No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ: ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಮತ್ತೊಂದು ಗರಿ

ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಸಂಸದ ರಾಘವೇಂದ್ರ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 22, 2021
in ಶಿವಮೊಗ್ಗ
0
ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ: ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಮತ್ತೊಂದು ಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ಆಯುರ್ವೇದ, ಯುನಾನಿ, ಯೋಗ, ಸಿದ್ದ, ಹೋಮಿಯೋಪತಿಯನ್ನೊಳಗೊಂಡ ಆಯುಷ್ ವಿಶ್ವವಿದ್ಯಾಲಯ ಶಿವಮೊಗ್ಗದ ಸೋಗಾನೆ ಗ್ರಾಮದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ಆರಂಭಿಕ ವೆಚ್ಚವಾಗಿ ಸರ್ಕಾರ ರೂ. 20 ಕೋಟಿ ಅನುದಾನ ಬಿಡುಗಡೆ ಮಾಡಿರುವುದನ್ನು ಸ್ವಾಗತಿಸಿರುವ ಸಂಸದ ಬಿ.ವೈ.ರಾಘವೇಂದ್ರ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಸಚಿವ ಸಂಪುಟದ ಸಚಿವರಿಗೆ, ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿವಮೊಗ್ಗ ಜಿಲ್ಲೆಗೆ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಕೃಷಿ & ತೋಟಗಾರಿಕೆ ವಿಶ್ವವಿದ್ಯಾಲಯ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿಮಾನ ನಿಲ್ದಾಣ, ಅತ್ಯಾಧುನಿಕ ಬಸ್‌ನಿಲ್ದಾಣ, ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಹಲವಾರು ರಸ್ತೆ, ಸೇತುವೆ, ರೈಲ್ವೆ ಸಂಪರ್ಕಗಳ ಜೊತೆಗೆ ಆಯುಷ್ ವಿಶ್ವವಿದ್ಯಾಲಯ ಮತ್ತೊಂದು ಮೈಲಿಗಲ್ಲಾಗಿ ಉಳಿಯಲಿದೆ ಎಂದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಅಸಂಖ್ಯಾತ ಶಿವ-ಶರಣರ ಸಾಧು-ಸಂತರ ನೆಲೆವೀಡಾಗಿರುವ ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಶಿಕ್ಷಣ, ಸಂಸ್ಕೃತಿ, ಶಿಲಾಶಾಸನ, ಪ್ರಾಚೀನ ಸ್ಮಾರಕಗಳು, ಕೋಟೆ ಕೊತ್ತಲುಗಳು, ಪೌರಾಣಿಕ-ಧಾರ್ಮಿಕ ವಿಷಯಗಳಂತಹ ಅನೇಕ ಕಾರಣಗಳಿಂದಾಗಿ ಖ್ಯಾತವಾಗಿರುವಂತೆಯೇ, ಪರಂಪರಾಗತ ವೈದ್ಯಪದ್ಧತಿಗಳು, ಆಯುರ್ವೇದ ವೈದ್ಯವಿಜ್ಞಾನದ ನಿರಂತರ ಬಳಕೆಯ ತಾಣವೂ ಆಗಿರುವುದು ಸರ್ವರಿಗೂ ತಿಳಿದಿರುವ ಸಂಗತಿಯಾಗಿದೆ ಎಂದವರು ತಿಳಿಸಿದ್ದಾರೆ.

ಸುಮಾರು ಐದು ಸಾವಿರ ವರ್ಷಗಳ ಹಿಂದೆ ಚರಕ-ಸುಶ್ರುತ-ವಾಗ್ಭಟಾದಿ ಮಹಾಮುನಿ ಪ್ರಣೀತವಾದ ಆಯುರ್ವೇದ ವೈದ್ಯವಿಜ್ಞಾನವು ಜನಸಾಮಾನ್ಯರಲ್ಲಿ ನಂಬಿಕೆ-ಶ್ರದ್ಧೆಗಳು ಕಿಂಚಿತ್ತೂ ಕಡಿಮೆಯಾಗದೆ ಹಾಗೂ ಯಾವುದೇ ಅಡ್ಡಪರಿಣಾಮಗಳಿಲ್ಲದೆ, ತನ್ನ ಅಸ್ತಿತ್ವವನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದವರು ತಿಳಿಸಿದ್ದಾರೆ.

ಆಯುರ್ವೇದ ವೈದ್ಯಪದ್ಧತಿಗಳ ಸಂಶೋಧನೆ-ಸಮನ್ವಯಕ್ಕಾಗಿಯೇ ಪ್ರತ್ಯೇಕ ವಿವಿ ಅಗತ್ಯತೆಗೆ ಪ್ರಮುಖ ಕಾರಣ:
ಕರ್ನಾಟಕ ರಾಜ್ಯವೊಂದರಲ್ಲಿಯೇ 4 ಸರ್ಕಾರಿ ಮತ್ತು ಸುಮಾರು 70ಕ್ಕೂ ಹೆಚ್ಚಿನ ಖಾಸಗಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳಿದ್ದು, ಇವುಗಳಿಂದ ಕರ್ನಾಟಕ ರಾಜ್ಯದಲ್ಲಿ ಪ್ರತಿ ವರ್ಷ ಕನಿಷ್ಟ 4000 ಆಯುರ್ವೇದ ವೈದ್ಯ ಪದವೀಧರರು ಹೊರಬರುತ್ತಿದ್ದಾರೆ. ಪ್ರಸ್ತುತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಡಿಯಲ್ಲಿ ಈ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿರುವ ಅವರು, ಆಗುಂಬೆ ಮಳೆಕಾಡಿನಲ್ಲಿ ಬೆಳೆಯುವ ವಿವಿಧ ಜಾತಿಯ ಸಸ್ಯೌಷಧಿಗಳು, ಪಶ್ಚಿಮಘಟ್ಟದ ಸೆರಗಿನಲ್ಲಿಯೇ ಲಭ್ಯವಿರುವ ಬಗೆಬಗೆಯ ವನೌಷಧಿಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುವ ಕಾರಣ ಈ ವಿಶ್ವವಿದ್ಯಾಲಯದ ಆರಂಭಕ್ಕೆ ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದವರು ತಿಳಿಸಿದ್ದಾರೆ.

ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಆಗಲಿರುವ ಪ್ರಯೋಜನಗಳು :
ಒಂದು ವಿಶ್ವವಿದ್ಯಾಲಯದ ಸ್ಥಾಪನೆಯಿಂದ ಕನಿಷ್ಟ 500 ಜನರಿಗೆ ನೇರ ಮತ್ತು ಪರೋಕ್ಷವಾಗಿ ಕನಿಷ್ಟ 5000-6000 ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ. ವಿಶ್ವವಿದ್ಯಾಲಯದಲ್ಲಿ ಔಷಧೀಯ ಉತ್ಪಾದನಾ ಘಟಕವನ್ನು ಆರಂಭಿಸಿದಲ್ಲಿ ಸ್ಥಳೀಯ ಜನರಿಗೆ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲು ಸಾಧ್ಯವಾಗಲಿದೆ. ಗ್ರಾಮೀಣ ಜನತೆಗೆ ಉತ್ತಮ ಗುಣಮಟ್ಟದ ಔಷಧೀಯ ಸಸ್ಯಗಳನ್ನು ಬೆಳೆಸಲು ತರಬೇತಿ ನೀಡಿ, ಸ್ಥಳೀಯವಾಗಿಯೇ ಮಾರುಕಟ್ಟೆಯನ್ನು ಒದಗಿಸಿ, ತನ್ಮೂಲಕ ರೈತಾಪಿ ವರ್ಗದ ಜನತೆಯ ಆರ್ಥಿಕ ಸಂಕಷ್ಟವನ್ನು ದೂರ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದವರು ತಿಳಿಸಿದ್ದಾರೆ.

ನಮ್ಮ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಂಶೋಧನಾರ್ಥಿಗಳಾಗಿ ಅನ್ಯ ರಾಜ್ಯದೆಡೆಗೆ ವಲಸೆ ಹೋಗುವುದು ತಪ್ಪಲಿದೆ ಅಲ್ಲದೆ ಪಶ್ಚಿಮ ಘಟ್ಟಗಳ ನಿಸರ್ಗ ಸಹಜ ಔಷಧೀಯ ಸಸ್ಯಗಳ ಲಭ್ಯತೆಯಿಂದಾಗಿ ಅತ್ಯುತ್ತಮ ಔಷಧಿಗಳ ಸಂಯೋಜನೆಗೆ ಸಹಕಾರಿಯಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ತಮ ಔಷಧಿಗಳ ಉತ್ಪಾದನೆಗೊಳ್ಳಲಿದೆ ಮಾತ್ರವಲ್ಲ ಸಂಶೋಧನಾ ಚಟುವಟಿಕೆಗಳಿಂದಾಗಿ ಅಂತರಾಷ್ಟ್ರೀಯ ಮಟ್ಟದ ಮಾನ್ಯತೆಗೆ ಸಹಕಾರಿಯಾಗಲಿದೆ ಎಂದವರು ತಿಳಿಸಿದ್ದಾರೆ.

ಇಡಿ ದಕ್ಷಿಣ ಭಾರತದ ಮೊಟ್ಟ ಮೊದಲ ಆಯುಷ್ ವಿಶ್ವವಿದ್ಯಾಲಯ ಇದಾಗಿರಲಿದ್ದು, ಈಗಾಗಲೇ ಸೋಗಾನೆ ವಿಮಾನ ನಿಲ್ದಾಣದ ಸಮೀಪ 100 ಎಕರೆ ಭೂಮಿಯನ್ನು ಆಯುಷ್ ಇಲಾಖೆಗೆ ಕಾಯ್ದಿರಿಸಲಾಗಿದೆ. ಸದರಿ ಆಯುಷ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಕಾರ್ಯಾರಂಭಗೊಳಿಸಿದಲ್ಲಿ, ಆಯುರ್ವೇದವನ್ನು ಜಗತ್ತಿನೆಲ್ಲೆಡೆ ಪಸರಿಸಲು ಅನುವು ಮಾಡಿಕೊಟ್ಟ ಖ್ಯಾತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಇಂತಹ ಒಂದು ಸುವರ್ಣಾವಕಾಶವನ್ನು ಕಾರ್ಯರೂಪಕ್ಕೆ ತಂದು ಮಲೆನಾಡಿಗರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ, ಅತ್ಯಂತ ಪ್ರಾಚೀನ, ಚಿರಪರಿಚಿತ, ಶ್ರೇಷ್ಟ ಹಾಗೂ ಮೌಲ್ಯಯುತವಾದ ಆಯುರ್ವೇದ ವೈದ್ಯಪದ್ಧತಿಗಳ ಉಳಿವು-ಬೆಳವಣಿಗೆಗೆ ಕಾರಣರಾದವರಲ್ಲಿ ಅಗ್ರಮಾನ್ಯರಾಗಿ ಯಡಿಯೂರಪ್ಪನವರನ್ನು ಗುರುತಿಸಲಾಗುವುದೆಂದವರು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ತರ ಕಾಲದಲ್ಲಿ ಸರ್ಕಾರವು ಒಂದೇ ಒಂದು ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಿತ್ತು. ಅದುವರೆಗೂ 3 ಸರ್ಕಾರಿ, 5 ಅನುದಾನಿತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ತರುವಾಯ ಎರಡನೇ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಲು 2008ರ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು. ಪ್ರಸ್ತುತ ಸುಮಾರು 6 ದಶಕಗಳ ನಂತರ ರಾಜ್ಯದಲ್ಲಿ ೨2ನೇ ಕಾಲೇಜಿಗೆ ನಾಂದಿ ಹಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಪ್ರಸ್ತುತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಾರ್ಯವ್ಯಾಪ್ತಿಯಲ್ಲಿರುವ ರಾಜ್ಯದ 75 ಆಯುರ್ವೇದ, 4 ಯೋಗ ಮತ್ತು ನಿಸರ್ಗ ಚಿಕಿತ್ಸೆ, 5 ಯುನಾನಿ, ಸಿದ್ಧ, 14 ಹೋಮಿಯೋಪಥಿ ಮಹಾವಿದ್ಯಾಲಯಗಳ ಆಡಳಿತ ವ್ಯವಸ್ಥೆಯ ಕೇಂದ್ರ ಬಿಂದು ಇನ್ನು ಮುಂದೆ ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿರುವ ನೂತನ ಆಯುಷ್ ವಿಶ್ವವಿದ್ಯಾಲಯದ ಪರಿಧಿಯಲ್ಲಿ ಬರಲಿವೆ ಎಂದವರು ತಿಳಿಸಿದ್ದಾರೆ.

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯವು ಶಿವಮೊಗ್ಗ ನಗರದಲ್ಲಿ ಸ್ಥಾಪನೆ ಮಾಡಲು ಅಂದಿನ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಯಡಿಯೂರಪ್ಪನವರ ಆಸಕ್ತಿ ಮತ್ತು ಛಲ, ಅಂದಿನ ವಿಧಾನ ಪರಿಷತ್ ಸಭಾಪತಿಗಳಾಗಿದ್ದ ಡಿ.ಎಚ್. ಶಂಕರಮೂರ್ತಿಯವರು, ಶಿವಮೊಗ್ಗ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಆಶೋಕ್ ನಾಯ್ಕ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳ ನಿರಂತರ ಸಹಕಾರದಿಂದ ಇಂದು ಶಿವಮೊಗ್ಗ ನಗರದಲ್ಲಿ ದಕ್ಷಿಣ ಭಾರತದ ಪ್ರಪ್ರಥಮ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆಯಾಗಲು ಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ.

ಕೆಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಕ್ಕಾಗಿ ನೆನಗುದಿಗೆ ಬಿದ್ದಿದ್ದ ಈ ಪ್ರಸ್ತಾವನೆಯನ್ನು ಬೆಳಗಾವಿ ಅಧಿವೇಶನದಲ್ಲಿ ಪುನರ್ ಮಂಡಿಸುವಂತೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಒತ್ತಡವನ್ನು ತಂದು ಹಾಗೂ ಯಡಿಯೂರಪ್ಪರವರ ಒತ್ತಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದೆ. ಆಯುಷ್ ವಿಶ್ವವಿದ್ಯಾಲಯವನ್ನು ಸ್ಪಾಪಿಸಲು ಕಾರಣಕರ್ತರಾದ ಎಲ್ಲಾ ಮಹನೀಯರಿಗೆ ವೈಯಕ್ತಿಕವಾಗಿ ಹಾಗೂ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayush DepartmentAyush UniversityCM Basavaraja BommaiKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಆಯುಷ್ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share258Tweet123Send
Previous Post

ಫ್ರೂಟ್ಸ್ ತಂತ್ರಾಂಶ ಬಳಸಿಕೊಂಡು ರೈತರಿಗೆ ಸಾಲ ಸೌಲಭ್ಯ ಒದಗಿಸಿ: ಜಿಪಂ ಸಿಇಓ ವೈಶಾಲಿ ಸೂಚನೆ

Next Post

ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ಡಿ.ಎಸ್. ಅರುಣ್‌ಗೆ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ಡಿ.ಎಸ್. ಅರುಣ್‌ಗೆ ಸನ್ಮಾನ

ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ಡಿ.ಎಸ್. ಅರುಣ್‌ಗೆ ಸನ್ಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL