಿದೆ. ದೆಹಲಿ ಸರ್ಕಾರವು ಹೆಕ್ಟೇರ್‌ಗೆ 50,000 ರೂ. ಪರಿಹಾರ ನೀಡಿದರೆ, ಕರ್ನಾಟಕ ಸರ್ಕಾರವು ಕೇವಲ 6,800 ರೂಪಾಯಿಯಿಂದ 13,500ರವರೆಗೆ ಪರಿಹಾರ ನೀಡುತ್ತಿದೆ ಇದರ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ:

ಶಿವಮೊಗ್ಗ ಜಿಲ್ಲೆ ಸೇರಿದಂತೆ 2021ರಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 20,083 ಮನೆಗಳು ಹಾನಿಗೊಳಗಾಗಿವೆ. ಈ ಪೈಕಿ 7,795 ಮನೆಗಳು ಸಂಪೂರ್ಣ ಹಾನಿಯಾಗಿವೆ. 2019ರಲ್ಲಿ ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದಿಂದ ಹಾನಿಗೊಂಡ ಮನೆಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದನ್ನು ನಂಬಿಕೊಂಡು ಮನೆ ಕಟ್ಟಲು ಆರಂಭಿದ ಸಂತ್ರಸ್ತರಿಗೆ ಕೇವಲ ಒಂದು ಲಕ್ಷ ಪರಿಹಾರ ದೊರೆತಿದೆ. ಮನೆ ನಿರ್ಮಾಣ ಅರ್ಧಕ್ಕೆ ಸ್ಥಗಿತಗೊಂಡಿದ್ದರಿಂದ ಶೆಡ್‌ಗಳಲ್ಲಿ ವಾಸವಾಗಿರಬೇಕಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಬಾಕಿ:
ಕಳೆದ ವರ್ಷ 600 ಕೋಟಿ ರೂ. ಸೇರಿದಂತೆ ಕಬ್ಬು ಬೆಳೆಗಾರರಿಗೆ ಒಟ್ಟು 2,500 ಕೋಟಿ ರೂಪಾಯಿಯನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ.  ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿಡಿತದಲ್ಲಿದೆ. ಆದ್ದರಿಂದಲೇ ರೈತರಿಗೆ ಹಣ ದೊರಕಿಸಿಕೊಡಲು ನಿರ್ಲಕ್ಷ್ಯ ತೋರುತ್ತಿದೆ. ಬಾಕಿಯಿರುವ ಎಲ್ಲ ಮೊತ್ತವನ್ನು ಶೇ. 15 ಬಡ್ಡಿಯೊಂದಿಗೆ ತಕ್ಷಣವೇ ಪಾವತಿ ಮಾಡುವಂತೆ ರಾಜ್ಯ ಸರ್ಕಾರವು ಕಾರ್ಖಾನೆಗಳಿಗೆ ಆದೇಶಿಸಬೇಕು ಎಂದು ಕೋರಿದ್ದಾರೆ.

ರಸ್ತೆ ಕಾಮಗಾರಿ ಖರ್ಚುವೆಚ್ಚಗಳ ಪರಿಶೀಲನೆ:
ಶಿವಮೊಗ್ಗ ಜಿಲ್ಲೆ ಹಾಗು ಇತರೆ ತಾಲ್ಲೂಕ್ ಸೇರಿದಂತೆ ಬೆಂಗಳೂರು ಸೇರಿ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,000 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿಯವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.  ಅಷ್ಟು ಹಣ ಖರ್ಚು ಮಾಡಿದ ನಂತರವೂ ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳ ತುಂಬಾ ಗುಂಡಿಗಳಿವೆ. ಗುಂಡಿಗಳಿಗೆ ಹಾಕಲಾಗಿದ್ದ ತೇಪೆಯು ಸಣ್ಣ ಮಳೆಗೆ ಕಿತ್ತುಹೋಗಿದೆ. ವಾಹನ ಸವಾರರು ಕೈಕಾಲು ಮುರಿದುಕೊಳ್ಳುತ್ತಿದ್ದಾರೆ. ಕೆಲವರ ಪ್ರಾಣವೇ ಹೋಗಿದೆ. ಆ ಬೃಹತ್‌ ಮೊತ್ತವು ಯಾರ ಜೇಬು ಸೇರಿದೆ. ಯಾವ್ಯಾವ ಸಚಿವರು, ಶಾಸಕರು, ಅಧಿಕಾರಿಗಳ ಪಾಲೆಷ್ಟು ಎಂಬುದು ಜನರಿಗೆ ತಿಳಿಯಬೇಕು. ರಸ್ತೆ ಕಾಮಗಾರಿ ಕುರಿತು ಖರ್ಚುವೆಚ್ಚಗಳ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳಿದ್ದಾರೆ.

ಗುತ್ತಿಗೆ ಕಾಮಗಾರಿಗಳ ಮೊತ್ತದಲ್ಲಿ ಶೇ. 40ರಷ್ಟು  ಅಕ್ರಮವಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣರವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಸಚಿವರಿಗೆ ಶೇ. 5ರಷ್ಟು. ಸಂಸದರಿಗೆ ಶೇ.2ರಷ್ಟು, ಸ್ಥಳೀಯ ಜನಪ್ರತಿನಿಧಿಗಳಿಗೆ ಶೇ.10ರಷ್ಟು, ಬಿಲ್‌ ಪಾವತಿಸುವ ಅಧಿಕಾರಿಗಳಿಗೆ ಶೇ.6ಷ್ಟು ಹೀಗೆ ಶೇ. 40ರಷ್ಟು ಹಣವು ಲೂಟಿ ಆಗುತ್ತಿರುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತನಿಖೆಗೆ ಆದೇಶಿಸಿದ್ದಾರೆ. ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಅವರ ನೇತೃತ್ವದಲ್ಲೇ ತನಿಖೆ ನಡೆದರೆ ಸತ್ಯ ಹೊರಬರುವುದಿಲ್ಲ. ಇದೊಂದು ಗಂಭೀರ ವಿಚಾರವಾಗಿದ್ದು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರು ಗಳಿಂದ ನ್ಯಾಯಾಂಗ ತನಿಖೆಯಾಗಬೇಕು. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರದಲ್ಲಿ ನಡೆದ ಗುತ್ತಿಗೆಗಳ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಮಹಿಳೆಯರ ರಕ್ಷಣೆಯಲ್ಲಿ ಗೃಹ ಇಲಾಖೆ ವೈಫಲ್ಯ:
ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. ಅಂದರೆ ಪ್ರತಿದಿನ ಒಂದಕ್ಕಿಂತ ಹೆಚ್ಚು ಮಹಿಳೆಯರ ಮೇಲೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದಾರೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ. ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಈ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

79 A ಮತ್ತು B ಕಾಯ್ದೆಯನ್ನು ಪುನರ್ ಸ್ಥಾಪಿಸುವುದು:
ಕೊರೋನಾ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಸುಗ್ರೀವಾಜ್ಞೆ ಮೂಲಕ ಭೂ ಪರಿಮಿತಿ ಕಾಯ್ದೆಯ 79 A ಮತ್ತು B ತಿದ್ದುಪಡಿ ಮಾಡಿ ಈ ಅಕ್ರಮ ಕಪ್ಪುಹಣದಿಂದ ಖರೀದಿಸಿರುವ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಭೂಸಂಪತ್ತನ್ನು ಸಕ್ರಮಗೊಳಿಸಿರುವ ಪರಿ ನಿಜಕ್ಕೂ ಖೇದಕರ. ಈ ಕೂಡಲೇ ಸುಗ್ರೀವಾಜ್ಞೆಯನ್ನು ಹಿಂಪಡೆದುಕೊಂಡು ನ್ಯಾಯಾಲಯಗಳಲ್ಲಿ ಅಂತಿಮ ಹಂತದಲ್ಲಿರುವ ಈ ಎಲ್ಲಾ ದಾವೆಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಡೆದುಕೊಳ್ಳುವುದು.

ಕೊರೋನಾ ಸಂದರ್ಭದಲ್ಲಿನ ಔಷಧಿ ಮತ್ತು ಉಪಕರಣಗಳ ಖರೀದಿ ಹಗರಣಗಳ ಸದನ ಸಮಿತಿಯ ವರದಿಯನ್ನು ಮಂಡಿಸಿ ಸದನದಲ್ಲಿ ಚರ್ಚೆ ಮಾಡಲೇಬೇಕು.

ಎ ಪಿ ಎಂ ಸಿ ಕಾಯ್ದೆಗೆ ತಿದ್ದುಪಡಿ ರದ್ದತಿ:
ಕಾಳಸಂತೆ ಕೋರರಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಶೈತ್ಯ ಗೃಹಗಳನ್ನು ನಿರ್ಮಿಸಲು ಮೀಸಲಿಟ್ಟಿರುವ 50 % ಸ್ಥಳಾವಕಾಶದ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು.ಈ ಮೂಲಕ ಕೃಷಿ ಉತ್ಪನ್ನಗಳನ್ನು ಸರ್ಕಾರಿ ಜಾಗದಲ್ಲಿ ಸಂಗ್ರಹಿಸಿಟ್ಟುಕೊಂಡು ಬೆಲೆ ಏರಿಸುವ ಕಾಳಸಂತೆಕೋರರ ಸಂಚನ್ನು ತಡೆಗಟ್ಟಬೇಕು.

ಬಹಳ ಮುಖ್ಯವಾಗಿ ಭದ್ರಾವತಿಯಲ್ಲಿ ಇರುವ ಮೈಸೂರು ಕಾಗದ ಕಾರ್ಖಾನೆ ತಕ್ಷಣ ಪ್ರಾರಂಭಿಸಿ ಸ್ಥಳೀಯ ಯುವಕರಿಗೆ ಕನಿಷ್ಠ ಶೇ. 70ರಷ್ಟು ಉದ್ಯೋಗ ಮೀಸಲಾತಿ ಮಾಡಬೇಕು.

ಈ ಎಲ್ಲಾ ಪ್ರಮುಖ ಅಂಶಗಳನ್ನು ಚಳಿಗಾಲದ ಅಧಿವೇಶನದಲ್ಲಿ ಸರಕಾರವು ಮಂಡಿಸಿ ಸದಸ್ಯರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಶಿವಮೊಗ್ಗ ಆಮ್ಆದ್ಮಿಪಕ್ಷ  ಆಗ್ರಹಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AAPBhadravathiKannada NewsKannada News LiveKannada News OnlineKannada News WebisteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಆಮ್ ಆದ್ಮಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಚಿವ ಈಶ್ವರಪ್ಪ ಭರವಸೆ

Next Post

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸದಸ್ಯತ್ವ ನೋಂದಣಿ ಮೂಲಕ ಕಾಂಗ್ರೆಸ್ ಪಕ್ಷ ಬಲಪಡಿಸಿ: ಶಾಸಕ ರಘುಮೂರ್ತಿ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!